Trending

ಭೂ ಅಕ್ರಮಗಳ ಮರು ಸರ್ವೇಗೆ ಆಯುಕ್ತರ ಆದೇಶ – ಸಾ ರಾ ಗೆ ಸಂಕಷ್ಟ

ಮೈಸೂರಿನ ದಟ್ಟಗಳ್ಳಿಯ ಸಾ ರಾ ಮಹೇಶ್ ಕಲ್ಯಾಣ ಮಂಟಪ, ಆರ್.ಟಿ.ನಗರ, ಯಡಹಳ್ಳಿ, ಲಿಂಗಾಂಬುದಿಪಾಳ್ಯ ಸೇರಿದಂತೆ ಶಾಸಕ ಸಾ. ರಾ. ಮಹೇಶ್ ವಿರುದ್ದ ಇರುವ ಎಲ್ಲಾ ಭೂ ಹಗರಣದ ಒತ್ತುವರಿ‌ ಆರೋಪಗಳ ಬಗ್ಗೆಯೂ ಸರ್ವೇ ಮಾಡುವಂತೆ ಸೂಚಿಸಲಾಗಿದೆ.

ಈ ಆದೇಶದಿಂದಾಗಿ ಭೂ ಅಕ್ರಮ ಹಗರಣ ಆರೋಪಕ್ಕೆ ಮತ್ತೆ ಮರು ಜೀವ ಬಂದಂತಾಗಿದೆ.

ಸಾ.ರಾ.ಮಹೇಶ್ ವಿರುದ್ಧ IAS ಅಧಿಕಾರಿ ರೋಹಿಣಿ ಸಿಂಧೂರಿ ಮಾಡಿದ್ದ ಆರೋಪದ ವಿಚಾರವಾಗಿ ಪುನರ್ ಸರ್ವೇ ಮಾಡಲು ಭೂ ದಾಖಲೆಗಳ ಇಲಾಖೆ ಆಯುಕ್ತ ಆದೇಶ ಹೊರಡಿಸಿದ್ದಾರೆ

ಸಿಂಧೂರಿ ಗೆ 6 ಕೋಟಿ ರು ಕಿಕ್ ಬ್ಯಾಕ್ ?

ರೋಹಿಣಿ ಸಿಂಧೂರಿ ಮೇಲೆ 14 ಲಕ್ಷ ಬ್ಯಾಗ್​​ ಖರೀದಿಯಲ್ಲಿ 6 ಕೋಟಿ ಭ್ರಷ್ಟಾಚಾರ ಆರೋಪ ಮಾಡಿರುವ ಸಾರಾ ಮಹೇಶ್ ಅವರು ನಿನ್ನೆ ಸಿಎಂಗೆ ದೂರು ನೀಡಿದ್ದರು.

ಈ ದೂರಿನ ಬೆನ್ನಲ್ಲೇ ಆಯುಕ್ತರ ಆದೇಶದಿಂದ ಶಾಸಕ ಸಾ.ರಾ. ಮಹೇಶ್ ಮತ್ತು ರೋಹಿಣಿ ಸಿಂಧೂರಿ ನಡುವೆ ಮತ್ತೆ ಜಟಾಪಟಿ ಶುರುವಾಗಿದೆ.

ಈ ಮೊದಲು ಸರ್ವೇ ನಡೆಸಿ ಒತ್ತುವರಿ ಆಗಿಲ್ಲ ಅಂತ ವರದಿ ಕೊಟ್ಟಿರುವ ಪ್ರಾದೇಶಿಕ ಆಯುಕ್ತರು. ಈಗ ಮತ್ತೆ ಸರ್ವೇ ಮಾಡಲು ಆದೇಶಿಸಿರುವುದು ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಡುತ್ತಿದೆ.

ಸಾ. ರಾ. ಮಹೇಶ್ ಹಣಿಯಲು ಐಎಎಸ್ ಅಧಿಕಾರಿಗಳು ಒಂದಾಗಿ ಈ ಸರ್ವೆ ತಂತ್ರ ರೂಪಿಸಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದೆ.

ಸಾ ರಾ ಮಹೇಶ್ ಕ್ಲೀನ್ ಚಿಟ್ ಗೆ ಬ್ರೇಕ್ ಹಾಕಲು ಮುಂದಾದ ಸರ್ವೇ ಇಲಾಖೆ ಆಯುಕ್ತರು, ಮೈಸೂರು ಅಧಿಕಾರಿಗಳನ್ನು ಹೊರಗಿಟ್ಟು ಸರ್ವೇ ಕಾರ್ಯ ಪುನರ್​ ಆರಂಭಿಸುವಂತೆ ಸೂಚಿಸಿ 10 ದಿನಗಳಲ್ಲಿ ವರದಿ ಸಲ್ಲಿಸುವಂತೆ ಆದೇಶಿಸಿದ್ದಾರೆ ಎನ್ನಲಾಗಿದೆ.

ಇನ್ನು ಸರ್ವೇ ತಂಡದಲ್ಲಿ ಭೂದಾಖಲೆ ಗಳ ಉಪ ನಿರ್ದೇಶಕರಾದ ಮಂಡ್ಯದ ಬಿ.ಜಿ.ಉಮೇಶ್, ತುಮಕೂರಿನ ಸುಜಯ್ ಕುಮಾರ್, ದಾವಣಗೆರೆಯ ಟಿ.ಕೆ.ಲೋಹಿತ್​ರನ್ನು ನೇಮಕ ಮಾಡಲಾಗಿದೆ.

Team Newsnap
Leave a Comment
Share
Published by
Team Newsnap

Recent Posts

ಕರ್ತವ್ಯಕ್ಕೆ ತೆರಳುತ್ತಿದ್ದ ಚುನಾವಣಾ ಸಿಬ್ಬಂದಿ ಹೃದಯಾಘಾತದಿಂದ ಸಾವು

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More

May 6, 2024

ಪೋಷಕರ ಕಣ್ಣೆದುರೇ ಮಕ್ಕಳು ನೀರುಪಾಲು

ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More

May 6, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 6, 2024

ಹಾಸನ ಅಶ್ಲೀಲ ವಿಡಿಯೋಗಳನ್ನು ಹಂಚುವುದು ಶಿಕ್ಷಾರ್ಹ ಅಪರಾಧ: ಎಸ್‌ಐಟಿ

ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More

May 6, 2024

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024