PSI ನೇಮಕಾತಿ ಹುದ್ದೆಗಾಗಿ ಕನಕಗಿರಿ ಬಿಜೆಪಿ ಶಾಸಕ 15 ಲಕ್ಷ ರು ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಸೋಮವಾರ ಕಾಂಗ್ರೆಸ್ ಶಾಸಕರು ಬೆಂಗಳೂರಿನಲ್ಲಿ ವಿಡಿಯೋ ಬಿಡುಗಡೆ ಮಾಡಿದರು.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಶಾಸಕ ಪ್ರಿಯಾಂಕ್ ಖರ್ಗೆ, ಶಿವರಾಜ್ ತಂಗಡಗಿ, ಪಿಎಸ್ಐ ನೇಮಕಾತಿಗಾಗಿ ಶಾಸಕ ಬಸವರಾಜ್ ದಡೆಸೂಗುರು ಅಭ್ಯರ್ಥಿಯ ತಂದೆಯಿಂದ 15 ಲಕ್ಷ ಹಣ ಪಡೆದಿರುವ ಬಗ್ಗೆ ವಿಡಿಯೋ ಬಿಡುಗಡೆ ಮಾಡಿರುವುದಾಗಿ ಹೇಳಿದರು.
ಈ ವೇಳೆ ಮಾತನಾಡಿದ ಪ್ರಿಯಾಂಕ್ ಖರ್ಗೆ, ಸೆ.5ರಂದು ಶಾಸಕ ದಡೇಸೂಗುರು ಹಾಗೂ ಪಿಎಸ್ಐ ಅಭ್ಯರ್ಥಿಯ ತಂದೆ ಪರಸಪ್ಪ ಅವರ ಆಡಿಯೋ ವೈರಲ್ ಆಗಿತ್ತು. ಬಳಿಕ ಸೆ.6ರಂದು ಶಾಸಕರು ವೈರಲ್ ಆದ ಆಡಿಯೋ ನನ್ನದೇ ಎಂದು ಸ್ಪಷ್ಟೀಕರಣ ನೀಡಿದ್ದರು.
ಪೋಕ್ಸೋ ಪ್ರಕರಣ : ಮುರುಘಾ ಸ್ವಾಮಿಯ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ
ಈ ಘಟನೆ ನಡೆದು 1 ವಾರವಾದರೂ ಸರ್ಕಾರ ಇನ್ನೂ ಶಾಸಕರ ವಿರುದ್ಧ ಕ್ರಮ ಕೈಗೊಂಡಿಲ್ಲ. ಬಳಿಕ ಮಾತನಾಡಿದ್ದ ಶಾಸಕರೇ ನಾನವನಲ್ಲ ಎಂದು ಹೇಳಿದ್ದರು. ಈಗ ಶಾಸಕರು ಹಣ ಪಡೆದ ಬಗ್ಗೆ ವಿಡಿಯೋ ಬಿಡುಗಡೆ ಮಾಡಲಾಗಿದೆ. ಶಾಸಕರ ಭವನದಲ್ಲಿಯೇ ಕುಳಿತು ಪರಸಪ್ಪ ಅವರಿಂದ ಶಾಸಕರು ಹಣ ಪಡೆದಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More
ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
This website uses cookies.
Leave a Comment