ಬೆಂಗಳೂರು: ಕಂಪನಿಯೊಂದರ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಹಾಗೂ ಮುಖ್ಯ ಕಾರ್ಯನಿರ್ವಾಹಕ (ಸಿಇಒ) ಅವರನ್ನು ಬರ್ಬರವಾಗಿ ಹತ್ಯೆ ಮಾಡಿದ ಬೆಂಗಳೂರಿನ ಅಮೃತಹಳ್ಳಿಯಲ್ಲಿ ನಡೆದಿದೆ.
ಏರೋನಿಕ್ಸ್ ಇಂಟರ್ನೆಟ್ ಕಂಪನಿಯ ಎಂಡಿ ಫಣೀಂದ್ರ ಸುಬ್ರಹ್ಮಣ್ಯ, ಸಿಎಒ ವಿನು ಕುಮಾರ್ ಕೊಲೆಯಾದವರು.
ಈ ಕಂಪನಿಯ ಮಾಜಿ ನೌಕರ ಫೆಲಿಕ್ಸ್ ಎಂಬಾತ ಈ ಜೋಡಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.
ಸ್ಥಳಕ್ಕೆ ಅಮೃತಹಳ್ಳಿ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಏರೋನಿಕ್ಸ್ ಕಂಪನಿಯಿಂದ ಹೊರ ಬಂದ ಫೆಲಿಕ್ಸ್ ತನ್ನದೇ ಸ್ವಂತ ಕಂಪನಿ ಆರಂಭಿಸಿದ್ದ. ತನ್ನ ಉದ್ಯಮಕ್ಕೆ ಹಳೇ ಕಂಪನಿ ಎದುರಾಳಿ ಆಗಿದ್ದರಿಂದ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.
ಕೊಲೆಗೆ ಸಂಚು ಹೂಡಿದ್ದ ಫೆಲಿಕ್ಸ್, ಇಂದು ಸಂಜೆ 4 ಗಂಟೆಗೆ ಚಾಕು ಮತ್ತು ತಲ್ವಾರ್ನಿಂದ ಫಣೀಂದ್ರ ಮತ್ತು ವಿನು ಕುಮಾರ್ ಮೇಲೆ ದಾಳಿ ಮಾಡಿ, ಕೊಲೆಗೈದಿದ್ದ.
ಮೂವರು ಜತೆಯಾಗಿ ಈ ಕೃತ್ಯವೆಸಗಿದ್ದು, ಒಂದು ಕೊಲೆ ತಳಮಹಡಿಯಲ್ಲಿ ಇನ್ನೊಂದು ಕೊಲೆ ಮೂರನೇ ಮಹಡಿಯಲ್ಲಿ ನಡೆದಿದೆ.ಬಸ್ ಚಾಲಕ ಆತ್ಮಹತ್ಯೆ ಯತ್ನ ಪ್ರಕರಣ : ಸಿಐಡಿ ಅಧಿಕಾರಿಗಳ ತಂಡ ನಾಗಮಂಗಲಕ್ಕೆ ಭೇಟಿ
ಪ್ರಕರಣದ ಬಳಿಕ ಆರೋಪಿಗಳು ಕಾಂಪೌಂಡ್ ಹಾರಿ ಪರಾರಿಯಾಗಿದ್ದಾರೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ