ಮೈಸೂರಿನಲ್ಲಿ ಮಹಿಷ ದಸರಾಕ್ಕೆ ಷರತ್ತಿನ ಅನುಮತಿ

Team Newsnap
1 Min Read

ಮೈಸೂರು: ಭಾರೀ ಚರ್ಚೆಗೆ ಗ್ರಾಸವಾಗಿರುವ ಮಹಿಷ ದಸರಾದ ವೇದಿಕೆ ಕಾರ್ಯಕ್ರಮಕ್ಕೆ ಮಾತ್ರ ಪೊಲೀಸ್ ಇಲಾಖೆ ಷರತ್ತಿನ ಅನುಮತಿ ನೀಡಿದೆ.

ಕಾರ್ಯಕ್ರಮದಲ್ಲಿ ಯಾವುದೇ ಪ್ರಚೋದನಕಾರಿ ಭಾಷಣ ಮಾಡದಂತೆ ಪೊಲೀಸ್ ಆಯುಕ್ತ ಡಾ.ರಮೇಶ್ ಎಚ್ಚರಿಕೆ ಷರತ್ತು ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಪೋಲಿಸ್ ಕಮೀಷನರ್ ಈ ಮಾಹಿತಿ ನೀಡಿ, ಪುರಭವನದಲ್ಲಿ ಬೆ.10 ರಿಂದ 12ರವರೆಗೆ ಮಹಿಷ ದಸರಾ ಮಾಡಲು ಅವಕಾಶ ಮಾಡಿಕೊಡಲಾಗಿದೆ.

dasara 2

ಪುರಭವನದ ಒಳಗಿನ ಸಭಾಂಗಣ ಬಿಟ್ಟು ನಗರದ ಎಲ್ಲಾ ಕಡೆ 144 ಸೆಕ್ಷನ್ ಜಾರಿ ಮಾಡಲಾಗುತ್ತದೆ. ಇದರಿಂದಾಗಿ ಮೆರವಣಿಗೆ ಹಾಗೂ ಬೈಕ್ ರ‍್ಯಾಲಿ ನಡೆಸಬಾರದು. ಪರ ಹಾಗೂ ವಿರೋಧ ಘೋಷಣೆ ಕೂಗಬಾರದು.

ಅಲ್ಲದೇ ಪ್ರಚೋದನಕಾರಿ ಹೇಳಿಕೆ ನೀಡಬಾರದು ಎಂದಿದ್ದಾರೆ.

ಭದ್ರತೆಗೆ 2 ಸಾವಿರ ಪೊಲೀಸರ ನಿಯೋಜನೆ ಮಾಡಲಾಗಿದೆ. ಮಹಿಷ ದಸರಾ ವಿಚಾರವಾಗಿ ಪ್ರಚೋದನಕಾರಿಯಾಗಿ ಹೇಳಿಕೆ ಹಾಗೂ ಪೋಸ್ಟ್ ಹಾಕಿದವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ

Share This Article
Leave a comment