Categories: Main News

ಕನ್ನಡದ ನಿರ್ಮಾಪಕ, ಹೀರೋ ಸೇರಿ ನಿರ್ದೇಶಕನೂ ಕೊರೋನಾಗೆ ಬಲಿ‌

ಕೊರೋನಾ ವೈರಸ್​ ನ ಎರಡನೇ ಅಲೆಗೆ ಸ್ಯಾಂಡಲ್​ವುಡ್​ ಯುವ ನಟ ಹಾಗೂ ನಿರ್ಮಾಪಕ ಡಾ. ಡಿ.ಎಸ್. ಮಂಜುನಾಥ್ ಏಪ್ರಿಲ್​ ಹಾಗೂ ಮಂಜುನಾಥ್ ನಿರ್ಮಾಣ ಮಾಡಿದ ಎರಡು ಚಿತ್ರಗಳ ನಿರ್ದೇಶಕ ಅಭಿರಾಮ್ ಕೋವಿಡ್​ಗೆ ಇಂದು ಬಲಿಯಾಗಿದ್ದಾರೆ.

ಡಿ.ಎಸ್.‌ ಮಂಜುನಾಥ್.‌ ‘ಸಂಯುಕ್ತ-2’ ಸಿನಿಮಾದ ಮೂಲಕ ನಿರ್ಮಾಪಕರಾಗಿ ಮತ್ತು ನಟನಾಗಿ ಚಿತ್ರರಂಗಕ್ಕೆ ಕಾಲಿಟ್ಟಿದ್ದರು.

ನಂತರ ಕೆಮಿಸ್ಟ್ರಿ ಆಫ್‌ ಕರಿಯಪ್ಪ ಸಿನಿಮಾವನ್ನು ನಿರ್ಮಿಸಿ ಹೆಸರು ಮಾಡಿದರು. ಸದ್ಯ ‘೦% ಲವ್‌’ ಚಿತ್ರದಲ್ಲಿ ಹೀರೋ ಆಗಿ ಕೂಡ ನಟಿಸುತ್ತಿದ್ದರು.

‘ಸಂಯುಕ್ತ 2’ ಮತ್ತು ‘೦% ಲವ್‌’ ಎರಡೂ ಚಿತ್ರಗಳನ್ನು ನಿರ್ದೇಶನ ಮಾಡಿದ್ದು ಅಭಿರಾಮ್.‌ ಈಗ ಅಭಿರಾಮ್‌ ಕೂಡಾ ಮಂಜುನಾಥ್‌ ಅವರನ್ನು ಹಿಂಬಾಲಿಸಿದ್ದಾರೆ.

ಅಭಿರಾಮ್​ ಕಳೆದೊಂದು ವಾರದಿಂದ ಜ್ವರ, ಕೆಮ್ಮಿನಿಂದ ಬಳಲುತ್ತಿದ್ದರು. ಆದರೆ, ಪರೀಕ್ಷೆ ಮಾಡಿಸಿಕೊಳ್ಳದೆ ಮನೆಯಲ್ಲೇ ಇದ್ದರು.

ಇತ್ತೀಚೆಗೆ ಉಸಿರಾಟದ ತೊಂದರೆ ಅವರಲ್ಲಿ ಹೆಚ್ಚಾಗಿತ್ತು. ಈಗ ಅವರು ಹೃದಯಾಘಾತವಾಗಿ ಕೊನೆಯುಸಿರೆಳೆದಿದ್ದಾರೆ.

ಸಿನಿಮಾ ತೆರೆಗೆ ಬರುವ ಮುನ್ನವೇ ಚಿತ್ರದ ಹೀರೋ ಮತ್ತು ಡೈರೆಕ್ಟರ್‌ ಮೃತಪಟ್ಟಿದ್ದಾರೆ.

ಸೆಲೆಬ್ರಿಟಿಗಳಾದ ಬಾಲಿವುಡ್​ ನಟ ರಾಹುಲ್ ವೋಹ್ರಾ, ತೆಲುಗು ನಟ ಟಿಎನ್​ಆರ್​, ತಮಿಳು ನಟ ಪಾಂಡು, ಕಾಲಿವುಡ್ ನಿರ್ದೇಶಕ ಕೆ.ವಿ. ಆನಂದ್, ಕನ್ನಡದ ಖ್ಯಾತ ನಿರ್ಮಾಪಕ ಕೋಟಿ ರಾಮು, ಯುವ ನಟ- ನಿರ್ಮಾಪಕ ಡಿ.ಎಸ್. ಮಂಜುನಾಥ್, ಕಾರ್ಯಕಾರಿ ನಿರ್ಮಾಪಕ ರಾಜಶೇಖರ್, ಪೋಸ್ಟರ್ ಡಿಸೈನರ್ ಮಸ್ತಾನ್, ಪುಟ್ಟಣ್ಣ ಕಣಗಾಲ್ ಪುತ್ರ ರಾಮು, ಕವಿರತ್ನ ಕಾಳಿದಾಸ ಸಿನಿಮಾ ನಿರ್ದೇಶಕ ರೇಣುಕಾ ಶರ್ಮಾ ಮುಂತಾದವರನ್ನು ಈ ಮಹಾಮಾರಿ ಬಲಿ ಪಡೆದುಕೊಂಡಿದೆ.

Team Newsnap
Leave a Comment
Share
Published by
Team Newsnap

Recent Posts

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 15 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,750 ರೂಪಾಯಿ ದಾಖಲಾಗಿದೆ. 24… Read More

May 15, 2024

ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ

ಮುಂಬೈ: ನಿನ್ನೆ ಬೀಸಿದ ಬಿರುಗಾಳಿಗೆ ನಗರದಲ್ಲಿ ತಲೆಎತ್ತಿದ್ದ ಅಕ್ರಮ ಜಾಹಿರಾತು ಫಲಕ ಕುಸಿದು, 8 ಮಂದಿ ಸಾವನ್ನಪ್ಪಿದ್ದು, 60 ಜನರು… Read More

May 14, 2024

ರೇವಣ್ಣ ರಿಲೀಸ್ : ಬಿಗ್ ರಿಲೀಪ್

ಐದು ದಿನಗಳ ಜೈಲು ವಾಸಕ್ಕೆ ಅಂತ್ಯ ⁠5 ಲಕ್ಷ ರು ಬಾಂಡ್ , ಎಸ್ ಐಟಿ ತನಿಖೆಗೆ ಸಹಕರಿಸಬೇಕು ಎಂಬ… Read More

May 13, 2024

ನನ್ನನ್ನು ಯಾರು ಅಪಹರಣ ಮಾಡಿಲ್ಲ, ಮಗ ತಪ್ಪು ದೂರು ಕೊಟ್ಟಿದ್ದಾನೆ ಎಂದ ಕಿಡ್ನ್ಯಾಪ್ ಸಂತ್ರಸ್ತೆ

ಬೆಂಗಳೂರು : ಪ್ರಜ್ವಲ್‌ ರೇವಣ್ಣ ವಿಚಾರದ ಕಿಡ್ನ್ಯಾಪ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಕ್ಕೊಂದು ಟ್ವಿಸ್ಟ್‌ ಪಡೆದುಕೊಳ್ಳುತ್ತಲೇ ಇದೆ. ಈ ಕೇಸ್‌ನಲ್ಲಿ ಸಂತ್ರಸ್ತೆ… Read More

May 13, 2024

ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿದ್ದರೆ ಮಂಡ್ಯದ ನಟಿ ಪವಿತ್ರಾ ಸಾಯುತ್ತಿರಲಿಲ್ಲ- ಗೆಳೆಯ ಚಂದ್ರಕಾಂತ್

ಹೈದ್ರಾಬಾದ್ : ನಿಜ ಹೇಳಬೇಕು ಅಂದ್ರೆ ಅಪಘಾವಾದ ಸ್ಥಳಕ್ಕೆ ಆಂಬ್ಯುಲೆನ್ಸ್ ಸುಮಾರು 20 ನಿಮಿಷಗಳ ಕಾಲ ತಡವಾಗಿ ಬಂದಿದ್ದಕ್ಕೆ ಆಕೆ… Read More

May 13, 2024

CBSE 12 ನೇ ತರಗತಿಯ ಫಲಿತಾಂಶ ಪ್ರಕಟ: ಇಲ್ಲಿದೆ ಫಲಿತಾಂಶವನ್ನು ಪರಿಶೀಲಿಸಲು ನೇರ ಲಿಂಕ್

ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ( CBSE ) 12ನೇ ತರಗತಿ ಫಲಿತಾಂಶ ಇಂದು ಪ್ರಕಟವಾಗಿದ್ದು… Read More

May 13, 2024