ಅಭಿವೃದ್ಧಿ ಪ್ರಾಧಿಕಾರಗಳಿಂದ ಸಮುದಾಯದ ಅಭಿವೃದ್ಧಿ ಆಗುತ್ತೆ ಅನ್ನೋ ನಂಬಿಕೆ ಇಲ್ಲ
ಎಲ್ಲಾ ಜಾತಿಗಳಿಗೂ ಪ್ರಾಧಿಕಾರ ಮಾಡಿದರೆ, ರಾಜ್ಯದಲ್ಲಿ ಸಣ್ಣಪುಟ್ಟ ಅಂದ್ರೆ 560 ಜಾತಿಗಳಿವೆ
ಎಲ್ಲದಕ್ಕೂ ಪ್ರಾಧಿಕಾರ ಮಾಡಿದರೆ ಒಳ್ಳೆಯದಲ್ಲವೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಗುರವಾರ ಪ್ರಶ್ನೆ ಮಾಡಿದರು.
ಚನ್ನಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ವೀರಶೈವರ ಪ್ರಾಧಿಕಾರ ರಚನೆಯಾಗಿದೆ, ಒಕ್ಕಲಿಗರ ಪ್ರಾಧಿಕಾರದ ಬಗ್ಗೆ ಕೆಲವರು ಧ್ವನಿ ಎತ್ತಿದ್ದಾರೆ. ಆದರೆ ನಾನು ಈ ವಿಚಾರಗಳಿಗೆ ತಲೆಹಾಕಲು ಬಯಸುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದರು.
ಬಡಜನರ ಬಗ್ಗೆ ಸರ್ಕಾರ ಚಿಂತನೆ ನಡೆಸಲಿ ಎಲ್ಲಾ ಸಮುದಾಯದಲ್ಲೂ ಬಡವರಿದ್ದಾರೆ ಸರ್ಕಾರ ಎಲ್ಲರಿಗೂ ಒಳ್ಳೆಯದು ಮಾಡಲಿ ಎಂದರು.
ಮಂಡ್ಯದಲ್ಲಿ ಡಿಸಿಸಿ ಬ್ಯಾಂಕ್ ಚುನಾವಣೆ ಯಲ್ಲಿ ಬಿಜೆಪಿ – ಜೆಡಿಎಸ್ ಮೈತ್ರಿ ಕುರಿತಂತೆ ವಿವರಣೆ ನೀಡಿದ ಕುಮಾರಸ್ವಾಮಿ, ಕೊಳ್ಳೆಗಾಲದ ಹನೂರಿನಲ್ಲಿ ಕಾಂಗ್ರೆಸ್ – ಬಿಜೆಪಿ ಮೈತ್ರಿಯಾಗಿವೆ. ನವಲಗುಂದದ ಲ್ಲಿಯೂ ಕಾಂಗ್ರೆಸ್ – ಬಿಜೆಪಿ ಮೈತ್ರಿಯಾಗಿವೆ.ಸ್ಥಳೀಯವಾಗಿ ಮೂರು ಪಕ್ಷದವರು ಹೊಂದಾಣಿಕೆಯಾಗ್ತಿದ್ದಾರೆ . ಇದು ಜೆಡಿಎಸ್ ಗೆ ಬಿಜೆಪಿ ಬಗ್ಗೆ ಸಾಫ್ಟ್ ಅನ್ನುವ ವಿಚಾರ ಇಲ್ಲ ಹಾಗೂ ಯಾವುದೇ ದಿಕ್ಸೂಚಿ ಯೂ ಅಲ್ಲ ಎನ್ನುವುದನ್ನು ಗಮನಿಸಬೇಕು ಎಂದರು.
ಈಗ ಕೆಲವು ಬೈಎಲೆಕ್ಷನ್ ಗಳಿವೆ ಅಷ್ಟೇ ಆಗಿವೆ. ಸಾರ್ವತ್ರಿಕ ಚುನಾವಣೆಗೆ ಇನ್ನು ಎರಡೂವರೆ ವರ್ಷ ಕಾಯಬೇಕಿದೆ. ಈಗ ಮೈತ್ರಿ ಯಾವುದೇ ವಿಚಾರವೂ ನಮ್ಮ ಮುಂದಿಲ್ಲ ಎಂದರು
ಬೆಂಗಳೂರು : 10 ವರ್ಷದ ಬಾಲಕಿಗೆ ಚಾಕ್ಲೆಟ್ ಕೊಡಿಸುವುದಾಗಿ ನಂಬಿಸಿ ಕಾಮುಕನೊಬ್ಬ ಅತ್ಯಾಚಾರ ಎಸೆಗಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ… Read More
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ ಎಂದು ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ. ಪ್ಲೆಸ್ ಕ್ಲಬ್… Read More
ನವದೆಹಲಿ ,ಮೇ 20 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,400 ರೂಪಾಯಿ ದಾಖಲಾಗಿದೆ. 24… Read More
ಪ್ರಕರಣದಿಂದ ಸ್ವಾರ್ಥ ರಾಜಕಾರಣಿಗಳಿಗೆ, ಕೆಲ ಮಾಧ್ಯಮಗಳಿಗೆ, ಗಂಜಿ ಗಿರಾಕಿಗಳಿಗೆ ಮಾತ್ರ ಲಾಭ ?! ಬರಗಾಲದಿಂದ ರಾಜ್ಯದಲ್ಲಿ ಆಗಿರುವ ಅನಾಹುತ ,… Read More
ಕುಂದಾಪುರ : ಮೇ 16 ರ ರಾತ್ರಿ ಗೋಪಾಡಿ ಗ್ರಾಮದ ಮೂಡುಗೋಪಾಡಿಯ ನಿವಾಸಿ ಜಯಂತಿ ಶೆಟ್ಟಿ (61) ಅವರ ಮೃತದೇಹ… Read More
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
This website uses cookies.
Leave a Comment