ಉತ್ತರ ಪ್ರದೇಶದ ಚುನಾವಣೆಗಾಗಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಲಖನೌನಲ್ಲಿ ಮತ ಯಾಚಿಸಲು ಮನೆ ಮನೆಗೆ ತೆರಳಿದ್ದ ವೇಳೆ ಕನ್ಹಯ್ಯ ಕುಮಾರ್ಗೆ ಮಸಿ ಬಳಿಯುವ ಪ್ರಯತ್ನ ನಡೆದಿದೆ. ಆದರೆ ಕನ್ಹಯ್ಯ ಮೇಲೆ ಆಸಿಡ್ ದಾಳಿಯ ಪ್ರಯತ್ನ ನಡೆದಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಕಿಡಿಗೇಡಿಗಳು ಕನ್ಹಯ್ಯ ಕುಮಾರ್ ಮೇಲೆ ಆ್ಯಸಿಡ್ ಎಸೆಯಲು ಪ್ರಯತ್ನಿಸಿದ್ದಾರೆ. ಅದು ವಿಫಲವಾಗಿದೆ. ಆದರೂ ಕೆಲವು ಯುವಕರ ಮೇಲೆ ಬಿದ್ದಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಕನ್ಹಯ್ಯ ಕುಮಾರ್ ಮೇಲೆ ಮಸಿ ಎರೆಚಲು ಪ್ರಯತ್ನಿಸಿದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಉತ್ತರ ಪ್ರದೇಶದ ಪೊಲೀಸರು ಮಾಹಿತಿ ನೀಡಿದ್ದಾರೆ.
ಲಖನೌ ನಲ್ಲಿ ಪ್ರಚಾರ ಮಾಡುತ್ತಿದ್ದ ವೇಳೆ ವ್ಯಕ್ತಿಯೊಬ್ಬ ಕನ್ಹಯ್ಯ ಕುಮಾರ್ಗೆ ಮಸಿ ಎರೆಚಲು ಮುಂದಾಗಿದ್ದಾನೆ. ಈ ಘಟನೆ ಮಂಗಳವಾರ ನಡೆದಿದೆ.
ಕನ್ಹಯ್ಯ ಕುಮಾರ್ ಮೇಲೆ ಎಸೆದದ್ದು ಮಸಿ ಅಲ್ಲ, ಒಂದು ವಿಧವಾದ ರಾಸಾಯನಿಕ ಪದಾರ್ಥ ಎಂದು ಕಾಂಗ್ರೆಸ್ ಆರೋಪಿಸಿದೆ.