ಬೆಂಗಳೂರು: ಕಾರ್ಯ ನಿರತ ಪತ್ರಕರ್ತರಾಗಿದ್ದು ಅನಾರೋಗ್ಯ ಅಥವಾ ಸಾವಿಗೆ ತುತ್ತಾದ ಸಂದರ್ಭದಲ್ಲಿ ಆ ಕುಟುಂಬಕ್ಕೆ ಗರಿಷ್ಠ 5 ಲಕ್ಷ ರೂ ನೀಡುತ್ತಿರುವ ನೆರವನ್ನು ಮುಂದುವರೆಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಮ್ಮತಿಸಿದ್ದಾರೆ.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (KUWJ) ಅಧ್ಯಕ್ಷರಾದ ಶಿವಾನಂದ ತಗಡೂರು ನೇತೃತ್ವದ ನಿಯೋಗದ ಮನವಿಯನ್ನು ಸ್ವೀಕರಿಸಿದ ಮುಖ್ಯಮಂತ್ರಿಗಳು, ಪತ್ರಕರ್ತರ ಕಲ್ಯಾಣಕ್ಕೆ ಪೂರಕವಾದ ಬೇಡಿಕೆಗಳ ಈಡೇರಿಕೆಗೆ ಬಜೆಟ್ ನಲ್ಲಿ ಸೇರ್ಪಡೆಗೊಳಿಸುವ ಬಗ್ಗೆ ಸಕರಾತ್ಮಕವಾಗಿ ಸ್ಪಂದಿಸಿದ್ದಲ್ಲದೆ ಹಾಲಿ ನೀಡಲಾಗುತ್ತಿರುವ ನೆರವನ್ನು ಮುಂದುವರೆಸಲಾಗುವುದು ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದರು.
ವಿಜಯಪುರ ವಿವಿಯಲ್ಲಿ ಹಿರಿಯ ಪತ್ರಕರ್ತರಾದ ಮೊಹರೆ ಹಣುಮಂತರಾಯ ಬೆಂಗಳೂರು ವಿವಿಯಲ್ಲಿ ಎಚ್.ಎಸ್.ದೊರೆಸ್ವಾಮಿ ಮತ್ತು ಧಾರವಾಡ ವಿಶ್ವವಿದ್ಯಾಲಯಗಳಲ್ಲಿ ಹಿರಿಯ ಪತ್ರಕರ್ತರಾದ ಪಾಟೀಲ್ ಪುಟ್ಟಪ್ಪ (ಪಾಪು) ಅವರ ಹೆಸರಿನಲ್ಲಿ ಪತ್ರಿಕೋದ್ಯಮ ವಿಭಾಗದಲ್ಲಿ ಆಧ್ಯಯನಪೀಠ ಸ್ಥಾಪಿಸಬೇಕೆಂಬ ಸಂಘದ ಮನವಿಗೆ ಮುಖ್ಯಮಂತ್ರಿಗಳು ಸ್ಪಂದಿಸಿದ್ದು ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ತಾಲ್ಲೂಕು ಕೇಂದ್ರಗಳಲ್ಲಿ ಪತ್ರಿಕಾ ಭವನ ನಿರ್ಮಾಣಕ್ಕೆ ಹಣಕಾಸು ಸ್ಥಿತಿ ನೋಡಿ ನೆರವು, ಬಸ್ ಪಾಸ್, ಜಾಹೀರಾತು ಹಣ ಶೀಘ್ರ ಬಿಡುಗಡೆ ಸೇರಿದಂತೆ ಅನೇಕ ಬೇಡಿಕೆಗಳ ಬಗ್ಗೆ ಪರಿಶೀಲನೆ ನಡೆಸುವುದಾಗಿ ತಿಳಿಸಿದರು.
ನಿಯೋಗದಲ್ಲಿ ಕೆಯುಡಬ್ಲ್ಯಜೆ ಪ್ರಧಾನ ಕಾರ್ಯದರ್ಶಿ ಲೊಕೇಶ್, ನಿರ್ದೇಶಕರಾದ ಎನ್.ರವಿಕುಮಾರ್, ಜೆ.ಆರ್.ಕೆಂಚೇಗೌಡ, ಚೆಲುವರಾಜ್, ದೇವೇಂದ್ರಪ್ಪ ಕಪನೂರು, ಸೋಮಶೇಖರ ಕೆರಗೋಡು, ಮುನಿಕೃಷ್ಣಪ್ಪ, ಗಣಪತಿ ಗಂಗೊಳ್ಳಿ, ದೇವರಾಜು,
ತೇಜಸ್ವಿನಿ, ರಶ್ಮಿಪಾಟೀಲ್ ಮೊದಲಾದವರಿದ್ದರು.
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More
ಬಾಗಲಕೋಟೆ : ಡಿಸಿಎಂ ಡಿ.ಕೆ.ಶಿವಕುಮಾರ್ , ಬಿಜೆಪಿ ಮುಖಂಡರು ಪ್ರಜ್ವಲ್ ರೇವಣ್ಣ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ? ಹೆಣ್ಣುಮಕ್ಕಳಿಗೆ ಸಾಂತ್ವನ… Read More
ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More
This website uses cookies.
Leave a Comment