ಅಮೇರಿಕಾದ ನೂತನ ಅಧ್ಯಕ್ಷರಾಗಿ ಜೋ ಬೈಡನ್ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದ ಭಾರತದ ಮೂಲದ ಕಮಲಾ ಹ್ಯಾರಿಸ್ ಗೆ ರಾಜ್ಯ ಕಾಂಗ್ರೆಸ್ ಪರವಾಗಿ ಅಭಿನಂದನೆ ಸಲ್ಲಿಸಿರುವ ರಾಜ್ಯ ಕಾಂಗ್ರೆಸ್ ವಕ್ತಾರ , ಮಾಜಿ ಸಚಿವ ಎನ್ ಚಲುವರಾಯಸ್ವಾಮಿ ಭಾರತದ ಪ್ರಗತಿಗೆ ಈ ನಾಯಕರ ಅಧಿಕಾರ ಅವಧಿಯಲ್ಲಿ ಪೂರಕವಾದ ನಿರ್ಧಾರವನ್ನು ಕೈಗೊಂಡು, ಸಂಬಂಧಗಳು ವೃದ್ದಿಯಾಗಲಿ ಎಂದು ಹೇಳಿದ್ದಾರೆ.
ಈ ಕುರಿತಂತೆ ಹೇಳಿಕೆ ಬಿಡುಗಡೆ ಮಾಡಿರುವ ಚಲುವರಾಯ ಸ್ವಾಮಿ ವಿಶ್ವ ದೊಡ್ಡಣ್ಣ ಎಂದು ಬಿಂಬಿಸಿಕೊಂಡಿರುವ ಅಮೇರಿಕಾ ಹೊಸ ಆಡಳಿತವು ವಿಶ್ವ ಶಾಂತಿ ಕಾಪಾಡುವ ನಿಟ್ಟಿನಲ್ಲೂ ನಾಯಕರು ಶ್ರಮಿಸಲಿ ಎಂದಿದ್ದಾರೆ.
ಭಾರತದ ತಮಿಳುನಾಡಿನ ಮೂಲದ ಕಮಲಾದೇವಿ ಹ್ಯಾರಿಸ್ ಅವರಿಗೆ ಅಭಿನಂದನೆ ಸಲ್ಲಿಸಿರುವ ಚಲುವರಾಯಸ್ವಾಮಿ, ಕಪ್ಪು ವರ್ಣದ ದಕ್ಷಿಣ ಏಷ್ಯದ ಮಹಿಳೆಯೊಬ್ಬರು ಅಮೇರಿಕಾ ಇತಿಹಾಸದಲ್ಲಿ ಪ್ರಥಮ ಬಾರಿಗೆ ಉನ್ನತ ಹುದ್ದೆಗೆ ಏರಿರುವುದು ಭಾರತದ ಹಾಗೂ ಎಲ್ಲಾ ಮಹಿಳೆಯರಿಗೆ ಸಂದ ಗೌರವ ಇದಾಗಿದೆ ಎಂದಿದ್ದಾರೆ.
ಮಂಡ್ಯಕ್ಕೆ ಹೆಮ್ಮೆ
ಮಂಡ್ಯದ ಸುಪುತ್ರ ಹಲ್ಲೇಗೆರೆ ಗ್ರಾಮದ ಡಾ. ವಿವೇಕ್ ಮೂರ್ತಿ ಅವರಿಗೆ ಜೋ ಬೈಡನ್ ಆಡಳಿತ ದಲ್ಲಿ ಆರೋಗ್ಯ ಪಡೆಯ ಮುಖ್ಯಸ್ಥರಾಗಿ ನೇಮಕವಾಗುವ ಸಾಧ್ಯತೆ ಇದೆ. ಮಂಡ್ಯ ಜಿಲ್ಲೆಗೆ ಹೆಮ್ಮೆಯ ಸಂಗತಿ ಎಂದು ಹೇಳುವ ಮೂಲಕ ಡಾ. ವಿವೇಕ್ ಮೂರ್ತಿ ಅವರಿಗೆ ಚಲುವರಾಯಸ್ವಾಮಿ ಶುಭಾಷಯಗಳನ್ನು ತಿಳಿಸಿದ್ದಾರೆ.
- ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
- ರೇವಣ್ಣ ರಿಲೀಸ್ : ಬಿಗ್ ರಿಲೀಪ್
- ನನ್ನನ್ನು ಯಾರು ಅಪಹರಣ ಮಾಡಿಲ್ಲ, ಮಗ ತಪ್ಪು ದೂರು ಕೊಟ್ಟಿದ್ದಾನೆ ಎಂದ ಕಿಡ್ನ್ಯಾಪ್ ಸಂತ್ರಸ್ತೆ
- ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿದ್ದರೆ ಮಂಡ್ಯದ ನಟಿ ಪವಿತ್ರಾ ಸಾಯುತ್ತಿರಲಿಲ್ಲ- ಗೆಳೆಯ ಚಂದ್ರಕಾಂತ್
- CBSE 12 ನೇ ತರಗತಿಯ ಫಲಿತಾಂಶ ಪ್ರಕಟ: ಇಲ್ಲಿದೆ ಫಲಿತಾಂಶವನ್ನು ಪರಿಶೀಲಿಸಲು ನೇರ ಲಿಂಕ್