Main News

ಸಮುದಾಯದ ಸರ್ವಾಂಗೀಣ ಏಳಿಗೆಗೆ ಬದ್ಧ:ಬಿ.ಸುಬ್ರಹ್ಮಣ್ಯ

  • ಕುರುಬ ಸಂಘದ ನೂತನ ಅಧ್ಯಕ್ಷರಾದ ಬಿ.ಸುಬ್ರಹ್ಮಣ್ಯರಿಗೆ ಮೈಸೂರಿನಲ್ಲಿ ಅದ್ಧೂರಿ ಸ್ವಾಗತ

ಕರ್ನಾಟಕ ಪ್ರದೇಶ ಕುರುಬರ ಸಂಘದ ನೂತನ ಪ್ರಭಾರ ಅಧ್ಯಕ್ಷರಾಗಿ ಆಯ್ಕೆಯಾದ ಬಿ.ಸುಬ್ರಹ್ಮಣ್ಯ ಮೈಸೂರಿಗೆ ಮೊದಲ ಬಾರಿಗೆ ಆಗಮಿಸಿದ ಹಿನ್ನೆಲೆ ಸಂಘದ ವತಿಯಿಂದ ಸಾಂಸ್ಕೃತಿಕ ಕಲಾ ತಂಡದಿಂದ ಮೂಲಕ ಅದ್ಧೂರಿಯಾಗಿ ಸ್ವಾಗತಿಸಿ, ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು.

ಬುಧವಾರ ಮೈಸೂರಿನ ಡಿ.ದೇವರಾಜು ಅರಸು ರಸ್ತೆಯ ಶ್ರೀ ಶಿವಾಯ ಮಠದ ಹತ್ತಿರ ಮೆರವಣಿಗೆ ಮೂಲಕ ಸ್ವಾಗತಿಸಿದ ಕುರುಬ ಸಮಾಜದ ಮುಖಂಡರು ಹಾಗೂ ಜಿಲ್ಲಾ ಪದಾಧಿಕಾರಿಗಳು, ಪುಷ್ಪಮಾಲೆಗಳನ್ನು ಹಾಕುವ ಮೂಲಕ ಅಭಿನಂದನೆ ಸಲ್ಲಿಸಿದರು.

ಕುರುಬರಲ್ಲಿ ರಾಜಕೀಯ ಇಚ್ಛಾಶಕ್ತಿ ಕಡಮೆ :

ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅಧ್ಯಕ್ಷರಾದ ಬಿ. ಸುಬ್ರಹ್ಮಣ್ಯ ಅವರು, ರಾಜಕೀಯ ಇಚ್ಛಾಶಕ್ತಿ ಕೊರತೆಯಿಂದ ಕುರುಬ ಸಮುದಾಯ ಎಸ್‌ಟಿಗೆ ಸೇರ್ಪಡೆಯಾಗಿಲ್ಲ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಹೋರಾಟಕ್ಕೆ ಬೆಂಬಲ ನೀಡಿದ್ದಾರೆ. ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕುಲಶಾಸ್ತ್ರೀಯ ಅಧ್ಯಯನಕ್ಕೆ ಶಿಫಾರಸು ಮಾಡಿದ್ದಾರೆ. ಈ ಹೋರಾಟದಲ್ಲಿ ನಮ್ಮ ಬೆನ್ನಿಗೆ ಅವರು ನಿಲ್ಲಲು ಭರವಸೆ ನೀಡಿದ್ದಾರೆ‌ ಎಂದರು.

ಒಗ್ಗೂಡಿಸಿ ಹೋರಾಟ – ಸ್ವಾಮೀಜಿ:

ಕಾಗಿನೆಲೆ ಕನಕ ಗುರುಪೀಠದ ಸ್ವಾಮೀಜಿಗಳು, ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ, ಮಾಜಿ ಸಚಿವರಾದ ಎಚ್.ಎಂ.ರೇವಣ್ಣ, ಎಚ್.ವಿಶ್ವನಾಥ್ ಎಲ್ಲರನ್ನೂ ಭೇಟಿ ಮಾಡುತ್ತೇನೆ. ಒಗ್ಗೂಡಿಸಿ ಈ ಹೋರಾಟವನ್ನು ಮುಂದುವರುತ್ತೇನೆ ಎಂದು ತಿಳಿಸಿದರು.

ಸಮುದಾಯದ ಸರ್ವಾಂಗೀಣ ಏಳಿಗೆಗೆ ನಾನು ಬದ್ಧ. ಜನಾಂಗದ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಅನೇಕ ಸೌಲಭ್ಯಗಳನ್ನು ಒದಗಿಸಲು ಶಕ್ತಿಮೀರಿ ಶ್ರಮಿಸುತ್ತೇನೆ. ಸಮುದಾಯದಲ್ಲಿ ಅನೇಕ ಯುವಕರು ಉನ್ನತ ಅಧಿಕಾರಿಗಳ ಸ್ಥಾನಕ್ಕೇರಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ದುಡಿಯುತ್ತೇನೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ನಿವೃತ್ತ ಪ್ರಾಧ್ಯಾಪಕ ರಂಗರಾಜು ವಹಿಸಿದ್ದರು.ಜಿಲ್ಲಾ ಪಂಚಾಯತ್ ಸದಸ್ಯ ಬೀರಿಹುಂಡಿ ಬಸವಣ್ಣ ಮಾತನಾಡಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ಪ್ರದೇಶ ಕುರುಬರ ಸಂಘದ ನಿರ್ದೇಶಕರುಗಳಾದ ಜೆ.ಗೋಪಿ, ನಾಗರಾಜು, ಅಭಿಲಾಷ್, ಮಾದೇಗೌಡ, ಮಹದೇವು, ಕನಕ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷ ಸಿದ್ದಯ್ಯ, ಬ್ಯಾಂಕ್ ಪುಟ್ಟಸ್ವಾಮಿ, ರಾಜಣ್ಣ, ವಿ.ಸಿ.ಬಸವಣ್ಣ, ರೇವಣ್ಣ, ಆಲಹಳ್ಳಿ ಬಸವಣ್ಣ, ಆಲಹಳ್ಳಿ ನಂಜೇಗೌಡ, ತಾಲ್ಲೂಕು ಕುರುಬ ಸಂಘದ ಅಧ್ಯಕ್ಷ ಶಿವಪ್ಪ ಕೋಟೆ, ಉದ್ಯಮಿ ಬಸವೇಗೌಡ, ಶ್ರೀನಿವಾಸ ಉಪಸ್ಥಿತರಿದ್ದರು.

Team Newsnap
Leave a Comment
Share
Published by
Team Newsnap

Recent Posts

ದರ್ಶನ್ , ಪವಿತ್ರ ಜಾಮೀನು ಮುಂದೂಡಿಕೆ:ಮೂವರಿಗೆ ಜಾಮೀನು ಮಂಜೂರು

ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಮತ್ತು ಎ2 ಆರೋಪಿಯಾಗಿರುವ… Read More

September 23, 2024

ಸೆ. 24 ರಂದು ಯುವ ಸಂಭ್ರಮ ಉದ್ಘಾಟನಾ ಸಮಾರಂಭ

ಮೈಸೂರು: ಸೆ. 24 ರಂದು ಸಂಜೆ 6 ಗಂಟೆಗೆ ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ದಸರಾ ಮಹೋತ್ಸವ -2024 ರ ಯುವ… Read More

September 23, 2024

ದಸರಾ ಚಲನಚಿತ್ರೋತ್ಸವ 2024- ಪೋಸ್ಟರ್ ಬಿಡುಗಡೆ

ಮೈಸೂರು : ನಾಡ ಹಬ್ಬ ಮೈಸೂರು ದಸರಾ ಮಹೋತ್ಸವ 2024 ರ ಹಿನ್ನೆಲೆಯಲ್ಲಿ ದಸರಾ ಚಲನಚಿತ್ರೋತ್ಸವ ಪೋಸ್ಟರ್ ಗಳನ್ನು ಜಿಲ್ಲಾ… Read More

September 23, 2024

ಮೈಸೂರಿನಲ್ಲಿ ಉಚಿತ ಆಟೋ ರಿಕ್ಷಾ ತರಬೇತಿ

ಸ್ವಾವಲಂಬಿ ಸ್ತ್ರೀ ಆರ್ಥಿಕವಾಗಿ ಹಿಂದುಳಿದ ಹಿನ್ನೆಲೆಯ ಅರ್ಹ ಮಹಿಳೆಯರು ಉಚಿತವಾಗಿ ಆಟೋ ರಿಕ್ಷಾ ಚಾಲನಾ ತರಬೇತಿಯನ್ನು ಪಡೆಯಲು ಮತ್ತು ಆದಾಯ… Read More

September 23, 2024

ಶಾಲೆಗಳಿಗೆ 17 ದಿನಗಳ ದಸರಾ ರಜೆ ಘೋಷಣೆ

ಬೆಂಗಳೂರು : ಅಕ್ಟೋಬರ್ 3 ರಿಂದ 20 ತನಕ ಶಿಕ್ಷಣ ಇಲಾಖೆ ಶಾಲಾ ಮಕ್ಕಳಿಗೆ ದಸರಾ ರಜೆ ಘೋಷಿಸಿದ್ದು ,ರಾಜ್ಯದ… Read More

September 23, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 23 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 69,600 ರೂಪಾಯಿ ದಾಖಲಾಗಿದೆ. 24… Read More

September 23, 2024