ಭಾರತೀಯ ಕ್ರಿಕೆಟ್ ಮಂಡಳಿ(ಬಿಸಿಸಿಐ) ಈ ವಿಷಯ ತಿಳಿಸಿ , ಏಷ್ಯಾಕಪ್ಗೆ ದಿನಗಣನೆ ಆರಂಭವಾಗಿದೆ. ಆ. 28ರಂದು ನಡೆಯುವ ಭಾರತ, ಪಾಕಿಸ್ತಾನ ಹೈವೋಲ್ಟೇಜ್ ಕದನಕ್ಕೂ ಮೊದಲು ಟೀಂ ಇಂಡಿಯಾಕ್ಕೆ ಮೊದಲ ಆಘಾತವಾಗಿದೆ.
2022ರ ಏಷ್ಯಾ ಕಪ್ಗಾಗಿ ಯುಎಇಗೆ ತೆರಳುವ ಹಿನ್ನೆಲೆಯಲ್ಲಿ ಟೀಂ ಇಂಡಿಯಾ ತಂಡದ ಸದಸ್ಯರಿಗೆ ಹಾಗೂ ಸಿಬ್ಬಂದಿಗೆ ಕೊರೊನಾ ಪರೀಕ್ಷೆ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಟೀಂ ಇಂಡಿಯಾ ಕೋಚ್ ದ್ರಾವಿಡ್ಗೆ ಕೊರೊನಾ ಪಾಸಿಟಿವ್ ಬಂದಿದೆ. ಇದನ್ನು ಓದಿ – ಆ. 26 ರ ಮಡಿಕೇರಿ ಚಲೋ ಮುಂದೂಡಿಕೆ – ಸಿದ್ದರಾಮಯ್ಯ
ದ್ರಾವಿಡ್ಗೆ ಸೋಂಕಿನ ರೋಗ ಲಕ್ಷಣವು ಸೌಮ್ಯ ರೋಗಲಕ್ಷಣಗಳಿದೆ. ಈ ಹಿನ್ನೆಲೆಯಲ್ಲಿ ಆ.27ರಿಂದ ನಡೆಯಲಿರುವ ಏಷ್ಯಾ ಕಪ್ ಟೂರ್ನಿಯಿಂದ ಹೊರಗುಳಿದಿದ್ದಾರೆ, ಕೊರೊನಾ ನೆಗೆಟಿವ್ ಬಂದ ನಂತರದಲ್ಲಿ ಮತ್ತೆ ತಂಡಕ್ಕೆ ಸೇರುವ ಸಾಧ್ಯತೆಯಿದೆ ಎಂದು ಬಿಸಿಸಿಐ ತಿಳಿಸಿದೆ.
ಜಿಂಬಾಬ್ವೆ ವಿರುದ್ಧ ಸೋಮವಾರ ಕೊನೆಗೊಂಡ ಏಕದಿನ ಕ್ರಿಕೆಟ್ ಸರಣಿಗೂ ತಂಡದ ಜತೆ ದ್ರಾವಿಡ್ ಇರಲಿಲ್ಲ. ಸತತ ಪಂದ್ಯಗಳ ಕಾರಣ ದ್ರಾವಿಡ್, ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋಡ್, ಬೌಲಿಂಗ್ ಕೋಚ್ ಪಾರಸ್ ಮಾಂಬ್ರೆ ಹಾಗೂ ಇತರ ಕೋಚಿಂಗ್ ಸಿಬ್ಬಂದಿಗೆ ಬಿಸಿಸಿಐ ವಿಶ್ರಾಂತಿ ನೀಡಿತ್ತು.
ಆಗಸ್ಟ್ 28 ರಂದು ಭಾರತ ಮತ್ತು ಪಾಕಿಸ್ತಾನ ನಡುವೆ ಪಂದ್ಯ ನಡೆಯಲಿದೆ. ಟೂರ್ನಿಗೆ ಭಾರತ ತಂಡವನ್ನು ಬಿಸಿಸಿಐ ಈಗಾಗಲೇ ಪ್ರಕಟಿಸಿದ್ದು, ವೇಗಿ ಜಸ್ಪ್ರೀತ್ ಬೂಮ್ರಾ ಅವರು ಬೆನ್ನು ನೋವಿನ ಕಾರಣದಿಂದ ತಂಡದಿಂದ ಹೊರಗುಳಿದಿದ್ದಾರೆ. ಮಾಜಿ ನಾಯಕ ವಿರಾಟ್ ಕೊಹ್ಲಿ ಮತ್ತು ಗಾಯದಿಂದ ಚೇತರಿಸಿಕೊಂಡಿರುವ ಕೆ.ಎಲ್.ರಾಹುಲ್ ಅವರು ತಂಡಕ್ಕೆ ಮರಳಿದ್ದಾರೆ.
ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್ಐಆರ್… Read More
ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More
ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More
ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More
ನವದೆಹಲಿ ,ಮೇ 3 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,250 ರೂಪಾಯಿ ದಾಖಲಾಗಿದೆ. 24… Read More
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
This website uses cookies.
Leave a Comment