March 7, 2026

Newsnap Kannada

The World at your finger tips!

kaveri , news , supreme

ಮೇಲುಕೋಟೆಗೆ ಕಾಂಗ್ರೆಸ್ ಅಭ್ಯರ್ಥಿ ಹಾಕಲ್ಲ: ದರ್ಶನ್ ಬೆಂಬಲ

Spread the love

ಮೇಲುಕೋಟೆ ವಿಧಾನ ಸಭಾ ಕ್ಷೇತ್ರ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಯನ್ನು ಕಣಕ್ಕೆ ಇಳಿಸದೇ ರೈತ ಸಂಘದ ದರ್ಶನ್ ಪುಟ್ಟಣ್ಣಯ್ಯ ಅವರನ್ನೇ ಬೆಂಬಲಿಸಲು ಮಂಗಳವಾರ ನಡೆದ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆಯಲ್ಲಿ ತೀರ್ಮಾನ ಮಾಡಿದೆ.

ಜೆಡಿಎಸ್ ಸೋಲಿಸುವ ತಂತ್ರವಾಗಿ ಕಾಂಗ್ರೆಸ್ ದರ್ಶನ್ ಪುಟ್ಟಣ್ಣಯ್ಯ ಅವರನ್ನು ಬೆಂಬಲಿಸಿ ಗೆಲ್ಲಿಸುವ ರಣ ತಂತ್ರ ಮಾಡಿದೆ.

ದರ್ಶನ್ ವಿರುದ್ದ ಕಾಂಗ್ರೆಸ್ ಅಭ್ಯರ್ಥಿ ಕಣಕ್ಕೆ ಇಳಿದರೆ ಜೆಡಿಎಸ್ ಗೆ ಪಾಠ ಕಲಿಸುವುದು ಕಷ್ಟವಾಗಲಿದೆ ಎಂಬ ಲೆಕ್ಕಾಚಾರದ ಹಿನ್ನೆಲೆಯಲ್ಲಿ ಕಾಂಗ್ರೆಸ್ ತಂತ್ರ ರೂಪಿಸಿದೆ.

ಕಳೆದ ಎಂಪಿ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಕಣಕ್ಕೆ ಇಳಿಸದೇ ಸುಮಲತಾಗೆ ಬೆಂಬಲ ಸೂಚಿಸಿದ್ದು ಸುಮಲತಾ ಗೆಲುವಿಗೆ ಕಾಂಗ್ರೆಸ್ ಕಾರ್ಯ ಕರ್ತರ ಶಕ್ತಿ ತುಂಬಿದಂತಾಗಿತ್ತು. ಅದೇ ತಂತ್ರವನ್ನು ಈ ವಿಧಾನ ಸಭಾ ಚುನಾವಣೆಗೂ ಅನುಸರಿಸುವ ಜಾಣತನವನ್ನು ಕಾಂಗ್ರೆಸ್ ಮಾಡಲು ಹೊರಟಿದೆ.ಇದನ್ನು ಓದಿ –ಎರಡು – ಮೂರು ದಿನದಲ್ಲಿ ಜೆಡಿಎಸ್ ಎರಡನೇ ಪಟ್ಟಿ ಪ್ರಕಟ – ಎಚ್ ಡಿ ಕೆ

error: Content is protected !!