Main News

ಕಾಂಗ್ರೆಸ್ ಯಾವುದೇ ನಾಟಕ ಜನರ ಹೃದಯ ಗೆಲ್ಲಲಾರವು – ಕುಮಾರಸ್ವಾಮಿ

ಚುಣಾವಣಾ ಸಮಯದಲ್ಲಿ ಬೇರೆ ಪಕ್ಷಗಳ ರಾಜಕೀಯ ಮುಖಂಡರನ್ನು ಸೆಳೆಯುವುದು ಕಾಂಗ್ರೆಸ್‌ಗೆ ಸಾಮಾನ್ಯವಾಗಿದೆ. ಆದರೆ ಜೆಡಿಎಸ್ ಮುಖಂಡರನ್ನು ಸಂಪೂರ್ಣವಾಗಿ ಸೆಳೆಯಲಾಗುವದಿಲ್ಲ. ಜೆಡಿಎಸ್ ಪಕ್ಷ ನಿಷ್ಠಾವಂತ ಮುಖಂಡ, ಕಾರ್ಯಕರ್ತ ದಿಂದ ಉಳಿಯಲಿದೆ.‌ ಕಾಂಗ್ರೆಸ್ ನಡೆಸುತ್ತಿರುವ ನಾಟಕ ಜನರ ಹೃದಯ ಗೆಲ್ಲುವುದಿಲ್ಲ ಎಂದು ಜೆಡಿಎಸ್ ಪಕ್ಷದ ನಾಯಕ ಹೆಚ್‌.ಡಿ. ಕುಮಾರಸ್ವಾಮಿ‌ ಗರಂ ಆಗಿ ಹೇಳಿದರು.

ಕಾಂಗ್ರೆಸ್ ನಾಯಕರು ಅವರ ಮನೆಗೆ ಭೇಟಿ‌ ನೀಡಿ ಜೆಡಿಎಸ್ ಪಕ್ಷವನ್ನು ಇಲ್ಲವಾಗಿಸುವದಾಗಿ ಬೆದರಿಕೆ ಹಾಕಿ ಹೋದ ಘಟನೆಯನ್ನು ಸುದ್ದಿಗಾರರೊಂದಿಗೆ‌ ಮಾತನಾಡಿದ ಎಚ್ ಡಿ ಕೆ, ‘ಕಾಂಗ್ರೆಸ್ ನಾಯಕರಿಂದ ಹೊಸ ನಾಟಕ ಶುರುವಾಗಿದೆ. ಆ ನಾಯಕರು ಪ್ರದೇಶ ಕಾಂಗ್ರೆಸ್‌ನ ಅಧ್ಯಕ್ಷರಾದ ತಕ್ಷಣದಿಂದಲೇ ಮುಖಂಡರನ್ನು ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ಈ ಹಿಂದೆ ಅವರು ಯಾರೆಲ್ಲರಿಗೆ ರಕ್ಷಣೆ ನೀಡಿದ್ದಾರೆ, ಜನರ ಕಷ್ಟಸುಖಕ್ಕೆ ಎಷ್ಟರಮಟ್ಟಿಗೆ ಭಾಗಿಯಾಗಿದ್ದಾರೆ, ಬೇರೆಯವರ ಹಿಂದೆ ಹೋಗಲು ಎಷ್ಟು ಕಾಣಿಕೆ ಇದೆ?’ ಎಂದೆಲ್ಲ ಡಿಕೆಶಿ ಅವರನ್ನು ಪರೋಕ್ಷವಾಗಿ ತಿವಿದಿದ್ದಾರೆ.

‘ಅವರು ಕನಕಪುರದಲ್ಲಿ‌ ಎಷ್ಟರ ಮಟ್ಟಿಗೆ ನ್ಯಾಯಬದ್ಧವಾಗಿ‌ ಚುಣಾವಣೆ ನಡೆಸಿದ್ದಾರೆ? ಎಷ್ಟು ಪರಿಶುದ್ಧತೆಯಿಂದಿದ್ದಾರೆ ಎಂಬುದರ ಅವಲೋಕನವನ್ನು ಅವರು ಮಾಡಲಿ. ಯಾವುದೇ ಕಾರಣಕ್ಕೂ ಕಾಂಗ್ರೆಸ್‌ನೊಂದಿಗೆ ಜೆಡಿಎಸ್ ಮೈತ್ರಿಯಾಗುವುದಿಲ್ಲ’ ಎಂದು ಕಡ್ಡಿ ಮುರಿದಂತೆ ಹೇಳಿದ್ದಾರೆ.

ಆರ್‌ಆರ್‌ ನಗರದ ಕಾಂಗ್ರೆಸ್ ಅಭ್ಯರ್ಥಿಯ‌ ಮೇಲೆ ಚುಣಾವಣಾ ನೀತಿ‌ ಸಂಹಿತೆ ಉಲ್ಲಂಘನೆಯ ಆರೋಪದ ಮೇಲೆ ಎಫ್‌ಐಆರ್ ದಾಖಲಿಸಿರುವ ಕುರಿತು ಪ್ರತಿಕ್ರಿಯೆ ನೀಡಿರುವ ಹೆಚ್‌ಡಿಕೆ‌ ‘ಕಾಂಗ್ರೆಸ್ ಅಭ್ಯರ್ಥಿ ಮೇಲೆ ಎಫ್‍ಐಆರ್ ದಾಖಲಿಸಿರುವ ಬಗ್ಗೆ ರಾಜಕಾರಣ ಬೆರೆಸುವ ಅಗತ್ಯವಿಲ್ಲ.’ ಎಂದು ಹೇಳಿದರು.

Team Newsnap
Leave a Comment
Share
Published by
Team Newsnap

Recent Posts

ಕರ್ನೂಲಿನಲ್ಲಿ ಭೀಕರ ರಸ್ತೆ ಅಪಘಾತ: ಮಂಡ್ಯದ ನಟಿ `ಪವಿತ್ರ ಜಯರಾಂ’ ಸಾವು

ಬೆಂಗಳೂರು : ತೆಲುಗಿನ 'ತ್ರಿನಯನಿ' ಧಾರಾವಾಹಿಯಲ್ಲಿ ಜನಪ್ರಿಯರಾಗಿರುವ ಕನ್ನಡತಿ, ಮಂಡ್ಯದ ಹನಕೆರೆ ಪವಿತ್ರ ಜಯರಾಂ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಆಂಧ್ರಪ್ರದೇಶದ ಕರ್ನೂಲು… Read More

May 12, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 12 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 67,000 ರೂಪಾಯಿ ದಾಖಲಾಗಿದೆ. 24… Read More

May 12, 2024

ಪ್ರಜ್ವಲ್ ಪ್ರಕರಣ : ಸಿಬಿಐಗೆ ವಹಿಸಲ್ಲ – ಸಿಎಂ ಸಿದ್ದು

ನಮ್ಮ ಪೋಲಿಸರು ಸಮರ್ಥರಿದ್ದಾರೆ ⁠ಬಿಜೆಪಿಯವರು ಯಾವತ್ತಾದರೂ ಸಿಬಿಐ ತನಿಖೆ ಕೊಟ್ಟಿದ್ದಾರಾ ? ಬೆಂಗಳೂರು : ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ಸಿಬಿಐಗೆ… Read More

May 10, 2024

ಕೊಡಗು: ಬಾಲಕಿಯನ್ನು ಭೀಕರ ಹತ್ಯೆಗೈದ ಆರೋಪಿ ಆತ್ಮಹತ್ಯೆ

ಮಡಿಕೇರಿ : ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿಯಲ್ಲಿ ಎಸ್​ಎಸ್​ಎಲ್​ಸಿ ಬಾಲಕಿಯನ್ನು ಭೀಕರವಾಗಿ ಹತ್ಯೆ ಮಾಡಿ ತಲೆ ಕೊಂಡೊಯ್ದಿದ್ದ ಪ್ರಕರಣಕ್ಕೆ… Read More

May 10, 2024

ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ

ಮುಂಬೈ: ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ರಾಮಮಂದಿರವನ್ನು ಶುದ್ಧೀಕರಿಸುತ್ತೇವೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ… Read More

May 10, 2024

ಕ್ರೇಜಿವಾಲ್ ಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದ ಸುಪ್ರೀಂ

ನವದೆಹಲಿ : ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜೂನ್ 1 ರ ವರೆಗೂ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು… Read More

May 10, 2024