ಮೈಸೂರಿನ ದಟ್ಟಗಳ್ಳಿಯ ಸಾ ರಾ ಮಹೇಶ್ ಕಲ್ಯಾಣ ಮಂಟಪ, ಆರ್.ಟಿ.ನಗರ, ಯಡಹಳ್ಳಿ, ಲಿಂಗಾಂಬುದಿಪಾಳ್ಯ ಸೇರಿದಂತೆ ಶಾಸಕ ಸಾ. ರಾ. ಮಹೇಶ್ ವಿರುದ್ದ ಇರುವ ಎಲ್ಲಾ ಭೂ ಹಗರಣದ ಒತ್ತುವರಿ ಆರೋಪಗಳ ಬಗ್ಗೆಯೂ ಸರ್ವೇ ಮಾಡುವಂತೆ ಸೂಚಿಸಲಾಗಿದೆ.
ಈ ಆದೇಶದಿಂದಾಗಿ ಭೂ ಅಕ್ರಮ ಹಗರಣ ಆರೋಪಕ್ಕೆ ಮತ್ತೆ ಮರು ಜೀವ ಬಂದಂತಾಗಿದೆ.
ಸಾ.ರಾ.ಮಹೇಶ್ ವಿರುದ್ಧ IAS ಅಧಿಕಾರಿ ರೋಹಿಣಿ ಸಿಂಧೂರಿ ಮಾಡಿದ್ದ ಆರೋಪದ ವಿಚಾರವಾಗಿ ಪುನರ್ ಸರ್ವೇ ಮಾಡಲು ಭೂ ದಾಖಲೆಗಳ ಇಲಾಖೆ ಆಯುಕ್ತ ಆದೇಶ ಹೊರಡಿಸಿದ್ದಾರೆ
ಸಿಂಧೂರಿ ಗೆ 6 ಕೋಟಿ ರು ಕಿಕ್ ಬ್ಯಾಕ್ ?
ರೋಹಿಣಿ ಸಿಂಧೂರಿ ಮೇಲೆ 14 ಲಕ್ಷ ಬ್ಯಾಗ್ ಖರೀದಿಯಲ್ಲಿ 6 ಕೋಟಿ ಭ್ರಷ್ಟಾಚಾರ ಆರೋಪ ಮಾಡಿರುವ ಸಾರಾ ಮಹೇಶ್ ಅವರು ನಿನ್ನೆ ಸಿಎಂಗೆ ದೂರು ನೀಡಿದ್ದರು.
ಈ ದೂರಿನ ಬೆನ್ನಲ್ಲೇ ಆಯುಕ್ತರ ಆದೇಶದಿಂದ ಶಾಸಕ ಸಾ.ರಾ. ಮಹೇಶ್ ಮತ್ತು ರೋಹಿಣಿ ಸಿಂಧೂರಿ ನಡುವೆ ಮತ್ತೆ ಜಟಾಪಟಿ ಶುರುವಾಗಿದೆ.
ಈ ಮೊದಲು ಸರ್ವೇ ನಡೆಸಿ ಒತ್ತುವರಿ ಆಗಿಲ್ಲ ಅಂತ ವರದಿ ಕೊಟ್ಟಿರುವ ಪ್ರಾದೇಶಿಕ ಆಯುಕ್ತರು. ಈಗ ಮತ್ತೆ ಸರ್ವೇ ಮಾಡಲು ಆದೇಶಿಸಿರುವುದು ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಡುತ್ತಿದೆ.
ಸಾ. ರಾ. ಮಹೇಶ್ ಹಣಿಯಲು ಐಎಎಸ್ ಅಧಿಕಾರಿಗಳು ಒಂದಾಗಿ ಈ ಸರ್ವೆ ತಂತ್ರ ರೂಪಿಸಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದೆ.
ಸಾ ರಾ ಮಹೇಶ್ ಕ್ಲೀನ್ ಚಿಟ್ ಗೆ ಬ್ರೇಕ್ ಹಾಕಲು ಮುಂದಾದ ಸರ್ವೇ ಇಲಾಖೆ ಆಯುಕ್ತರು, ಮೈಸೂರು ಅಧಿಕಾರಿಗಳನ್ನು ಹೊರಗಿಟ್ಟು ಸರ್ವೇ ಕಾರ್ಯ ಪುನರ್ ಆರಂಭಿಸುವಂತೆ ಸೂಚಿಸಿ 10 ದಿನಗಳಲ್ಲಿ ವರದಿ ಸಲ್ಲಿಸುವಂತೆ ಆದೇಶಿಸಿದ್ದಾರೆ ಎನ್ನಲಾಗಿದೆ.
ಇನ್ನು ಸರ್ವೇ ತಂಡದಲ್ಲಿ ಭೂದಾಖಲೆ ಗಳ ಉಪ ನಿರ್ದೇಶಕರಾದ ಮಂಡ್ಯದ ಬಿ.ಜಿ.ಉಮೇಶ್, ತುಮಕೂರಿನ ಸುಜಯ್ ಕುಮಾರ್, ದಾವಣಗೆರೆಯ ಟಿ.ಕೆ.ಲೋಹಿತ್ರನ್ನು ನೇಮಕ ಮಾಡಲಾಗಿದೆ.
ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More
ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
This website uses cookies.
Leave a Comment