Karnataka

ರಾಜ್ಯದಲ್ಲಿ ಕಾಟನ್ ಕ್ಯಾಂಡಿ ಬ್ಯಾನ್- ಕೃತಕ ಬಣ್ಣ ಗೋಬಿಗೆ ಬಳಸುವಂತಿಲ್ಲ

ಬೆಂಗಳೂರು : ಆಹಾರ ಮತ್ತು ಸುರಕ್ಷತಾ ಇಲಾಖೆ ಆಯುಕ್ತರು ಕಲರ್ ಕಾಟನ್ ಕ್ಯಾಂಡಿಯನ್ನು (Cotton Candy) ನಿಷೇಧ ಮಾಡಿ ಆದೇಶ ಹೊರಡಿಸಿದ್ದು , ಗೋಬಿ ಮಂಚೂರಿಯಲ್ಲಿ ಕೂಡ ಕೃತಕ ಬಣ್ಣಗಳನ್ನು ಬಳಸುವುದನ್ನು ನಿಷೇಧಿಸಲಾಗಿದೆ.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್ , ಹೊಟೇಲ್ ಊಟದ ಮೇಲೆ ಜನ ಹೆಚ್ಚು ಅವಲಂಬನೆ ಆಗುತ್ತಿದ್ದಾರೆ. ಸರಿಯಾದ ರೀತಿಯಲ್ಲಿ ಆಹಾರ ಸೇವನೆ ಆಗದಿದ್ದರೆ ಅನಾರೋಗ್ಯ ಹೆಚ್ಚಾಗುತ್ತದೆ. ಹೆಚ್ಚು ಕೊಬ್ಬಿನಾಂಶ, ಉಪ್ಪು, ಸಕ್ಕರೆ, ಹೆಚ್ಚಿರೋ ಆಹಾರದಿಂದ ದುಷ್ಪರಿಣಾಮ ಇದೆ ಎಂದರು.

ಕಾಟನ್ ಕ್ಯಾಂಡಿ ಮತ್ತು ಗೋಬಿ (Gobi Manchuri) ಸ್ಯಾಂಪಲ್ ಕಲೆಕ್ಟ್ ಮಾಡಲಾಯಿತು. ಬೀದಿ ಬದಿ, ಹೊಟೇಲ್ ಗಳಲ್ಲಿ ಗೋಬಿಯ 171 ಮಾದರಿ ಸಂಗ್ರಹ ಮಾಡಲಾಯಿತು. ಇದರಲ್ಲಿ 107 ಕೃತಕ ಬಣ್ಣ ಬಳಕೆ ಆಗಿದೆ. ರೋಡಮೈನ್ ಬಿ, ಟಾರ್ ಟ್ರಾಸೈನ್ ಸ್ಯಾಂಪಲ್ ನಲ್ಲಿ ಸಿಕ್ಕಿದೆ. ರೋಡಮೈನ್ ಕ್ಯಾನ್ಸರ್ ಗೆ ಕಾರಣವಾಗಿದೆ.

107 ಸ್ಯಾಂಪಲ್ ನಲ್ಲಿ 12 ಟಾರ್ ಟ್ರಾಸೈನ್ ಸಿಕ್ಕಿದೆ ಮತ್ತು ಸನ್ ಸೆಟ್ 33 ಸಿಕ್ಕಿದೆ .ಇದ್ಯಾವುದನ್ನು ಆಹಾರದಲ್ಲಿ ಬಳಕೆ ಮಾಡುವಂತಿಲ್ಲ .25 ಮನುಷ್ಯರ ತಲೆಬುರುಡೆಗಳು ತೋಟದ ಮನೆಯಲ್ಲಿ ಪತ್ತೆ

ಕಾನೂನು ಪ್ರಕಾರ ಉಲ್ಲಂಘನೆ ಮಾಡಿದವರಿಗೆ 10 ಲಕ್ಷ ದಂಡ, 7 ವರ್ಷ ಶಿಕ್ಷೆ.

ಪ್ಲೇನ್ ಕಾಟನ್ ಕ್ಯಾಂಡಿ ತಯಾರಿ ಮಾಡಬಹುದು ಆದರೆ ಕಲರ್ ಕಾಟನ್ ಕ್ಯಾಂಡಿ ಮಾರಾಟ ಮಾಡುವಂತಿಲ್ಲ ಎಂದು ಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

Team Newsnap
Leave a Comment

Recent Posts

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024

ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ… Read More

May 16, 2024

ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್‌ಐಎ

ಬೆಂಗಳೂರು : ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ(ಎನ್‌ಐಎ)… Read More

May 15, 2024

ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿಯ ಭೀಕರ ಹತ್ಯೆ

ಹುಬ್ಬಳ್ಳಿ : ಇಂದು ಪಾಗಲ್ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ್ದಕ್ಕೆ ಮನೆಗೆ ನುಗ್ಗಿ ಯುವತಿಗೆ ಚಾಕುವಿನಿಂದ ಮನಬಂದಂತೆ ಇರಿದು ಹತ್ಯೆಗೈದಿರುವ ಘಟನೆ… Read More

May 15, 2024