ಸುಧೀರ್ ಅಂಗೂರ್ ಮಾಲೀಕತ್ವದ ಬೆಂಗಳೂರಿನ ಪ್ರತಿಷ್ಠಿತ ಅಲಯನ್ಸ್ ಯುನಿವರ್ಸಿಟಿಯನ್ನು ರಾಜಕಾರಣಿಯೊಬ್ಬರಿಗೆ ಮಾರಾಟ ಮಾಡಲು ಡೀಲ್ ಕುದುರಿಸಿದ ಹಾಗೂ ವಿವಿಗೆ ಗೂಂಡಾಗಳನ್ನು ಕರೆದುಕೊಂಡು ಬಂದು ಬೆದರಿಕೆ ಹಾಕಿದ ಆರೋಪದ ಮೇಲೆ ಮಾಜಿ ಕುಲಪತಿ ಮಧುಕರ್ ಅಂಗೂರ್ ಮತ್ತು ಸ್ಯಾಂಡಲ್ವುಡ್ ನಟಿ ಶ್ರೀಲೀಲಾರ ತಾಯಿ ಸ್ವರ್ಣಲತಾ ವಿರುದ್ಧ ದೂರು ದಾಖಲಾಗಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಬೆಂಗಳೂರು ಗ್ರಾಮಾಂತರ ಎಸ್ಪಿ ಮಲ್ಲಿಕಾರ್ಜುನ್, ಅಲಯನ್ಸ್ ವಿವಿಯಲ್ಲಿ ಮಧುಕರ್ ಗಲಾಟೆ ಮಾಡಿದ್ದಾರೆ. ಬಲವಂತವಾಗಿ ವಿವಿಯ ಗೇಟ್ ತೆಗೆದು ಒಳನುಗ್ಗಿದ್ದಾರೆ.
5-6 ಜನರ ಜೊತೆ ಹೋಗಿ ಅಲಯನ್ಸ್ ವಿವಿ ನಮಗೆ ಸೇರಿದ್ದು ಎಂದು ಮಧುಕರ್ ಗಲಾಟೆ ನಡೆಸಿದ್ದಾರೆ ಎಂದು ಆರೋಪಿಸಿ ರಿಜಿಸ್ಟ್ರಾರ್ ನಿವೇದಿತಾ ಜೈನ್ ಆನೇಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ವಿವರಿಸಿದರು. ಎಚ್ ಎಸ್ ಮುದ್ದೇಗೌಡರ ಪುತ್ರ- ಕಿರುತೆರೆ ಕಲಾವಿದ ಮಂಡ್ಯ ರವಿ ಪ್ರಸಾದ್ ಇನ್ನಿಲ್ಲ
ವಿಚಾರಣೆ ಬಳಿಕ
ಈ ದೂರಿನಲ್ಲಿ 40-50 ಜನ ಬೌನ್ಸರ್ ಇದ್ದರೆಂದು ತಿಳಿಸಿದ್ದಾರೆ. 4 ಶಸ್ತ್ರಾಸ್ತ್ರ ಇದ್ದವೆಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಮಧುಕರ್ ಅಂಗೂರ್ ಸೇರಿ 15 ಜನರನ್ನು ವಶಕ್ಕೆ ಪಡೆದಿದ್ದೇವೆ. ಕೂಲಂಕುಷವಾಗಿ ವಿಚಾರಣೆ ಬಳಿಕ ಸತ್ಯಾಂಶ ಗೊತ್ತಾಗುತ್ತೆ ಎಂದು ಹೇಳಿದ್ದಾರೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ