ಉಗ್ರರ ವಿರುದ್ಧ ಸಮರ ಸಾರಿರುವ ರಾಷ್ಟ್ರೀಯ ತನಿಖಾ ತಂಡ (ಎನ್ಐಎ) ಮಂಗಳೂರಿನ ಉಳ್ಳಾಳದಲ್ಲಿ ದೀಪ್ತಿ ಮಾರ್ಲಾ ಅಲಿಯಾಸ್ ಮರಿಯಂ ಎಂಬ ಮಹಿಳೆಯನ್ನು ಬಂಧಿಸಿ ವಿಚಾರಣೆ ನಡೆಸಿರುವ ಅನೇಕ
ಸ್ಪೋಟಕ ಸಂಗತಿಗಳು ಬಯಲಾಗಿವೆ
ದಂತ ವೈದ್ಯೆ ಆಗಿರುವ ದೀಪ್ತಿ ಮಾರ್ಲಾ, ಹನಿಟ್ರ್ಯಾಪ್ ಮೂಲಕ ಯುವಕರನ್ನು ಮತಾಂತರಗೊಳಿಸಿ ಐಸಿಸ್ ಉಗ್ರ ಸಂಘಟನೆಗೆ ಸೇರಿಸುತ್ತಿದ್ದಳು ಎಂಬ ಸಂಗತಿ ಬಹಿರಂಗಗೊಂಡಿದೆ
ದೀಪ್ತಿ ಮಾರ್ಲಾ ಹಿಸ್ಟರಿ ಹೀಗಿದೆ:
ದೀಪ್ತಿ ಮಾರ್ಲಾ ಮೂಲತಃ ಕೇರಳದ ಕಾಸರಗೋಡು ಜಿಲ್ಲೆಯವಳು. ಓದಲು ಮಂಗಳೂರಿನ ಮೆಡಿಕಲ್ ಕಾಲೇಜಿಗೆ ಬಂದಾಗ ಮಾಜಿ ಶಾಸಕ, ದಿವಂಗತ ಇದಿನಬ್ಬರ ಪುತ್ರ ಬಿ.ಎಂ.ಬಾಷಾರ ಎರಡನೇ ಮಗ ಅನಾಸ್ರನ್ನ ಪ್ರೀತಿಸಿ ಮದುವೆಯಾಗಿದ್ದಳು.
ಇನ್ನು ಮದ್ವೆ ಆಗುವುದಕ್ಕೂ ಮುನ್ನ ಈಕೆ ಹಿಂದೂ ಧರ್ಮದಿಂದ ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡಿದ್ದಳು.
ಸೋಶಿಯಲ್ ಮೀಡಿಯಾದಲ್ಲಿ ನಕಲಿ ಖಾತೆ ನಂತರ ಕ್ರೋನಿಕಲ್ ಪೌಂಡೇಶನ್ ಎಂಬ ಇನ್ಸ್ಟಾಪೇಜ್ ಮೂಲಕ ಐಸಿಸ್ಗೆ ಕೆಲಸ ಮಾಡಲು ಶುರು ಮಾಡಿಕೊಂಡಿದ್ದಳು.
ನಂತರ ಪತಿ ಅನಾಸ್ ಅಬ್ದುಲ್ ರೆಹಮಾನ್, ಸಂಬಂಧಿ ಅಮರ್ ಅಬ್ದುಲ್ ರೆಹಮಾನ್ ಸೂಚನೆಗಳಂತೆ ಐಸಿಸ್ ಪರವಾಗಿ ಕೆಲಸ ಮಾಡುತ್ತಿದ್ದಳು. ಸೋಷಿಯಲ್ ಮೀಡಿಯಾಗಳಲ್ಲಿ ಸುಮಾರು 15 ನಕಲಿ ಖಾತೆಗಳನ್ನು ಹೊಂದಿದ್ದಳು.
ಈ ಹಿಂದೆ ಎನ್ಐಎನಿಂದ ಬಂಧಿತನಾಗಿದ್ದ ಮಾದೇಶ ಪೆರುಮಾಳ್ನನ್ನು ಮತಾಂತರ ಮಾಡಿ ಐಸಿಸ್ಗೆ ಕೆಲಸ ಮಾಡುವಂತೆ ಮಾಡಿದ್ದು ಇದೇ ದೀಪ್ತಿ ಅನ್ನೋದು ತನಿಖೆಯಿಂದ ತಿಳಿದುಬಂದಿದೆ ಅಂತಾ ಹೇಳಲಾಗಿದೆ.
ಇದುವರೆಗೂ 10 ಯುವಕರ ಮತಾಂತರ ಮಾಡಿದ ನಂತರ ಮಾದೇಶ್ ಪೆರುಮಾಳ್ನನ್ನು ಹನಿಟ್ರಾಪ್ ಮಾಡಲು 10 ಲಕ್ಷ ರೂಪಾಯಿ ಖರ್ಚು ಮಾಡಿದ್ದಳಂತೆ. ಸದ್ಯ ದೀಪ್ತಿ ಮಾರ್ಲಾಳನ್ನು ದೆಹಲಿಗೆ ಕರೆದೊಯ್ದು ತೀವ್ರ ವಿಚಾರಣೆ ನಡೆಸಲಾಗುತ್ತಿದೆ.
ಐದು ದಿನಗಳ ಜೈಲು ವಾಸಕ್ಕೆ ಅಂತ್ಯ 5 ಲಕ್ಷ ರು ಬಾಂಡ್ , ಎಸ್ ಐಟಿ ತನಿಖೆಗೆ ಸಹಕರಿಸಬೇಕು ಎಂಬ… Read More
ಬೆಂಗಳೂರು : ಪ್ರಜ್ವಲ್ ರೇವಣ್ಣ ವಿಚಾರದ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಲೇ ಇದೆ. ಈ ಕೇಸ್ನಲ್ಲಿ ಸಂತ್ರಸ್ತೆ… Read More
ಹೈದ್ರಾಬಾದ್ : ನಿಜ ಹೇಳಬೇಕು ಅಂದ್ರೆ ಅಪಘಾವಾದ ಸ್ಥಳಕ್ಕೆ ಆಂಬ್ಯುಲೆನ್ಸ್ ಸುಮಾರು 20 ನಿಮಿಷಗಳ ಕಾಲ ತಡವಾಗಿ ಬಂದಿದ್ದಕ್ಕೆ ಆಕೆ… Read More
ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ( CBSE ) 12ನೇ ತರಗತಿ ಫಲಿತಾಂಶ ಇಂದು ಪ್ರಕಟವಾಗಿದ್ದು… Read More
ಬೆಂಗಳೂರು : ಮುಂದಿನ 5 ದಿನ ರಾಜ್ಯದಾದ್ಯಂತ ಭಾರಿ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ… Read More
ಬೆಂಗಳೂರು : ತೆಲುಗಿನ 'ತ್ರಿನಯನಿ' ಧಾರಾವಾಹಿಯಲ್ಲಿ ಜನಪ್ರಿಯರಾಗಿರುವ ಕನ್ನಡತಿ, ಮಂಡ್ಯದ ಹನಕೆರೆ ಪವಿತ್ರ ಜಯರಾಂ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಆಂಧ್ರಪ್ರದೇಶದ ಕರ್ನೂಲು… Read More
This website uses cookies.
Leave a Comment