ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಎಲ್ಲಾ ವಾಹನಗಳನ್ನು ಎಲೆಕ್ಟ್ರಿಕ್ ವಾಹನಗಳಾಗಿ ಬದಲಾವಣೆ ಮಾಡುವುದಾಗಿ ಸಚಿವ ನಿತಿನ್ ಗಡ್ಕರಿ ಪ್ರಕಟಿಸಿದ್ದಾರೆ.
ಲಾಂಚ್ ಗೋ ಎಲೆಕ್ಟ್ರಿಕ್ ಅಭಿಯಾನದಲ್ಲಿ ಮಾತನಾಡಿದ ಸಚಿವ ಗಡ್ಕರಿ, ನಾವು ವಿದ್ಯುತ್ ಉಪಕರಣಗಳಿಗೆ ಏಕೆ ಸಬ್ಸಿಡಿ ಕೊಡಬಾರದು? ಅಡುಗೆ ಅನಿಲ ಸಬ್ಸಿಡಿ ನೀಡುತ್ತಿರುವ ಮಾದರಿಯಲ್ಲಿ ವಿದ್ಯುತ್ ಉಪಕರಣಗಳಿಗೆ ಸಬ್ಸಿಡಿ ನೀಡಬಹುದು. ಇದರಿಂದ ಅನಿಲದ ಮೇಲಿನ ಆಮದು ಅವಲಂಬನೆ ಕಡಿಮೆ ಮಾಡಬಹುದು ಎಂದು ತಿಳಿಸಿದ್ದಾರೆ.
ಭಾರತದ ತೈಲ ಆಮದು ಅವಲಂಬನೆ ಕಡಿತಗೊಳಿಸುವ ಪ್ರಯತ್ನದಲ್ಲಿ ಇತರ ಇಲಾಖೆಗಳು ಕೂಡ ಸರ್ಕಾರಿ ವಾಹನಗಳನ್ನು ಎಲೆಕ್ಟ್ರಿಕ್ ವಾಹನಗಳಾಗಿ ಪರಿವರ್ತಿಸುವಂತೆ ಸಚಿವರು ಸಲಹೆ ನೀಡಿದ್ದಾರೆ.
ಎಲ್ಲಾ ಸರ್ಕಾರಿ ಅಧಿಕಾರಿಗಳಿಗೆ ಎಲೆಕ್ಟ್ರಿಕ್ ವಾಹನ ಬಳಕೆಯನ್ನು ಕಡ್ಡಾಯಗೊಳಿಸಬೇಕೆಂದು ಸಲಹೆ ನೀಡಿದ್ದಾರೆ. ವಿದ್ಯುತ್ ಸಚಿವ ಆರ್.ಕೆ. ಸಿಂಗ್ ಅವರಿಗೆ ಸಲಹೆ ನೀಡಿದ ನಿತಿನ್ ಗಡ್ಕರಿ, ತಮ್ಮ ಇಲಾಖೆಗಳ ಅಧಿಕಾರಿಗಳಿಗೆ ಎಲೆಕ್ಟ್ರಿಕ್ ವಾಹನಗಳನ್ನು ಬಳಕೆ ಮಾಡುವುದನ್ನು ಕಡ್ಡಾಯಗೊಳಿಸುವಂತೆ ಸೂಚಿಸಿದ್ದಾರೆ.
ಅಡುಗೆ ಅನಿಲ ದರ ಭಾರಿ ದುಬಾರಿಯಾಗಿದೆ. ಅಡುಗೆಗಾಗಿ ಆಮದು ಮಾಡಿದ ದುಬಾರಿ ಅನಿಲ ಖರೀದಿಸುವ ಬದಲು ವಿದ್ಯುತ್ ಒಲೆ ಉಪಕರಣಗಳನ್ನು ಖರೀದಿಸಲು ಸಹಾಯಧನ ನೀಡುವಂತೆ ಸಚಿವರು ಸಲಹೆ ನೀಡಿದ್ದಾರೆ.
ಸಚಿವರ ಲೆಕ್ಕಾಚಾರದ ಪ್ರಕಾರ, ದೆಹಲಿಯಲ್ಲಿ 10,000 ಎಲೆಕ್ಟ್ರಿಕ್ ವಾಹನಗಳನ್ನು ಬಳಸುವುದರಿಂದ ಸುಮಾರು 30 ಕೋಟಿ ರೂಪಾಯಿಯಷ್ಟು ಉಳಿತಾಯವಾಗಬಹುದು. ಎಲೆಕ್ಟ್ರಿಕ್ ಅಡುಗೆ ಉಪಕರಣಗಳನ್ನು ಬಳಸುವುದರಿಂದ ಆಮದು ಮಾಡಿದ ಅಡುಗೆ ಅನಿಲ ದರಕ್ಕಿಂತ ಕಡಿಮೆ ಖರ್ಚಿನಲ್ಲಿ ಅಡುಗೆ ಮಾಡಬಹುದು ಎಂದು ಹೇಳಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ