January 28, 2026

Newsnap Kannada

The World at your finger tips!

dks

ಕರ್ನಾಟಕ ಬಂದ್‌ಗೆ ಕಾಂಗ್ರೆಸ್ ಸಂಪೂರ್ಣ ಬೆಂಬಲ – ಡಿಕೆಶಿ

Spread the love

ಪ್ರಸ್ತುತ ಅಂಗೀಕಾರವಾಗಿರುವ ಮಸೂದೆಗಳು ರೈತರಿಗೆ ಅನೇಕ ತೊಂದರೆಗಳನ್ನು ತಂದೊಡ್ಡಲಿವೆ ಎಂದು ರೈತ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿದ್ದಾರೆ.

‘ರೈತ ವಿರೋಧಿ ಕೃಷಿ ಕಾಯ್ದೆ ಹಾಗೂ ಕೃಷಿ ಮಸೂದೆಗಳ ವಿರುದ್ಧ ರೈತ ಸಂಘಟನೆಗಳು ಕೈಗೊಳ್ಳುತ್ತಿರುವ ಕರ್ನಾಟಕ ಬಂದ್‌ಗೆ ಕಾಂಗ್ರೆಸ್ ಪಕ್ಷ ಸಂಪೂರ್ಣ ಬೆಂಬಲ ಸೂಚಿಸಲಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಈ ಮಸೂದೆಗಳು ರೈತರಿಗೆ ಹಾಗೂ ಕಾರ್ಮಿಕರಿಗೆ ಮರಣ ಶಾಸನವಾಗಲಿವೆ ಎಂದು ಡಿಕೆಶಿ ಹೇಳಿದರು.

ಇದೇ ಹಿನ್ನೆಲೆಯಲ್ಲಿ ಜೆಡಿಎಸ್ ಕೂಡ ಬಂದ್‌ಗೆ ಬೆಂಬಲ ಸೂಚಿಸಿದೆ. ‘ಕರ್ನಾಟಕ ಬಂದ್‌ಗೆ ಜೆಡಿಎಸ್ ಪಕ್ಷದಿಂದಲೂ ಸಂಪೂರ್ಣ ಬೆಂಬಲವಿದೆ’ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ರೈತ ಸಂಘಟನೆಗಳಿಗೆ, ಮಾಧ್ಯಮದವರಿಗೆ ತಿಳಿಸಿದ್ದಾರೆ.

error: Content is protected !!