
ಅಮೇರಿಕಾದ ನೂತನ ಅಧ್ಯಕ್ಷರಾಗಿ ಜೋ ಬೈಡನ್ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದ ಭಾರತದ ಮೂಲದ ಕಮಲಾ ಹ್ಯಾರಿಸ್ ಗೆ ರಾಜ್ಯ ಕಾಂಗ್ರೆಸ್ ಪರವಾಗಿ ಅಭಿನಂದನೆ ಸಲ್ಲಿಸಿರುವ ರಾಜ್ಯ ಕಾಂಗ್ರೆಸ್ ವಕ್ತಾರ , ಮಾಜಿ ಸಚಿವ ಎನ್ ಚಲುವರಾಯಸ್ವಾಮಿ ಭಾರತದ ಪ್ರಗತಿಗೆ ಈ ನಾಯಕರ ಅಧಿಕಾರ ಅವಧಿಯಲ್ಲಿ ಪೂರಕವಾದ ನಿರ್ಧಾರವನ್ನು ಕೈಗೊಂಡು, ಸಂಬಂಧಗಳು ವೃದ್ದಿಯಾಗಲಿ ಎಂದು ಹೇಳಿದ್ದಾರೆ.
ಈ ಕುರಿತಂತೆ ಹೇಳಿಕೆ ಬಿಡುಗಡೆ ಮಾಡಿರುವ ಚಲುವರಾಯ ಸ್ವಾಮಿ ವಿಶ್ವ ದೊಡ್ಡಣ್ಣ ಎಂದು ಬಿಂಬಿಸಿಕೊಂಡಿರುವ ಅಮೇರಿಕಾ ಹೊಸ ಆಡಳಿತವು ವಿಶ್ವ ಶಾಂತಿ ಕಾಪಾಡುವ ನಿಟ್ಟಿನಲ್ಲೂ ನಾಯಕರು ಶ್ರಮಿಸಲಿ ಎಂದಿದ್ದಾರೆ.

ಭಾರತದ ತಮಿಳುನಾಡಿನ ಮೂಲದ ಕಮಲಾದೇವಿ ಹ್ಯಾರಿಸ್ ಅವರಿಗೆ ಅಭಿನಂದನೆ ಸಲ್ಲಿಸಿರುವ ಚಲುವರಾಯಸ್ವಾಮಿ, ಕಪ್ಪು ವರ್ಣದ ದಕ್ಷಿಣ ಏಷ್ಯದ ಮಹಿಳೆಯೊಬ್ಬರು ಅಮೇರಿಕಾ ಇತಿಹಾಸದಲ್ಲಿ ಪ್ರಥಮ ಬಾರಿಗೆ ಉನ್ನತ ಹುದ್ದೆಗೆ ಏರಿರುವುದು ಭಾರತದ ಹಾಗೂ ಎಲ್ಲಾ ಮಹಿಳೆಯರಿಗೆ ಸಂದ ಗೌರವ ಇದಾಗಿದೆ ಎಂದಿದ್ದಾರೆ.
ಮಂಡ್ಯಕ್ಕೆ ಹೆಮ್ಮೆ

ಮಂಡ್ಯದ ಸುಪುತ್ರ ಹಲ್ಲೇಗೆರೆ ಗ್ರಾಮದ ಡಾ. ವಿವೇಕ್ ಮೂರ್ತಿ ಅವರಿಗೆ ಜೋ ಬೈಡನ್ ಆಡಳಿತ ದಲ್ಲಿ ಆರೋಗ್ಯ ಪಡೆಯ ಮುಖ್ಯಸ್ಥರಾಗಿ ನೇಮಕವಾಗುವ ಸಾಧ್ಯತೆ ಇದೆ. ಮಂಡ್ಯ ಜಿಲ್ಲೆಗೆ ಹೆಮ್ಮೆಯ ಸಂಗತಿ ಎಂದು ಹೇಳುವ ಮೂಲಕ ಡಾ. ವಿವೇಕ್ ಮೂರ್ತಿ ಅವರಿಗೆ ಚಲುವರಾಯಸ್ವಾಮಿ ಶುಭಾಷಯಗಳನ್ನು ತಿಳಿಸಿದ್ದಾರೆ.

- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ