Karnataka

ಅಧಿಕಾರದ ಹಗಲು ಕನಸು ಕಾಣುವ ಕಾಂಗ್ರೆಸ್ ನಾಯಕರು – ಸಿಎಂ

ರಾಜ್ಯ ಕಾಂಗ್ರೆಸ್ ನಾಯಕರುಅಧಿಕಾರಕ್ಕೆ ಬರುವ ಹಗಲು ಕನಸು ಕಾಣುತ್ತಾರೆ. ಆದರೆ, ರಾಜ್ಯದಲ್ಲಿ ಈಗ ಬಿಜೆಪಿ ಪರವಾದ ಬಿರುಗಾಳಿ ಇದೆ ಮುಂದಿನ 2023ರ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೇರುವ ಮೂಲಕ ಗುಜರಾತ್ ಮಾದರಿಯಲ್ಲಿ ದಾಖಲೆ ನಿರ್ಮಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸವ್ಯಕ್ತಪಡಿಸಿದರು.

ಇಲ್ಲಿನ ಪಾಂಡವ ಕ್ರೀಡಾಂಗಣದಲ್ಲಿ ಬಿಜೆಪಿ ವತಿಯಿಂದ ನಡೆದ ಜನಸಂಕಲ್ಪ ಯಾತ್ರೆ ಸಮಾವೇಶವನ್ನು ಗೋಪೂಜೆ, ಭತ್ತದ ರಾಶಿಪೂಜೆಸಲ್ಲಿಸಿ ವೇದಿಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಶಿವಮೂರ್ತಿ ಸ್ವಾಮಿ ವಿರುದ್ಧ ಪಿತೂರಿ ಪ್ರಕರಣ: ಬಸವರಾಜನ್ ಪತ್ನಿ ಸೌಭಾಗ್ಯ ಬಂಧನ

ಈ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಮತ ಬ್ಯಾಂಕ್ ಗಾಗಿ ಅಲ್ಪಸಂಖ್ಯಾತರ ಓಲೈಕೆ, ಹಿಂದೂವಿರೋಧಿ ನೀತಿಗಳನ್ನು ಅನುಸರಿಸುತ್ತಿದ್ದಾರೆ. ಸಿದ್ದರಾಮಯ್ಯ ಟಿಪ್ಪು ಬಗ್ಗೆ ಮಾತನಾಡುತ್ತಾರೆ. ಅಲ್ಪಸಂಖ್ಯಾರರ ಓಲೈಕೆ ಮಾಡಿಕೊಳ್ಳುತ್ತಿದ್ದಾರೆ. ಡಿ.ಕೆ.ಶಿವಕುಮಾರ್ ಅವರು ಕುಕ್ಕರ್ ನಲ್ಲಿ ಬಾಂಬ್‍ಬ್ಲಾಸ್ಟ್ ಮಾಡಿದ ಉಗ್ರನನ್ನು ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ನಿಲುವು ದೇಶದ ಪರವಾಗಿಯೋ ಅಥವಾ ಭಯೋತ್ಪಾದಕರ ಪರವಾಗಿದೆಯೋ ಎನ್ನುವುದನ್ನು ಕಾಂಗ್ರೆಸ್‍ನವರು ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದರು.


ಮೋದಿ ಟೀಕಿಸುವುದು ಸಿದ್ದು ಗುರಿ:

ಸಿದ್ದರಾಮಯ್ಯನವರಿಗೆ ಪ್ರಧಾನಮಂತ್ರಿ ಮೋದಿವರನ್ನು ಟೀಕೆ ಮಾಡೋದನ್ನು ಬಿಟ್ಟರೆ ಬೇರೆನು ಕೆಲಸವಿಲ್ಲ. ಸಿದ್ದರಾಮಯ್ಯನವರಿಗೆ ಕನಸ್ಸಿನಲ್ಲೂ ನರೇಂದ್ರಮೋದಿ ಅವರು ಬರುತ್ತಾರೆ ಅನ್ನಿಸುತ್ತದೆ ಎಂದು ಟೀಕಿಸಿದ ಅವರು, ಸಿದ್ದರಾಮಯ್ಯನವರು ನಾನು ಅನ್ನಭಾಗ್ಯದ ಮೂಲಕ ಜನರಿಗೆ ಅಕ್ಕಿಕೊಟ್ಟೆ ಎಂದು ಹೇಳಿಕೊಳ್ಳುತ್ತಾರೆ.

ಅನ್ನಭಾಗ್ಯದ 30 ರೂ. ಅಕ್ಕಿ ನರೇಂದ್ರಮೋದಿ ಅವರು ಕೊಟ್ಟಿದ್ದು, ಅಕ್ಕಿಯ ಮೇಲಿದ್ದ 3 ರೂ.ಚೀಲ ಮಾತ್ರ ಸಿದ್ದರಾಮಯ್ಯನವರು ಕೊಟ್ಟಿದ್ದು. ಅನ್ನಭಾಗ್ಯದಲ್ಲಿ ಕನ್ನ ಹೊಡೆದು ಭ್ರಷ್ಟಚಾರ, ಬ್ಲಾಕ್ ಮಾರುಕಟ್ಟೆ ಬೆಂಬಲ ನೀಡಿದವರು ಕಾಂಗ್ರೆಸ್‍ನವರು ಎಂದು ಕಿಡಿಕಾರಿದರು.

Team Newsnap
Leave a Comment

Recent Posts

SIT ಯಿಂದ ಸಂಸದ ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟಿಸ್ ಜಾರಿ

ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More

May 2, 2024

ಪ್ರಜ್ವಲ್ ರೇವಣ್ಣನ ಮಾಜಿ ಕಾರು ಚಾಲಕ ‘ಕಾರ್ತಿಕ್’ ನಾಪತ್ತೆ

ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More

May 2, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More

May 2, 2024

ಪಿಎಚ್ಡಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಅನುಮಾನಾಸ್ಪದ ಸಾವು

ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್‌ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More

May 2, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 1, 2024

2024ರ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್‍ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More

April 30, 2024