ಮಂಗಳೂರಿನಲ್ಲಿ ಬಾಂಬ್ ಸ್ಫೋಟ ಮಾಡಿದ್ದ ವ್ಯಕ್ತಿ ನಕಲಿ ಆಧಾರ್ ವಿಳಾಸ ನೀಡಿದ್ದ ಬೆನ್ನಲ್ಲೇ ಆತ ಯಾರು? ಆತನ ಮೂಲ ಯಾವುದು ಎನ್ನುವುದರ ಬೆನ್ನು ಬಿದ್ದಿದ್ದ ಪೊಲೀಸರು ಕೊನೆಗೂ ಆತ ಯಾರು ಎಂಬುದನ್ನು ಪತ್ತೆ ಹಚ್ಚಿದ್ದಾರೆ.ಮಂಗಳೂರಿನಲ್ಲಿ ಆಟೋದಲ್ಲಿ ನಿಗೂಢ ಸ್ಪೋಟ ಪ್ರಕರಣ : ಅನುಮಾನಸ್ಪದ ವಸ್ತುಗಳು ಪತ್ತೆ – ಉಗ್ರ ಕೃತ್ಯ DGP
ತುಂಗಾ ನದಿಯ ತೀರದಲ್ಲಿ ಬಾಂಬ್ ಸ್ಫೋಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಪೊಲೀಸರು ಸೆಪ್ಟೆಂಬರ್ 19 ರಂದು ಸಿದ್ದೇಶ್ವರ ನಗರ ನಿವಾಸಿಯಾದ ಸೈಯದ್ ಯಾಸಿನ್(21) ಮತ್ತು ಮಂಗಳೂರಿನ ಮಾಜ್ ಮುನೀರ್ನನ್ನು(22) ಬಂಧಿಸಿದ್ದರು. ಆದರೆ ಈ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ತೀರ್ಥಹಳ್ಳಿಯ ಸೊಪ್ಪುಗುಡ್ಡೆ ಮೂಲದ ಶಾರೀಕ್ ನಾಪತ್ತೆಯಾಗಿದ್ದನು.
ಈತನ ಬಂಧನಕ್ಕೆ ಪೊಲೀಸರು ಸಾಕಷ್ಟು ಬಲೆ ಬೀಸಿದ್ದರೂ ಸಿಕ್ಕಿ ಬಿದ್ದಿರಲಿಲ್ಲ. ಆದರೆ ಈಗ ಮಂಗಳೂರಿನಲ್ಲಿ ಕುಕ್ಕರ್ ಬ್ಲಾಸ್ಟ್ ಮಾಡಿ ಸಿಕ್ಕಿಬಿದ್ದಿದ್ದಾನೆ. ಆಟೋದಲ್ಲಿ ಕುಕ್ಕರ್ ಸ್ಫೋಟಗೊಂಡು ಗಂಭೀರ ಗಾಯಗೊಂಡಿದ್ದ ಶಾರೀಕ್ಗೆ ಈಗ ಮಂಗಳೂರಿನ ಫಾದರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು