ಬೆಂಗಳೂರಿನ ಸಿವಿಲ್ ಕೋರ್ಟ್ ಆವರಣದಲ್ಲಿ ತನ್ನ ಮೇಲೆ ಮಸಿ ಬಳಿದಿದ್ದ ವಕೀಲೆ ಮೀರಾ ರಾಘವೇಂದ್ರ ವಿರುದ್ಧ ಸಾಹಿತಿ ಭಗವಾನ್ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಮೀರಾ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಮೀರಾ ವಿರುದ್ದ ಐಪಿಸಿ ಸೆಕ್ಷನ್ 341(ಅಕ್ರಮವಾಗಿ ತಡೆಯವುದು), 504(ಅವಾಚ್ಯವಾಗಿ ನಿಂದನೆ)ಅಡಿ ಪ್ರಕರಣ ದಾಖಲಾಗಿದೆ.
ಪ್ರಕರಣ ದಾಖಲಾದ ಬಳಿಕ ಭಗವಾನ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ಹಿನ್ನೆಲೆಯಲ್ಲಿ ವಕೀಲೆ ಮೀರಾ ರಾಘವೇಂದ್ರ ಖಾಸಗಿ ದೂರು ದಾಖಲಿಸಿದ್ದರು.
ಇಂದು ಈ ಪ್ರಕರಣ ಸಂಬಂಧ ಜಾಮೀನು ವಿಚಾರಣೆಗೆ ಭಗವಾನ್ ಕೋರ್ಟ್ಗೆ ಆಗಮಿಸಿದ್ದರು. ಈ ವೇಳೆ ಮೀರಾ ರಾಘವೇಂದ್ರ ಭಗವಾನ್ ಮುಖಕ್ಕೆ ಮಸಿ ಬಳಿದಿದ್ದಾರೆ.
ಬುದ್ಧಿಜೀವಿ, ಧರ್ಮ ವಿರೋಧಿ ಪ್ರೊ ಭಗವಾನ್ ಇಂದು ಕೋರ್ಟ್ ಕಟಕಟೆಗೆ ಹಾಜರಾಗಿ ಜಾಮೀನು ಪಡೆದುಕೊಂಡರು. ಅವರಿಗೆ ಮಸಿ ಬಳಿದು ತಕ್ಕ ಶಾಸ್ತಿ ಮಾಡಿದ್ದೇನೆ. ಜೈಶ್ರೀರಾಮ್ ಎಂದು ಮೀರಾ ರಾಘವೇಂದ್ರ ಟ್ವೀಟ್ ಮಾಡಿ ವಿಡಿಯೋ ಅಪ್ಲೋಡ್ ಮಾಡಿದ್ದಾರೆ.
ಹಿಂದೂ ಧರ್ಮವೆಂಬುದೆ ಇಲ್ಲ. ಹಿಂದೂ ಧರ್ಮ ಅವಮಾನಕಾರ. ಮಾನ ಮರ್ಯಾದೆ ಇದ್ದವರು ಹಿಂದೂ ಧರ್ಮ ಬಳಸಬಾರದು ಎಂದು ಭಗವಾನ್ ಹೇಳಿಕೆ ನೀಡಿದ್ದರು. ಈ ಸಂಬಂಧ 2020ರ ಅಕ್ಟೋಬರ್ 10 ರಂದು ಭಗವಾನ್ ವಿರುದ್ಧ ಮೀರಾ ರಾಘವೇಂದ್ರ ಕ್ರಿಮಿನಲ್ ಕೇಸ್ ಹೂಡಿದ್ದರು. ಈ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಭಗವಾನ್ಗೆ ಕೋರ್ಟ್ ಸಮನ್ಸ್ ಜಾರಿ ಮಾಡಿತ್ತು.
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More
This website uses cookies.
Leave a Comment