ಆಂಧ್ರದ ಸಿಎಂ ಪೋಸ್ಟರ್ ಹರಿದ ನಾಯಿ ವಿರುದ್ಧ ದೂರು!

Team Newsnap
1 Min Read
Complaint against the dog that tore the CM poster of Andhra! ಆಂಧ್ರದ ಸಿಎಂ ಪೋಸ್ಟರ್ ಹರಿದ ನಾಯಿ ವಿರುದ್ಧ ದೂರು!

ವಿಜಯವಾಡ:ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ಪೋಸ್ಟರ್ ಹರಿದ ನಾಯಿಯ ವಿರುದ್ಧ ತೆಲುಗು ದೇಶಂ ಪಕ್ಷದ(ಟಿಡಿಪಿ) ನಾಯಕಿಯೊಬ್ಬರು ದೂರು ದಾಖಲಿಸಿದ್ದಾರೆ.

ಈ ವಿಚಿತ್ರ ಘಟನೆ ವಿಜಯವಾಡದಲ್ಲಿ ನಡೆದಿದೆ. ನಾಯಿಯ ವಿರುದ್ಧ ಪಾಯಕರಾವ್ ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ಟಿಡಿಪಿ ನಾಯಕಿ ದಾಸರಿ ಉದಯ ಶ್ರೀ, ಮಹಾನ್ ವ್ಯಕ್ತಿಯನ್ನು ಅವಮಾನಿಸಿರುವ ನಾಯಿ ರಾಜ್ಯದ ಆರು ಕೋಟಿ ಜನರಿಗೆ ನೋವುಂಟು ಮಾಡಿದೆ.

ಈ ಕೃತ್ಯದ ಹಿಂದಿರುವ ನಿಜವಾದ ಆರೋಪಿಗಳನ್ನು ಬಂಧಿಸಿ ಶಿಕ್ಷಿಸಬೇಕು ಎಂದು ಆಗ್ರಹಿಸಿದ್ದಾರೆ.
ಜಗನ್ ಮೋಹನ್ ರೆಡ್ಡಿ ಅವರನ್ನು ಅಪಹಾಸ್ಯ ಮಾಡಲು ಟಿಡಿಪಿ ನಾಯಕಿ ಈ ದೂರು ನೀಡಿದ್ದಾರೆ ಎಂದು ವೈಎಸ್ಆರ್ ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿದ್ದಾರೆ.

ನಾಯಿಯೊಂದು ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ಪೋಸ್ಟರ್ ಹರಿಯುತ್ತಿರುವ ವಿಡಿಯೋ ಇತ್ತೀಚೆಗೆ ವೈರಲ್ ಆಗಿತ್ತು.ಇದನ್ನು ಓದಿ –ಜೆಡಿಎಸ್ ಎರಡನೇ ಪಟ್ಟಿ ರಿಲೀಸ್ – ಹಾಸನಕ್ಕೆ ಸ್ವರೂಪ್ – ಮಂಡ್ಯ ಅಭ್ಯರ್ಥಿ ಇನ್ನೂ ಗೌಪ್ಯ

Share This Article
Leave a comment