Karnataka

ಕೋಲಾರದಿಂದಲೇ ಸ್ಪರ್ಧೆ: ಸಿದ್ದು ಘೋಷಣೆ

ನಾನು ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದು ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ.

ಸಿದ್ದು ಹಲವು ತಿಂಗಳಿಂದ ಕ್ಷೇತ್ರ ಹುಡುಕಾಟದ ಕಸರತ್ತಿಗೆ ತೆರೆಬಿದ್ದಂತಾಗಿದೆ.ಶಬರಿಮಲೆಗೆ ಸ್ಟಾರ್‌ಗಳು, ರಾಜಕಾರಣಿಗಳ ಫೋಟೋ ಹೊತ್ತು ಕೊಂಡು ಹೋದರೆ ಪ್ರವೇಶವಿಲ್ಲ – ತೀರ್ಪು

ಕೋಲಾರದ ಮಿನಿ ಕ್ರೀಡಾಂಗಣದಲ್ಲಿ ಸೋಮವಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಈ ನಿರ್ಧಾರವನ್ನು ಪ್ರಕಟಿಸಿದರು. ಆದರೆ ಹೈಕಮಾಂಡ್ ಒಪ್ಪಿಗೆ ಮೇಲೆ ನನ್ನ ನಿರ್ಧಾರ ಅವಲಂಬಿಸಿದೆ ಎಂದು ಮಾಹಿತಿ ನೀಡಿದ್ದಾರೆ.

ಪಕ್ಷದಲ್ಲಿ ಅಭ್ಯರ್ಥಿ ಆಯ್ಕೆಗೆ ಒಂದು ಪ್ರಕ್ರಿಯೆ ಇದೆ:

ನಮ್ಮ ಪಕ್ಷದಲ್ಲಿ ಅಭ್ಯರ್ಥಿ ಆಯ್ಕೆಗೆ ಒಂದು ಪ್ರಕ್ರಿಯೆ ಇದೆ. ನಾನು ಸ್ಪರ್ಧೆ ಬಗ್ಗೆ ತಿಳಿಸಿದ್ದೇನೆ. ಆದರೆ ನನ್ನ ತೀರ್ಮಾನಕ್ಕೆ ಕಾಂಗ್ರೆಸ್ ಹೈಕಮಾಂಡ್ ಒಪ್ಪಿಗೆ ನೀಡಬೇಕಿದೆ. ನಾನೇ ಏಕಾಂಗಿಯಾಗಿ ಘೋಷಣೆ ಮಾಡಲು ಸಾಧ್ಯವಿಲ್ಲ. ಪಕ್ಷದಲ್ಲಿ ನನಗೆ ಅಂತಾ ವಿಶೇಷ ನೀತಿ ಇಲ್ಲ. ಪಕ್ಷದಲ್ಲಿ ಎಲ್ಲರಂತೆ ನಾನು ಕೂಡ ಒಬ್ಬನಾಗಿದ್ದು, ಹೈಕಮಾಂಡ್ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ ಎಂದು ತಿಳಿಸಿದರು.

ಈಗಾಗಲೇ ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಜಿದ್ದಾಜಿದ್ದಿನ ಪೈಪೋಟಿ ಶುರುವಾಗಿದೆ ಚುನಾವಣೆಯಲ್ಲಿ ಸ್ಪರ್ಧೆಗಾಗಿ ಹಲವು ಕಸರತ್ತುಗಳನ್ನು ನಡೆಸುತ್ತಲೇ ಇದ್ದಾರೆ. ಹಾಗೆಯೇ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಗೆ ಮುನ್ನವೇ ಕ್ಷೇತ್ರವನ್ನು ಆಯ್ಕೆ ಮಾಡುವ ಮೂಲಕ ಸಿದ್ದರಾಮಯ್ಯನವರು ಗೊಂದಲಗಳಿಗೆ ತರೆ ಎಳೆದಿದ್ದಾರೆ.

ರಾಜ್ಯ ರಾಜಕೀಯ ವಲಯದ ಗಮನ ಕೋಲಾರ ಕ್ಷೇತ್ರದತ್ತ ತಿರುಗಲಿದೆ. ಸಿದ್ದರಾಮಯ್ಯನವರ ನಿರ್ಧಾರದಿಂದ ಬಿಜೆಪಿ ಹಾಗೂ ಜೆಡಿಎಸ್‌ನ ಮುಂದಿನ ತೀರ್ಮಾನ ಏನಾಗಿರಬಹುದು ಎನ್ನುವುದೇ ಇದೀಗ ಕುತೂಹಲಕ್ಕೆ ಕಾರಣವಾಗಿದೆ.

Team Newsnap
Leave a Comment

Recent Posts

2024ರ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್‍ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More

April 30, 2024

ಅಧಿಕೃತವಾಗಿ ಪ್ರಜ್ವಲ್ ರೇವಣ್ಣ ಜೆಡಿಎಸ್ ಪಕ್ಷದಿಂದ ಅಮಾನತು

ಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಬಳಿಕ ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣರನ್ನು ಅಮಾನತು ಮಾಡಿ ಜೆಡಿಎಸ್… Read More

April 30, 2024

ನಾಳೆಯಿಂದ 14 ಕ್ಷೇತ್ರಗಳಲ್ಲಿ 2ನೇ ಹಂತದ ಅಂಚೆ ಮತದಾನ

ಬೆಂಗಳೂರು : ರಾಜ್ಯದ ಎರಡನೇ ಹಂತದ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಗತ್ಯ ಸೇವೆಗಳ ಇಲಾಖೆಗಳ ಸಿಬ್ಬಂದಿಗೆ ನಾಳೆಯಿಂದ 3 ದಿನಗಳ… Read More

April 30, 2024

SSLC ಪರೀಕ್ಷೆ : ಮೇ.10ರಂದು ಫಲಿತಾಂಶ ಪ್ರಕಟ

ಬೆಂಗಳೂರು : ಮೇ 10ರಂದು - ಪ್ರಸಕ್ತ ಸಾಲಿನ SSLC ಪರೀಕ್ಷೆಯ ಫಲಿತಾಂಶ ಪ್ರಕಟಿಸಲು ಇಲಾಖೆ ಎಲ್ಲಾ ರೀತಿಯ ಸಿದ್ದತೆಗಳನ್ನು… Read More

April 30, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಏಪ್ರಿಲ್ 30 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,550 ರೂಪಾಯಿ ದಾಖಲಾಗಿದೆ. 24… Read More

April 30, 2024

5 ವಿದ್ಯಾರ್ಥಿಗಳ ಕಾವೇರಿ ನದಿಯಲ್ಲಿ ಮುಳುಗಿ ದುರ್ಮರಣ

ರಾಮನಗರ : ಮೇಕೆದಾಟು (Mekedatu) ಬಳಿಯ ಸಂಗಮದ ಕಾವೇರಿ ನದಿಯಲ್ಲಿ ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ… Read More

April 29, 2024