Main News

ಪರಿಷತ್ ಚುನಾವಣೆ: ಮತದಾರರ ಸೆಳೆಯಲು ಹಣ, ಹೆಂಡ, ಬಾಡೂಟದ್ದೇ ದರ್ಬಾರು !

ಈ ಕಾಲದಲ್ಲಿ ನಡೆಯುವ ಯಾವುದೇ ಚುನಾವಣೆಗಳೂ ಆಮಿಷಗಳಿಲ್ಲದೇ ನಡೆಯುವುದಿಲ್ಲ.
ವಿಧಾನ ಪರಿಷತ್ ನ ಪದವೀಧರ ಕ್ಷೇತ್ರಕ್ಕೆ ಚುನಾವಣೆ ಜೂನ್ 13 ರಂದು ನಡೆಯಲಿದೆ. ಮತದಾರರನ್ನು ಸೆಳೆಯಲು ಹಣ, ಮದ್ಯ , ಬಾಡೂಟ ಮತ್ತು ಔತಣಕೂಟಗಳು ತೀರಾ ಮಾಮೂಲಿಯಾಗಿವೆ

ಅಷ್ಟು ಮಾತ್ರವಲ್ಲದೆ ಅಭ್ಯರ್ಥಿಗಳು GooglePay, PayTM ಅಥವಾ ಮತದಾರರ ಇತರ ಡಿಜಿಟಲ್ ವ್ಯಾಲೆಟ್ ಖಾತೆಗಳನ್ನು ಹುಡುಕುತ್ತಿದ್ದಾರೆ.ಕಾರಣ ಮತದಾರನ ಖಾತೆಗೆ ಹಣವನ್ನು ನೇರವಾಗಿ ವರ್ಗಾಯಿಸಿ ಮತ ಭಿಕ್ಷೆ ಬೇಡುವ ಸಂಪ್ರದಾಯ ಜಾರಿ ಬಂದಿದೆ. ಇದನ್ನು ಓದಿ –ಹಾಸ್ಯ ನಟ ನರಸಿಂಹರಾಜು ಹಿರಿಯ ಪುತ್ರಿ ಧರ್ಮವತಿ ಇನ್ನಿಲ್ಲ

ಈ ಪರಿಷತ್ ಚುನಾವಣೆಯಲ್ಲಿ ಬುದ್ದಿ ಜೀವಿಗಳು, ಮತ್ತು ವಿದ್ಯಾವಂತರು ಆಯ್ಕೆಯಾಗಿ ಬರುವ ಸದನ ಎಂಬ ಹೆಗ್ಗಳಿಕೆಯಿತ್ತು. ಆದರೆ ಪರಿಷತ್ ಚುನಾವಣೆ ಕೂಡ ತನ್ನ ಘನತೆ ಕಳೆದುಕೊಳ್ಳುತ್ತಿದೆ

ಆಮಿಷಗಳ ಪಟ್ಟಿ :

  1. 500 – 2000 ರು ಪೇ – ಬಸ್ ಛಾರ್ಜಿಗೂ ಕಾಸು ! ಈಗ ಮತದಾರರಿಗೆ ಸುಮಾರು 500 ರಿಂದ 2000 ರು ಹಣ ವರ್ಗಾವಣೆ ಮಾಡಲಾಗುತ್ತಿದೆ .
  2. ಮತದಾರರು ತಮ್ಮ ಊರಿಗೆ ಬಂದು ಮತ ಚಲಾಯಿಸಲು ಅವರಿಗೆ ಸಾರಿಗೆ ವೆಚ್ಚ ಕೂಡ ನೀಡಲಾಗುತ್ತಿದೆ.
  3. ಅಭ್ಯರ್ಥಿಗಳು ವಿಶೇಷವಾಗಿ ನಿರುದ್ಯೋಗಿಗಳು,
    ವಿದ್ಯಾರ್ಥಿಗಳು ಮತ್ತು ಖಾಸಗಿ ವಲಯದಲ್ಲಿ ಕೆಲಸ ಮಾಡುವ ಯುವ ಪದವೀಧರರನ್ನು ಅಭ್ಯರ್ಥಿಗಳು ಗುರಿಯಾಗಿಸಿಕೊಂಡಿದ್ದಾರೆ.
  4. ಅಭ್ಯರ್ಥಿಗಳು ವೀಡಿಯೊ ಮತ್ತು ಆಡಿಯೊ ಸಂದೇಶಗಳನ್ನು ಅಪ್‌ಲೋಡ್ ಮಾಡಲು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳನ್ನು ಸಹ ಬಳಸುತ್ತಿದ್ದಾರೆ.
  5. ಮತದಾರರಿಗೆ ವಿಮೆ ಸೌಲಭ್ಯ ಕಲ್ಪಿಸುವುದಾಗಿ ಸ್ವತಂತ್ರ ಅಭ್ಯರ್ಥಿಯೊಬ್ಬರು ಭರವಸೆ ನೀಡಿದ್ದಾರೆ ಎನ್ನಲಾಗಿದೆ
  6. ಅತಿ ಹೆಚ್ಚು ಮತದಾರರನ್ನು ಹೊಂದಿರುವ, ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ ಜಿಲ್ಲೆಯ, ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿಯೂ ಮತದಾರರಿಗೆ ಅದ್ದೂರಿ ಭೋಜನ ಏರ್ಪಡಿಸಲಾಗುತ್ತಿದೆ.
  7. 1 ಲಕ್ಷ 33 ಸಾವಿರ ಮತದಾರರ ಪೈಕಿ ಮೈಸೂರಿನಲ್ಲಿ ಅತಿ ಹೆಚ್ಚು ಅಂದರೆ 54,039, ಮಂಡ್ಯ 44,370, ಹಾಸನ 23,038 ಮತ್ತು ಚಾಮರಾಜನಗರ 11,626 ಮತದಾರರಿದ್ದಾರೆ.
  8. ಪರಿಷತ್ ಚುನಾವಣೆಯಲ್ಲಿ ಖರ್ಚಿಗೆ ಮಿತಿ ಇಲ್ಲದ ಕಾರಣ ಅಭ್ಯರ್ಥಿಗಳು ಹೆಚ್ಚಿನ ಹಣ ಖರ್ಚು ಮಾಡುತ್ತಿದ್ದಾರೆ. ದೊಡ್ಡ ಪಕ್ಷಗಳ ಅಭ್ಯರ್ಥಿಗಳಂತೆ ಪಕ್ಷೇತರರೂ ಪ್ರಣಾಳಿಕೆಗಳನ್ನು ಹೊರತಂದಿದ್ದಾರೆ.
  9. ನಿರುದ್ಯೋಗಿ ಪದವೀಧರರಿಗೆ ಗೌರವಧನ, ಅತಿಥಿ ಅಧ್ಯಾಪಕರ ಕಾಯಂಗೊಳಿಸುವಿಕೆ, ಶಿಕ್ಷಕರ ನೇಮಕಾತಿ ಭರವಸೆ ನೀಡಿದ್ದಾರೆ.
Team Newsnap
Leave a Comment
Share
Published by
Team Newsnap

Recent Posts

ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಇಬ್ಬರು ಸರ್ಕಾರಿ ನೌಕರರು ಸಾವು

ಬೆಂಗಳೂರು : ಸೋಮವಾರ ಬಾಗಲಕೋಟೆ ಮತ್ತು ಬೀದರ್ ಜಿಲ್ಲೆಗಳಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿದ್ದ ಸರ್ಕಾರಿ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಸಹಾಯಕ… Read More

May 7, 2024

Lok Sabha Election 2024 : ಕರ್ನಾಟಕದಲ್ಲಿ ಶೇ. 9.45% ರಷ್ಟು ಮತದಾನ

ನವದೆಹಲಿ : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನದಲ್ಲಿ ಶೇ. 9.45% ರಷ್ಟು ಮತದಾನವಾಗಿದೆ ಎಂದು ಎಂದು ಚುನಾವಣಾ… Read More

May 7, 2024

ಪ್ರಜ್ವಲ್‌ ಮಾತ್ರವಲ್ಲ , ತುಂಬ ರಾಜಕಾರಣಿಗಳ ವಿಡಿಯೋಗಳು ಸದ್ಯದಲ್ಲೇ ಹೊರಬರಲಿದೆ : ಕೆ ಎಸ್‌ ಈಶ್ವರಪ್ಪ

ಶಿವಮೊಗ್ಗ : ರಾಷ್ಟ್ರ ಮಟ್ಟದಲ್ಲಿ ಹಾಸನದ ಹಾಲಿ ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ ಡ್ರೈ ಪ್ರಕರಣ ಸದ್ದು ಮಾಡುತ್ತಿದ್ದು, ಪ್ರಜ್ವಲ್‌… Read More

May 7, 2024

ರಾಜ್ಯ ಸರ್ಕಾರವೇ ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ಹಾರಲು ಹೊಣೆ : ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಮೊದಲ ಬಾರಿಗೆ ಪ್ರಜ್ವಲ್ ರೇವಣ್ಣ (Prajwal Revanna) ವಿಡಿಯೋ ಪ್ರಕರಣಕ್ಕೆ… Read More

May 7, 2024

ಮಂಡ್ಯ : ಭಾರಿ ಮಳೆಗೆ ಕಾರಿನ ಮೇಲೆ ಮರ ಬಿದ್ದು ವ್ಯಕ್ತಿ ದುರ್ಮರಣ

ಮಂಡ್ಯ :ನೆನ್ನೆ ಮಳೆಯಿಂದಾಗಿ ಮರವೊಂದು ಕಾರಿನ ಮೇಲೆ ಬಿದ್ದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ನಗರದ ಜನರಲ್… Read More

May 7, 2024

ಕರ್ತವ್ಯಕ್ಕೆ ತೆರಳುತ್ತಿದ್ದ ಚುನಾವಣಾ ಸಿಬ್ಬಂದಿ ಹೃದಯಾಘಾತದಿಂದ ಸಾವು

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More

May 6, 2024