ಹಲಗೂರು:
ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಪಡೆದು ಅಧಿಕಾರ ಹಿಡಿಯುವುದರಲ್ಲಿ ಯಾವುದೇ ಸಂಶಯ ಇರುವುದಿಲ್ಲ ಹಾಗೂ ಮಳವಳ್ಳಿಯಲ್ಲಿ ನಮ್ಮ ಪಕ್ಷದ ವಿಜಯಪತಾಕೆಯನ್ನು ಹಾರಿಸುವುದು ಶತ ಸಿದ್ದವಾಗಿದೆ ಎಂದು ಮಾಜಿ ಸಚಿವ ಪಿ ಎಂ ನರೇಂದ್ರಸ್ವಾಮಿ ತಿಳಿಸಿದರು.
ಗುರುವಾರ ಹಲಗೂರಿಗೆ ಆಗಮಿಸಿದ್ದ ಪಿಎಂ ನರೇಂದ್ರಸ್ವಾಮಿ ಕಾರ್ಯಕರ್ತರ ಜೊತೆ ಮಾತನಾಡಿ ನಂತರ ‘ನ್ಯೂಸ್ ಸ್ನ್ಯಾಪ್ ‘ ಪ್ರತಿನಿಧಿಯ ಜೊತೆ ಮಾತನಾಡುತ್ತಾ ಹಲಗೂರಿನಿಂದ ಪ್ರಾರಂಭವಾಗುವ ಪ್ರಜಾದ್ವನಿ ಕಾರ್ಯಕ್ರಮ (ಫೆ 11)ಶನಿವಾರ ಮಧ್ಯಾಹ್ನ 2 ಗಂಟೆಗೆ, ನಮ್ಮ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಮೊದಲು ಹಲಗೂರು , ನಂತರ ಹಾಡ್ಲಿ ಸರ್ಕಲ್,ಸಭೆ ನಡೆಸಿ ಪ್ರಜಾದ್ವನಿ ಕಾರ್ಯಕ್ರಮದ ಪ್ರಚಾರ ಮಾಡುತ್ತಾರೆ ಎಂದರು.
ಈ ಬಾರಿ ಶತಾಯಗತಾಯ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಆಡಳಿತ ತರಬೇಕೆಂದು ಹೋರಾಟದ ಮುಂಚೂಣಿ ವಹಿಸಿರುವ ,ನಮ್ಮ ಅಧ್ಯಕ್ಷರು ಹಲವಾರು ಮುಖಂಡರುಗಳ ಜೊತೆಗೂಡಿ ಪ್ರಾರಂಭಿಸುತ್ತಿರುವ ಈ ಕಾರ್ಯಕ್ರಮದಲ್ಲಿ ಅವರಿಗೆ ಅದ್ದೂರಿ ಸ್ವಾಗತ ಕೋರಿ ,ಮಳವಳ್ಳಿಯಲ್ಲಿ ನಮ್ಮ ಪಕ್ಷದ ವಿಜಯಪತಾಕೆ ಹಾರಿಸುವ ಕಾರ್ಯಕ್ರಮ ಇದಾಗಿದೆ ,ಎಲ್ಲಾ ಮತದಾರ ,ಬಂಧುಗಳು ನಮ್ಮ ಕಾರ್ಯಕರ್ತರು ಭಾಗವಹಿಸಿ ನಮ್ಮ ಸರ್ಕಾರ ಅಧಿಕಾರಕ್ಕೆ ಬರಲು ಎಲ್ಲರೂ ಶ್ರಮಿಸಬೇಕು ಅದಕ್ಕಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ಸಿಗೊಳಿಸಿ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.
ಸಂದರ್ಭದಲ್ಲಿ ಧುಂತೂರು ವಿಶ್ವನಾಥ್. ಸುಂದರ್ ರಾಜ್. ಕೃಷ್ಣಮೂರ್ತಿ. ಹೆಚ್ ವಿ ರಾಜು. ಬೇಕ್ರಿ ಜಗ. ರವೀಶ. ಸೇರಿದಂತೆ ಇನ್ನೂ ಹೆಚ್ಚಿನ ಕಾರ್ಯಕರ್ತರು ಪಾಲ್ಗೊಂಡಿದ್ದರು.
ರಾಯಚೂರು : ರಾಯಚೂರಿನ ತಾಪಮಾನ ಹೆಚ್ಚಳದಿಂದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ನಡೆದಿದೆ. ಜನರು ಬಿಸಿ ಗಾಳಿಯಿಂದಾಗಿ ತತ್ತರಿಸುತ್ತಿದ್ದು ,… Read More
ಬೆಂಗಳೂರು : ರಾಜ್ಯದಲ್ಲಿ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು , ಮೇ 7ರಂದು ಉತ್ತರ… Read More
ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More
ತಮಿಳನಾಡಿಗೆ 275 ಕೋಟಿ ರೂ.'ನೆರೆ ಪರಿಹಾರ' ಘೋಷಣೆ ನವದೆಹಲಿ : ಕೇಂದ್ರವು ಕರ್ನಾಟಕಕ್ಕೆ 3,454 ಕೋಟಿ ರೂ. ಬರಪರಿಹಾರ, ತಮಿಳಿನಾಡಿಗೆ… Read More
ಮಂಡ್ಯ : ನಿನ್ನೆ ನಡೆದ 14 ಲೋಕಸಭಾ ಕ್ಷೇತ್ರಗಳ ಪೈಕಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಶೇ.81.67 ಮತದಾನವಾಗಿದೆ ಕಳೆದ ಬಾರಿಗಿಂತ… Read More
ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರ 9 ಗಂಟೆಗೆ ಶೇ. 7.70% ಮತದಾನ Join WhatsApp Group ವಿಧಾನಸಭಾ ಕ್ಷೇತ್ರವಾರು… Read More
This website uses cookies.
Leave a Comment