ಇಲ್ಲಿನ ಪಾಂಡವ ಕ್ರೀಡಾಂಗಣದಲ್ಲಿ ಬಿಜೆಪಿ ವತಿಯಿಂದ ನಡೆದ ಜನಸಂಕಲ್ಪ ಯಾತ್ರೆ ಸಮಾವೇಶವನ್ನು ಗೋಪೂಜೆ, ಭತ್ತದ ರಾಶಿಪೂಜೆಸಲ್ಲಿಸಿ ವೇದಿಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಶಿವಮೂರ್ತಿ ಸ್ವಾಮಿ ವಿರುದ್ಧ ಪಿತೂರಿ ಪ್ರಕರಣ: ಬಸವರಾಜನ್ ಪತ್ನಿ ಸೌಭಾಗ್ಯ ಬಂಧನ
ಈ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಮತ ಬ್ಯಾಂಕ್ ಗಾಗಿ ಅಲ್ಪಸಂಖ್ಯಾತರ ಓಲೈಕೆ, ಹಿಂದೂವಿರೋಧಿ ನೀತಿಗಳನ್ನು ಅನುಸರಿಸುತ್ತಿದ್ದಾರೆ. ಸಿದ್ದರಾಮಯ್ಯ ಟಿಪ್ಪು ಬಗ್ಗೆ ಮಾತನಾಡುತ್ತಾರೆ. ಅಲ್ಪಸಂಖ್ಯಾರರ ಓಲೈಕೆ ಮಾಡಿಕೊಳ್ಳುತ್ತಿದ್ದಾರೆ. ಡಿ.ಕೆ.ಶಿವಕುಮಾರ್ ಅವರು ಕುಕ್ಕರ್ ನಲ್ಲಿ ಬಾಂಬ್ಬ್ಲಾಸ್ಟ್ ಮಾಡಿದ ಉಗ್ರನನ್ನು ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ನಿಲುವು ದೇಶದ ಪರವಾಗಿಯೋ ಅಥವಾ ಭಯೋತ್ಪಾದಕರ ಪರವಾಗಿದೆಯೋ ಎನ್ನುವುದನ್ನು ಕಾಂಗ್ರೆಸ್ನವರು ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದರು.
ಮೋದಿ ಟೀಕಿಸುವುದು ಸಿದ್ದು ಗುರಿ:
ಸಿದ್ದರಾಮಯ್ಯನವರಿಗೆ ಪ್ರಧಾನಮಂತ್ರಿ ಮೋದಿವರನ್ನು ಟೀಕೆ ಮಾಡೋದನ್ನು ಬಿಟ್ಟರೆ ಬೇರೆನು ಕೆಲಸವಿಲ್ಲ. ಸಿದ್ದರಾಮಯ್ಯನವರಿಗೆ ಕನಸ್ಸಿನಲ್ಲೂ ನರೇಂದ್ರಮೋದಿ ಅವರು ಬರುತ್ತಾರೆ ಅನ್ನಿಸುತ್ತದೆ ಎಂದು ಟೀಕಿಸಿದ ಅವರು, ಸಿದ್ದರಾಮಯ್ಯನವರು ನಾನು ಅನ್ನಭಾಗ್ಯದ ಮೂಲಕ ಜನರಿಗೆ ಅಕ್ಕಿಕೊಟ್ಟೆ ಎಂದು ಹೇಳಿಕೊಳ್ಳುತ್ತಾರೆ.
ಅನ್ನಭಾಗ್ಯದ 30 ರೂ. ಅಕ್ಕಿ ನರೇಂದ್ರಮೋದಿ ಅವರು ಕೊಟ್ಟಿದ್ದು, ಅಕ್ಕಿಯ ಮೇಲಿದ್ದ 3 ರೂ.ಚೀಲ ಮಾತ್ರ ಸಿದ್ದರಾಮಯ್ಯನವರು ಕೊಟ್ಟಿದ್ದು. ಅನ್ನಭಾಗ್ಯದಲ್ಲಿ ಕನ್ನ ಹೊಡೆದು ಭ್ರಷ್ಟಚಾರ, ಬ್ಲಾಕ್ ಮಾರುಕಟ್ಟೆ ಬೆಂಬಲ ನೀಡಿದವರು ಕಾಂಗ್ರೆಸ್ನವರು ಎಂದು ಕಿಡಿಕಾರಿದರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು