ರಾಜ್ಯದಾದ್ಯಂತ ಸಾರಿಗೆ ನೌಕರರು ನಡೆಸಿರುವ ಮುಷ್ಕರ ಐದನೇ ದಿನಕ್ಕೆ ಕಾಲಿಟ್ಟಿದೆ.
ಯುಗಾದಿ ಹಬ್ಬದ ಜೊತೆ ಸಾಲು ಸಾಲು ರಜೆ ಹಿನ್ನೆಲೆ ಜನರು ಊರುಗಳತ್ತ ಪ್ರಯಾಣಿಸಲು ಮುಂದಾಗಿದ್ದಾರೆ. ಕೆಎಸ್ಆರ್ ಟಿಸಿ, ಬಿಎಂಟಿಸಿ ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗುತ್ತಿದೆ. ಆದರೆ ಬಸ್ ಸಿಗದ ಹಿನ್ನೆಲೆ ಪ್ರಯಾಣಿಕರು ಆಕ್ರೋಶ
ವ್ಯಕ್ತಪಡಿಸಿದ್ದಾರೆ.
ಈ ನಡುವೆ ಮುಷ್ಕರದಲ್ಲಿ ಭಾಗಿಯಾಗಿರುವ ಬಿಎಂಟಿಸಿಯ 60 ಟ್ರೈನಿ ನೌಕರರು, 58 ಪ್ರೋಬೇಷನರಿ ಸಿಬ್ಬಂದಿ, ಸೇರಿ ಒಟ್ಟು 118 ನೌಕರರನ್ನು ಕೆಲಸದಿಂದ ವಜಾ ಮಾಡಲಾಗಿದೆ.
ಕೆಎಸ್ಆರ್ ಟಿಸಿ 141 ಜನ ಉದ್ದೋಗಿಗಳನ್ನು ವರ್ಗಾವಣೆ ಮಾಡಿದೆ. ಮುಷ್ಕರಕ್ಕೆ ಬೆಂಬಲಿಸಿ ಕೆಲಸಕ್ಕೆ ಗೈರಾಗಿದ್ದ ಹಾವೇರಿ ಡಿಪೋದ 17 ಸಿಬ್ಬಂದಿಯನ್ನು ವರ್ಗಾವಣೆ ಮಾಡಲಾಗಿದೆ.
ಕೆಲವೆಡೆ ಬಸ್ ಸಂಚಾರ ಆರಂಭ :
ಬಂದ್ನ 4ನೇ ದಿನ 1,220 ಬಸ್ಗಳು ಸಂಚಾರ ನಡೆಸಿವೆ. ಕೆಎಸ್ಆರ್ ಟಿಸಿ 597, ಬಿಎಂಟಿಸಿಯ 171, ಈಶಾನ್ಯ ಸಾರಿಗೆಯ 290, ವಾಯುವ್ಯ ಸಾರಿಗೆಯ 162 ಬಸ್ ಸಂಚಾರ ಮಾಡಿವೆ. ಸರ್ಕಾರಿ ಬಸ್ಗಳು ಬಂದ್ ಆಗಿರುವ ಹಿನ್ನೆಲೆ ಪರ್ಯಾಯವಾಗಿ ಖಾಸಗಿ ಬಸ್ಗಳನ್ನೇನೋ ರಸ್ತೆಗೆ ಇಳಿಸಲಾಗಿದೆ.
ಜನ ಇನ್ನು ಸಹ ಪ್ರೈವೇಟ್ ಬಸ್ಗಳ ಕಡೆ ಮುಖ ಮಾಡುತ್ತಿಲ್ಲ. ಹಲವು ಕಡೆ ಖಾಸಗಿ ಬಸ್ಗಳು ಹೆಚ್ಚು ದರ ವಿಧಿಸುತ್ತಿರೋದೆ ಇದಕ್ಕೆ ಕಾರಣವಾಗಿದೆ.
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ದೊಡ್ಡ ಸಂಕಷ್ಟ ಮುಂದೆ ಅಧೀನ ನ್ಯಾಯಾಲಯ ತೀರ್ಪು ಘೋಷಿಸಬಹುದು ಸುಪ್ರೀಂ ಕೋರ್ಟ್ ಬಾಗಿಲು ತಟ್ಟಲು… Read More
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮತ್ತೆ ಮಹಿಷ ದಸರಾ ಕೂಗು ಕೇಳಿ ಬಂದಿದ್ದು ,ಈ ಬಾರಿಯೂ ಮಹಿಷ ದಸರಾ ವಿವಾದ… Read More
ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಮತ್ತು ಎ2 ಆರೋಪಿಯಾಗಿರುವ… Read More
ಮೈಸೂರು: ಸೆ. 24 ರಂದು ಸಂಜೆ 6 ಗಂಟೆಗೆ ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ದಸರಾ ಮಹೋತ್ಸವ -2024 ರ ಯುವ… Read More
ಮೈಸೂರು : ನಾಡ ಹಬ್ಬ ಮೈಸೂರು ದಸರಾ ಮಹೋತ್ಸವ 2024 ರ ಹಿನ್ನೆಲೆಯಲ್ಲಿ ದಸರಾ ಚಲನಚಿತ್ರೋತ್ಸವ ಪೋಸ್ಟರ್ ಗಳನ್ನು ಜಿಲ್ಲಾ… Read More
ಸ್ವಾವಲಂಬಿ ಸ್ತ್ರೀ ಆರ್ಥಿಕವಾಗಿ ಹಿಂದುಳಿದ ಹಿನ್ನೆಲೆಯ ಅರ್ಹ ಮಹಿಳೆಯರು ಉಚಿತವಾಗಿ ಆಟೋ ರಿಕ್ಷಾ ಚಾಲನಾ ತರಬೇತಿಯನ್ನು ಪಡೆಯಲು ಮತ್ತು ಆದಾಯ… Read More
This website uses cookies.
Leave a Comment