ತುಮಕೂರು ಸಿದ್ದಗಂಗಾ ಮಠದ ತ್ರಿವಿಧ ದಾಸೋಹಿ, ಶತಾಯುಷಿ ಶಿವಕುಮಾರ ಶ್ರೀಗಳು ಶಿವೈಕ್ಯರಾಗಿ ಇಂದಿಗೆ ಮೂರು ವರ್ಷ.
ಕೋವಿಡ್ ಉಲ್ಬಣದಿಂದಾಗಿ ಅತ್ಯಂತ ಸರಳವಾಗಿ ಲಿಂಗೈಕ್ಯ ಶ್ರೀಗಳ ಸ್ಮರಣೆ ಮಾಡಲು ಶ್ರೀಮಠದಲ್ಲಿ ಸಿದ್ಧತೆ ನಡೆದಿದೆ.
ಸಿದ್ದಲಿಂಗ ಸ್ವಾಮಿಗಳಿಂದ ಹಳೇ ಮಠದಲ್ಲಿ ಇಷ್ಟಲಿಂಗ ಪೂಜೆ ನೆರವೇರಿಸಿದ್ದಾರೆ. ಆ ಬಳಿಕ ಬೆಳಗ್ಗೆ ಪ್ರಾತಃಕಾಲದಲ್ಲಿ ಶ್ರೀಗಳ ಗದ್ದಿಗೆಗೆ ಅಭಿಷೇಕ, ಪೂಜೆ, ಮಹಾಮಂಗಳಾರತಿ ನಡೆಯಿತು.
ಈ ಪೂಜೆ ಹೊರತುಪಡಿಸಿದರೆ ಯಾವುದೇ ವೇದಿಕೆ ಕಾರ್ಯಕ್ರಮ, ಉತ್ಸವ, ಮೆರವಣಿಗೆ ಇರೋದಿಲ್ಲ. ಇತ್ತ ಈ ದಿನವನ್ನು ಸರ್ಕಾರ ದಾಸೋಹ ದಿನ ಎಂದು ಆಚರಣೆ ಮಾಡುವಂತೆ ಘೋಷಣೆ ಮಾಡಿದೆ.
ಸಿಎಂ ಬೊಮ್ಮಾಯಿ ಇಂದು 9.30 ಕ್ಕೆ ಮಠಕ್ಕೆ ಭೇಟಿ ನೀಡಿ ಶ್ರೀಗಳ ಗದ್ದಿಗೆ ದರ್ಶನ ಪಡೆದು ದೀಪ ಬೆಳಗಿಸಿ ಸಾಂಕೇತಿಕ ದಾಸೋಹ ದಿನವನ್ನು ಉದ್ಘಾಟನೆ ಮಾಡಲಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು