ಸಂಸದ ಪ್ರತಾಪ್ ಸಿಂಹ ಹಾಗೂ ಸಂಸದೆ ಸುಮಲತಾ ನಡುವಿನ ವಾಕ್ಸಮರ ಮತ್ತೆ ಮುಂದುವರೆದಿದೆ. ಪ್ರತಾಪ್ ಸಿಂಹ ಅವರನ್ನು ಪೇಟೆ ರೌಡಿಗೆ ಹೋಲಿಸಿ ಮಾತನಾಡಿದ ಸುಮಲತಾ ಅವರಿಗೆ ಪ್ರತಾಪ್ ಸಿಂಹ ಮತ್ತೆ ತಿರುಗೇಟು ನೀಡಿದ್ದಾರೆ.
“ಸುಮಲತಾ ಹೇಳಿಕೆಯನ್ನು ಸೀರಿಯಸ್ ಆಗಿ ತಗೋಬೇಡಿ. ಸುಮಲತಾ ಸಿನಿಮಾ ಜಗತ್ತಿನ ಬಣ್ಣದ ಲೋಕದಿಂದ ಬಂದವರು. ಮಾಧ್ಯಮದವರ ಪ್ರಶ್ನೆಗೆ ನಾಗರಹಾವು ಸಿನಿಮಾ ಜಲೀಲ ನೆನಪಾಗಿ ಡೈಲಾಗ್ ಹೊಡೆದಿರ್ತಾರೆ. ನೀವು ಅದನ್ನು ಸೀರಿಯಸ್ ಆಗಿ ತೆಗೆದುಕೊಳ್ಳಬೇಡಿ” ಎಂದು ಹೇಳಿದ್ದಾರೆ.
ಮಂಡ್ಯ ಜಿಲ್ಲೆಯ ಯಾವುದೇ ಕೆಲಸ ಇದ್ದರೂ ನನಗೆ ಹೇಳಿ, ಆ ಯಮ್ಮ ಏನೂ ಕೆಲಸ ಮಾಡುವುದಿಲ್ಲ ಎಂದು ಸಂಸದೆ ಸುಮಲತಾ ಅವರನ್ನು ಪ್ರತಾಪ್ ಸಿಂಹ ಟೀಕಿಸಿ ಮಾತನಾಡಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದಕ್ಕೆ ಸೋಮವಾರ ತಿರುಗೇಟು ನೀಡಿದ್ದ ಸುಮಲತಾ, “ಪ್ರತಾಪ್ ಸಿಂಹ ಅವರು ನಮ್ಮ ಕ್ಷೇತ್ರದ ಪಕ್ಕದ ಕ್ಷೇತ್ರದ ಸಂಸದರು. ಅವರು ಎರಡು ಬಾರಿ ಸಂಸದರಾಗಿದ್ದಾರೆ. ಅದನ್ನು ಅರಿತು ಮಾತನಾಡ ಬೇಕಾಗುತ್ತದೆ. ಪೇಟೆ ರೌಡಿಯ ತರಹ ಅವರು ಮಾತನಾಡಬಾರದು” ಎಂದು ಹೇಳಿದ್ದರು.
ಇದೀಗ ಸುಮಲತಾ ಹೇಳಿಕೆಗೆ ಪ್ರತಾಪ್ ಸಿಂಹ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. “ಪಾಳೇಗಾರಿಕೆ ಮನಸ್ಥಿತಿ ಪ್ರಜಾ ಪ್ರಭುತ್ವದಲ್ಲಿ ನಡೆಯೋದಿಲ್ಲ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಯಾರು ಏನು ಬೇಕಾದರೂ ಆಗಬಹುದು. ನಾನು, ನನ್ನ ಕುಟುಂಬ ಅನ್ನುವ ಪಾಳೇಗಾರಿಕೆ ನಡೆಯೋದಿಲ್ಲ. ನಾನು ಯಾವ ಸ್ಟಾರ್ ಅಲ್ಲ. ನನಗೆ ಯಾವ ಅಭಿಮಾನಿಯೂ ಬಂದು ಓಟು ಹಾಕೋಲ್ಲ. ನನಗೆ ನನ್ನ ಕೆಲಸವೇ ಕಾಯೋದು. ಹಾಗಾಗಿ ನನಗೆ ಕೆಲಸದ ಮೇಲೆ ನಂಬಿಕೆಯಿದೆ” ಎಂದಿದ್ದಾರೆ.
“10 ಪಥದ ಹೆದ್ದಾರಿ ಕಾಮಗಾರಿ ವಿಚಾರದಲ್ಲಿ ಮಂಡ್ಯ ಜನರು ಅಡ್ಡ ಹಾಕಿ ನನ್ನನ್ನು ಕೇಳಿದರು. ಆಗ ನಾನು ಅಂಡರ್ ಪಾಸ್ ಹಾಗೂ ಫ್ಲೈ ಓವರ್ ಮಾಡಿಸಿಕೊಡುವ ಭರವಸೆ ಕೊಟ್ಟೆ. ಇದು ಮಂಡ್ಯ – ರಾಮನಗರ ಮೈಸೂರು ಜಿಲ್ಲೆಯ ಜನರಿಗೆ ಅನುಕೂಲ ಆಗಲಿದೆ. ಅದಕ್ಕಾಗಿ ನಾನು ಭರವಸೆ ಕೊಟ್ಟೆನೇ ವಿನಃ ಬೇರೆ ಮಾತನಾಡಿಲ್ಲ. 10 ಪಥದ ಹೆದ್ದಾರಿ ಅನುಕೂಲ ಮಾಡೋದಷ್ಟೆ ನನ್ನ ಉದ್ದೇಶ. ಅದನ್ನು ಬಿಟ್ಟು ಬೇರೇನೂ ನನಗೆ ಗೊತ್ತಿಲ್ಲ” ಎಂದು ಹೇಳಿದ್ದಾರೆ.
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
This website uses cookies.
Leave a Comment