ಇದುವರೆಗೂ ಭಾರತದಲ್ಲಿ ಕರೋನಾ ರಣಕೇಕೆಗೆ ಬಲಿಯಾದ ವೈದ್ಯರ ಸಂಖ್ಯೆ ೩೮೨. ಇವರ ನಿಸ್ವಾರ್ಥ ತ್ಯಾಗವನ್ನು ಸರ್ಕಾರವು ಕಡೆಗಣಿಸಿದೆ ಎಂದು ಐಎಂಎ (ಭಾರತೀಯ ವೈದ್ಯಕೀಯ ಸಂಘ) ಆರೋಪ ಮಾಡಿದೆ.
ಸಂಸತ್ ಅಧಿವೇಶನದಲ್ಲಿ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಅವರಾಗಲೀ ಅಥವಾ ಇನ್ಯಾವುದೇ ಸಚಿವರಾಗಲಿ ಕರೋನಾದ ವಿರುದ್ಧ ಹೋರಾಡಿದ ವೈದ್ಯರನ್ನು ಹೆಸರಿಸದಿರುವುದರಿಂದ ಐಎಂಎ ಆಕ್ರೋಶಗೊಂಡಿದೆ.
‘ಸಾರ್ವಜನಿಕ ಆರೋಗ್ಯ ಮತ್ತು ಆಸ್ಪತ್ರೆಗಳು ರಾಜ್ಯ ಸರ್ಕಾರದ ಅಡಿಯಲ್ಲಿ ಬರುವುದರಿಂದ ನಮ್ಮ ಬಳಿ ಯಾವುದೇ ಪರಿಹಾರ ದಾಖಲೆಗಳಿಲ್ಲ’ ಎಂದು ಕೇಂದ್ರ ಸಚಿವ ಅಶ್ವಿನಿ ಚೌಬೆ ಹೇಳಿದ್ದರು.
ಆದರೆ ರಾಜ್ಯ ಸರ್ಕಾರಗಳು ಮಾಡಿಸಿರುವ ವಿಮೆ ಕೊರೋನಾದಿಂದ ಮೃತಪಟ್ಟ ಯಾವುದೇ ವೈದ್ಯರ ಕುಟುಂಬಕ್ಕೆ ಪರಿಹಾರ ನೀಡಿಲ್ಲ ಎಂದು ಐಎಂಎ ಹೇಳಿದೆ.
ಸರ್ಕಾರವು ವೈದ್ಯರ ತ್ಯಾಗ, ನಿಸ್ವಾರ್ಥ ಸೇವೆ ಕಡೆಗಣಿಸಿದೆ ಸಾಂಕ್ರಾಮಿಕ ಕಾಯ್ದೆ ೧೮೯೭ ಮತ್ತು ವಿಪತ್ತು ನಿರ್ವಹಣೆ ಕಾಯ್ದೆಯ ನಿರ್ವಹಣೆ ಮಾಡಲು ಸರ್ಕಾರ ನೈತಿಕ ಹಕ್ಕನ್ನು ಕಳೆದುಕೊಂಡಿದೆ ಎಂದು ಆರೋಪಿಸಿದೆ.
ಸರ್ಕಾರವು ಕೋವಿಡ್ ಸಂದರ್ಭದಲ್ಲೂ ನಿರ್ವಹಿಸಿರುವ ವೈದ್ಯರನ್ನು ಶ್ಲಾಘನೆ ಮಾಡಿದ್ದರೂ, ಖಾಯಿಲೆಯಿಂದ ಮೃತಪಟ್ಟವರನ್ನು ಉಲ್ಲೇಖ ಮಾಡಿರಲೇ ಇಲ್ಲ.
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
This website uses cookies.
Leave a Comment