ಕೋಲಾರ: ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಯ ಭದ್ರತೆಗಾಗಿ ತೆರಳಿದ್ದ ಕೋಲಾರದ 25 ಮಂದಿ ಪೊಲೀಸರಿಗೆ ಸೋಂಕು ದೃಢಪಟ್ಟಿದೆ.
ಶುಕ್ರವಾರ ಕೋಲಾರದ ಟ್ರಾಫಿಕ್ ಪೊಲೀಸ್ ಠಾಣೆಯ ಮೂವರು ಪೊಲೀಸ್ ಪೇದೆಗಳಿಗೆ ಕೊರೊನಾ ಕಾಣಿಸಿಕೊಂಡಿತ್ತು.
ಇಂದು ಮತ್ತೆ ಕೆಜಿಎಫ್ ತಾಲೂಕಿನ 25 ಪೊಲೀಸರಿಗೆ ಸೋಂಕು ಕಾಣಿಸಿಕೊಂಡಿದೆ.
ಮೇಕೆದಾಟು ಪಾದಯಾತ್ರೆ ಬಂದೊಬಸ್ತ್ಗೆ ತೆರಳಿದ್ದ ಪೊಲೀಸರಿಗೆ ಹಾಗೂ ಅವರ ಕುಟುಂಬದವರಿಗೆ ಆತಂಕ ಉಂಟುಮಾಡಿದೆ.
ಈಗಾಗಲೇ ಜಿಲ್ಲೆಯಲ್ಲಿ ಪಾದಯಾತ್ರೆಯಲ್ಲಿ ಭದ್ರತೆಗಾಗಿ ತೆರಳಿದ್ದ 50 ಹೆಚ್ಚು ಸಿಬ್ಬಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಇನ್ನೂ ಹಲವು ಪೊಲೀಸರು ಬಂದೋಬಸ್ತ್ಗೆ ರಾಮನಗರಕ್ಕೆ ತೆರಳಿದ್ದರು.
ಈ ಹಿನ್ನೆಲೆಯಲ್ಲಿ ಜಿಲ್ಲೆಯ ಹಲವು ಪೋಲಿಸರಿಗೆ ಸೊಂಕು ತಗುಲಿರುವ ಸಾಧ್ಯತೆಯಿದ್ದು, ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಲು ಪೊಲೀಸರು ಮುಂದಾಗಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು