ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ ಅನ್ನುವ ನಂಬಿಕೆ ಡಿ.ಕೆ.ಶಿವಕುಮಾರ್ಗೆ ಯಾಕಿದೆ? ಕಾಂಗ್ರೆಸ್ಸಿನ ಸಮೀಕ್ಷೆ ತಗೊಂಡು ಡಿಕೆಶಿ ಚಿನ್ನದ ತಗಡು ಹೊಡೆಸಿಕೊಂಡು ಮನೆ, ಕಚೇರಿಯಲ್ಲಿ ಹಾಕೊಳ್ಳಲಿ. ಅವರು ಈ ಬಾರಿಗೆ ಗೆಲ್ಲುತ್ತದೆ. 50 ರಿಂದ 70 ಸೀಟ್. ನಾವು ಅಧಿಕಾರಕ್ಕೆ ಬರುತ್ತೇವೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಹೆಚ್ಡಿಕೆ, ಜೆಡಿಎಸ್ನ ಸಾಮರ್ಥ್ಯ ಹಳೆ ಮೈಸೂರು ಭಾಗದಲ್ಲಿ ಮಾತ್ರ. ನಮ್ಮ ಪೈಪೋಟಿ ಬಿಜೆಪಿ ಜೊತೆ ಮಾತ್ರ ಎಂಬ ಡಿಕೆಶಿ ಹೇಳಿಕೆಗೆ ತಿರುಗೇಟು ನೀಡಿದರು.ಹಾಸನ : ವಿದ್ಯಾರ್ಥಿಗಳ ನಡುವೆ ಮಾರಾಮಾರಿ – ಲಾಠಿ ಬೀಸಿ ನಿಯಂತ್ರಿಸಿದ ಪೊಲೀಸರು
ರಾಜ್ಯದಲ್ಲಿ ಕಾಂಗ್ರೆಸ್ ಪರಿಸ್ಥಿತಿ ಹೇಗೆ ಇದೆ ಎನ್ನುವುದು ಗೊತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್-ಬಿಜೆಪಿ ನಡುವೆ ನೇರ ಸ್ಪರ್ಧೆ ಇದೆ ಅದು ಚುನಾವಣೆ ಗೆಲ್ಲುವುದಕ್ಕೆ ಅಲ್ಲ. ಅಧಿಕಾರಕ್ಕೇ ಬಂದರೂ ಎಷ್ಟು ಪರ್ಸಂಟೇಜ್ ಪಡೆಯಬೇಕು
ಅನ್ನುವ ಎಂದು ವಾಗ್ದಾಳಿ ನಡೆಸಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸ್ವತಂತ್ರವಾಗಿ ಮೂರು ಬಾರಿ ಅಧಿಕಾರ ನಡೆಸಿದೆ. ಅದಾದ ನಂತರ ಒಂದು ಬಾರಿ 38, ಮತ್ತೊಮ್ಮೆ 62, ಇನ್ನೊಮ್ಮೆ 78 ಸ್ಥಾನ ಪಡೆದಿದೆ ಅಷ್ಟೇ. ಈ ಬಾರಿ ಕಾಂಗ್ರೆಸ್ ಅವರಿಗೆ ಗೆಲ್ಲುವ ಶಕ್ತಿ ಇರೋದು 50-70 ಸೀಟ್ ಅಷ್ಟೇ. ಸಂಪೂರ್ಣ ಬಹುಮತ ಬರುತ್ತೆ ಎನ್ನುವ ಕಾಂಗ್ರೆಸ್ಸಿಗರು, ಜೆಡಿಎಸ್ನ ಹಲವರ ಮನೆ ಕಾಯುತ್ತಿದ್ದಾರೆ.
ಇವತ್ತು ನಾನು ಹೇಳ್ತಿದ್ದೀನಿ ಬರೆದಿಟ್ಟುಕೊಳ್ಳಿ. ರಾಜ್ಯದಲ್ಲಿ ಜನತಾದಳದ ಸರ್ಕಾರ ಸಂಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸುತ್ತೆ. ನಮ್ಮ ಸರ್ಕಾರ ಬರೋದನ್ನು ಎರಡೂ ರಾಷ್ಟ್ರೀಯ ಪಕ್ಷಗಳಿಂದ ತಡೆಯುವುದಕ್ಕೆ ಆಗಲ್ಲ. ಮತ್ತೆ ರಾಜ್ಯದಲ್ಲಿ ಮೈತ್ರಿ ಸರ್ಕಾರ ಬರುವ ಸಾಧ್ಯತೆ ಇಲ್ಲ ಎಂದು ಭವಿಷ್ಯ ನುಡಿದಿದ್ದಾರೆ.
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ
- ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ
- ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್ಐಎ
- ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿಯ ಭೀಕರ ಹತ್ಯೆ