Trending

ಸ್ಥಳೀಯ ಸಂಸ್ಥೆಗಳಲ್ಲಿ ಕಾಂಗ್ರೆಸ್​​ ಜಯಭೇರಿ – ಬಿಜೆಪಿಗೆ ಮುಖಭಂಗ : ಜೆಡಿಎಸ್​​ಗೆ ಮೂರನೇ ಸ್ಥಾನ?

ರಾಜ್ಯದ 5 ನಗರಸಭೆ, 19 ಪುರಸಭೆ & 34 ಪಟ್ಟಣ ಪಂಚಾಯ್ತಿ ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದೆ,

ನಗರಸಭೆಯ 167 ಸ್ಥಾನಗಳಲ್ಲಿ ಬಿಜೆಪಿ 67, ಕಾಂಗ್ರೆಸ್​ 61, ಜೆಡಿಎಸ್​ 12, ಇತರೆ ಅಭ್ಯರ್ಥಿಗಳು 26 ವಾರ್ಡ್​​ಗಳಲ್ಲಿ ಗೆಲುವು ದಾಖಲಿಸಿದ್ದಾರೆ.

ಪುರಸಭೆಯ 436 ಸ್ಥಾನಗಳಲ್ಲಿ ಬಿಜೆಪಿ 173, ಕಾಂಗ್ರೆಸ್​ 200, ಜೆಡಿಎಸ್​ 21, ಇತರೆ 41 ಅಭ್ಯರ್ಥಿಗಳು ಗೆಲುವಿನ ನಗೆ ಬೀರಿದ್ದಾರೆ.

ಪಟ್ಟಣ ಪಂಚಾಯತ್​ನ 582 ಸ್ಥಾನಗಳಲ್ಲಿ ಬಿಜೆಪಿ 194, ಕಾಂಗ್ರೆಸ್​​ 238, ಜೆಡಿಎಸ್ 12, ಇತರೆ ಅಭ್ಯರ್ಥಿಗಳಿಗೆ 138 ಸ್ಥಾನಗಳಲ್ಲಿ ಗೆಲುವು  ಸಿಕ್ಕಿದೆ.

434 ಸ್ಥಾನ ಗೆದ್ದ ಬಿಜೆಪಿ
ಈ ಮೂಲಕ ಒಟ್ಟು 1185 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 434 ಸ್ಥಾನವನ್ನು ಬಿಜೆಪಿ ಗೆದ್ದರೆ, 499 ಸ್ಥಾನಗಳನ್ನು ಕಾಂಗ್ರೆಸ್​ ಪಡೆದುಕೊಂಡಿದೆ. ಇನ್ನು ಜೆಡಿಎಸ್​ ಕೇವಲ 45 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿದೆ. ಇತರೆ 205 ಅಭ್ಯರ್ಥಿಗಳು ಗೆಲುವು ದಾಖಲಿಸಿದ್ದಾರೆ.

11 ಜಿಲ್ಲೆಗಳ 34 ಪಟ್ಟಣ ಪಂಚಾಯತ್​​ಗಳಾದ ಚಿತ್ರದುರ್ಗ, ದಕ್ಷಿಣ ಕನ್ನಡ, ಬೆಳಗಾವಿ,
ಚಿಕ್ಕೋಡಿ, ಹಾವೇರಿ, ವಿಜಯಪುರ,ಬಾಗಲಕೋಟೆ, ಉತ್ತರ ಕನ್ನಡ, ರಾಯಚೂರು, ಕೊಪ್ಪಳ, ಬಳ್ಳಾರಿ ಜಿಲ್ಲೆಗಳ ಪಟ್ಟಣ ಪಂಚಾಯತ್​​ಗೆ ಮತದಾನ ನಡೆದಿತ್ತು.

ಬೆಂಗಳೂರು ನಗರದ ಹೆಬ್ಬಗೋಡಿ, ಚಿಕ್ಕಮಗಳೂರು, ವಿಜಯನಗರದ ಹೊಸಪೇಟೆ ಮತ್ತು ತುಮಕೂರಿನ ಶಿರಾ ಹಾಗೂ ಗದಗ-ಬೆಟಗೇರಿ ನಗರಸಭೆಗೆ ಚುನಾವಣೆ ನಡೆದಿತ್ತು. 13 ಜಿಲ್ಲೆಗಳ 19 ಪುರಸಭೆಗಳಾದ ಧಾರವಾಡ, ಹಾವೇರಿ, ಬೆಂಗಳೂರು ನಗರ, ರಾಮನಗರ, ವಿಜಯನಗರ, ಬೆಳಗಾವಿ, ಉಡುಪಿ, ಕೊಪ್ಪಳ, ಬಳ್ಳಾರಿ, ರಾಯಚೂರು, ದಾವಣಗೆರೆ, ಚಿಕ್ಕೋಡಿ, ಯಾದಗಿರಿ ಪುರಸಭೆಗೆ ಚುನಾವಣೆ ನಡೆದಿತ್ತು.

Team Newsnap
Leave a Comment
Share
Published by
Team Newsnap

Recent Posts

ಬೆಂಗಳೂರಿನಲ್ಲಿ 10 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ

ಬೆಂಗಳೂರು : 10 ವರ್ಷದ ಬಾಲಕಿಗೆ ಚಾಕ್ಲೆಟ್ ಕೊಡಿಸುವುದಾಗಿ ನಂಬಿಸಿ ಕಾಮುಕನೊಬ್ಬ ಅತ್ಯಾಚಾರ ಎಸೆಗಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ… Read More

May 20, 2024

ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ : ಸಿಎಂ ಸಿದ್ದು

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ ಎಂದು ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ. ಪ್ಲೆಸ್ ಕ್ಲಬ್… Read More

May 20, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 20 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,400 ರೂಪಾಯಿ ದಾಖಲಾಗಿದೆ. 24… Read More

May 20, 2024

ಪೆನ್ ಡ್ರೈವ್ ಹೊಳೆಯಲ್ಲಿ ಕೊಚ್ಚಿ ಹೋಗುತ್ತಿದೆ ರಾಜ್ಯದ ಅಭಿವೃದ್ಧಿ

ಪ್ರಕರಣದಿಂದ ಸ್ವಾರ್ಥ ರಾಜಕಾರಣಿಗಳಿಗೆ, ಕೆಲ ಮಾಧ್ಯಮಗಳಿಗೆ, ಗಂಜಿ ಗಿರಾಕಿಗಳಿಗೆ ಮಾತ್ರ ಲಾಭ ?! ಬರಗಾಲದಿಂದ ರಾಜ್ಯದಲ್ಲಿ ಆಗಿರುವ ಅನಾಹುತ ,… Read More

May 20, 2024

ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ

ಕುಂದಾಪುರ : ಮೇ 16 ರ ರಾತ್ರಿ ಗೋಪಾಡಿ ಗ್ರಾಮದ ಮೂಡುಗೋಪಾಡಿಯ ನಿವಾಸಿ ಜಯಂತಿ ಶೆಟ್ಟಿ (61) ಅವರ ಮೃತದೇಹ… Read More

May 19, 2024

ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ

2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್​ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More

May 18, 2024