ರಾಜ್ಯ ಬಜೆಟ್ 2023 – ರಾಮನಗರದಲ್ಲಿ ಬೃಹತ್ ರಾಮಮಂದಿರ ನಿರ್ಮಾಣ :ಘೋಷಣೆ

Team Newsnap
1 Min Read
ram mandir in ramnagar karnataka

ರಾಜ್ಯ ಬಜೆಟ್ 2023 – ರಾಮನಗರದಲ್ಲಿ ಬೃಹತ್ ರಾಮಮಂದಿರ ನಿರ್ಮಾಣ ಮಾಡುವುದಾಗಿ ಸಿಎಂ ಬಜೆಟ್ ನಲ್ಲಿ ಘೋಷಣೆ ಮಾಡಿದರು.

ಯಾವುದಕ್ಕೆ ಎಷ್ಟು ಅನುದಾನ ?

  • ವಸತಿ ರಹಿತ ಮೀನುಗಾರರಿಗೆ ವಿಶೇಷ ಸೌಲಭ್ಯ, ದೋಣಿಗಳಿಗೆ ಮೋಟಾರ್ ಇಂಜಿನ್ ಅಳವಡಿಕೆ. ಮಹಿಳಾ ಕಾರ್ಮಿಕರಿಗೆ 500 ರೂ. ಸಹಾಯಧನ ನೀಡಲಾಗುವುದು, ಶಾಲಾ, ಕಾಲೇಜು ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.
  • ಆರ್ಥಿಕವಾಗಿ ಹಿಂದುಳಿದವರಿಗೆ ವಸತಿ ಯೋಜನೆ, ನೆಲೆ ಯೋಜನೆಯಡಿ 10 ಸಾವಿರ ಸೈಟ್ ವಿತರಣೆ ಮಾಡಲಾಗುವುದು.
  • ಪ್ರತಿ ಗ್ರಾ.ಪಂಗೆ 10 ಲಕ್ಷ ರೂ. ಬೆಂಗಳೂರು ಅಭಿವೃದ್ಧಿಗೆ 10 ಸಾವಿರ ಕೋಟಿ ರೂ. ನೇಕಾರ ಸಮ್ಮಾನ್ ಯೋಜನೆಯಡಿ ಸಹಾಯಧನ ಮೊತ್ತವನ್ನು 3 ಸಾವಿರ ರೂ.ನಿಂದ 5 ಸಾವಿರ ರೂ.ಗೆ ಹೆಚ್ಚಳ ಮಾಡಲಾಗಿದೆ
  • ಮುಖ್ಯಮಂತ್ರಿ ವಿದ್ಯಾಶಕ್ತಿ ಯೋಜನೆ ಜಾರಿ ಮಾಡಲಾಗಿದ್ದು, ಈ ಯೋಜನೆ ಮೂಲಕಸರ್ಕಾರಿ ಪದವಿ ಕಾಲೇಜುಗಳಲ್ಲಿ ಶುಲ್ಕ ವಿನಾಯಿತಿ, ಉಚಿತ ಉನ್ನತ ಶಿಕ್ಷಣ ಯೋಜನೆ ಜಾರಿ, 9556 ಶಾಲಾ ಕೊಠಡಿಗಳ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದ್ದಾರೆ.
  • ಬೆಂಗಳೂರು ಟ್ರಾಫಿಕ್ ಕಂಟ್ರೋಲ್ ಗೆ 150 ಕೋಟಿ ರು ವೆಚ್ಚದಲ್ಲಿ 75 ಜಂಕ್ಷನ್ ಅಭಿವೃದ್ದಿ, ವೈಟ್ ಟಾಪಿಂಗ್ 1 ಸಾವಿರ ಕೋಟಿ ರೂ. ರೂ. ಮೀಸಲಿಡಲಾಗಿದೆ. ಇದನ್ನು ಓದಿ – ರಾಜ್ಯ ಬಜೆಟ್ 2023- ಪ್ರತಿ ಗ್ರಾಮ ಪಂಚಾಯತ್‍ಗೆ 60 ಲಕ್ಷ ರು ಗಳಷ್ಟು ಅನುದಾನ
  • ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಕನ್ನಡದಲ್ಲಿ ಪರೀಕ್ಷೆಗೆ ವ್ಯವಸ್ಥೆ ಮಾಡಲಾಗುವುದು.
  • ಕಿರುಧಾನ್ಯ ಬೆಳಗಾರರಿಗೆ 10 ಸಾವಿರ ಸಹಾಯಧನ, ರಾಮನಗರದಲ್ಲಿ ಬೃಹತ್ ರಾಮಮಂದಿರ ನಿರ್ಮಾಣ, 50 ಲಕ್ಷ ಜನರಿಗೆ ಕಾವೇರಿ ನೀರು ಪೂರೈಸಲು ಕ್ರಮ , 110 ಗ್ರಾಮಗಳಿಗೆ ಕುಡಿಯುವ ನೀರಿಗೆ ಕ್ರಮ.

ರಾಜ್ಯ ಬಜೆಟ್ 2023

Share This Article
Leave a comment