Main News

ದೇಶದ ಅತಿ ಎತ್ತರದ ಅವಳಿ ಟವರ್ಸ್ ಧ್ವಂಸ – 9 ಸೆಕೆಂಡ್​​ಗಳಲ್ಲಿ ಧರೆಗೆ ಉರುಳಿದ ಕಟ್ಟಡ

ದೇಶದ ಅತಿ ಎತ್ತರದ ಅವಳಿ ಕಟ್ಟಡ ಇಂದು ಮ್ಯಾಹ್ನ 2.30 ಕ್ಕೆ ಧರೆಗುರುಳಿದೆ. 9 ಸೆಕೆಂಡ್ ಗಳಲ್ಲಿ ಅವಳಿ ಕಟ್ಟಡಗಳು ಮಣ್ಣಲ್ಲಿ ಮಣ್ಣಾಗಿ ಹೋಗಿದೆ.

ಉತ್ತರಪ್ರದೇಶದ ನೋಯ್ಡಾದಲ್ಲಿ ತಲೆ ಎತ್ತಿದ್ದ ಸೂಪರ್‌ಟೆಕ್ ಅಪೆಕ್ಸ್ ಮತ್ತು ಸಿಯಾನಿ ಅವಳಿ ಗೋಪುರಗಳನ್ನು ನೆಲಕ್ಕುರುಳಿಸಲಾಯಿತು, ಸುಪ್ರೀಂಕೋರ್ಟ್ ಆದೇಶದಂತೆ 40 ಅಂತಸ್ಥಿನ ಈ ಬೃಹತ್​ ಕಟ್ಟಡವನ್ನು ಉತ್ತರ ಪ್ರದೇಶದ ಯೋಗಿ ಸರ್ಕಾರ ಕೆಡವಿದೆ.

ಇಡೀ ಕಟ್ಟಡವನ್ನು ಕೆಡವಲು 9,640 ರಂಧ್ರಗಳನ್ನು ಮಾಡಲಾಗಿದೆ. ಇದರೊಂದಿಗೆ 3,700 ಕೆಜಿ ಗನ್ ಪೌಡರ್ ಬಳಕೆ ಮಾಡಲಾಗಿತ್ತು, ವಾಟರ್​ಫಾಲ್​ ತಂತ್ರಜ್ಞಾನ ಅಥವಾ ನೀರಿನ ಸ್ಫೋಟದ ಮಾದರಿಯನ್ನು ಕಟ್ಟಡಗಳನ್ನು ಡೆಮಾಲಿಷ್ ಮಾಡಲಾಗಿದೆ.

ಮೊದಲಿಗೆ ನೆಲಮಹಡಿ ಮೊದಲು ಸ್ಫೋಟಗೊಂಡಿದ್ದು, ಒಂದರ ಹಿಂದೆ ಮತ್ತೊಂದರಂತೆ ಸ್ಫೋಟವಾಯ್ತು. ವಾಟರ್​ಫಾಲ್ ಇಂಪ್ಲೋಷನ್ ತಂತ್ರಜ್ಞಾನದಿಂದ ಧ್ವಂಸಗೊಂಡ ಕಟ್ಟಡ ಒಳ ಭಾಗಕ್ಕೆ ಬಿದ್ದಿದ್ದು, ಸುತ್ತಮುತ್ತಲ ಪ್ರದೇಶ ದಟ್ಟ ಹೊಗೆಯಿಂದ ಆವೃತ್ತವಾಗಿತ್ತು. ಆ ಬಳಿಕ ದೂಳು ಹರಡುವುದನ್ನು ತಡೆಯಲು ನೀರಿನ್ನು ಸಿಂಪಡನೆ ಮಾಡಲಾಯ್ತು.

ಈ ಕಟ್ಟಡ ನಿರ್ಮಾಣಕ್ಕೆ ಆರಂಭದಿಂದಲೂ ವಿರೋಧ ಎದುರಾಗಿತ್ತು. ಯಾವುದೇ ಕಾರಣಕ್ಕೂ ಕಟ್ಟಡ ನಿರ್ಮಾಣವಾಗದಂತೆ ಪ್ರತಿಭಟನೆಗಳು ಕೂಡ ನಡೆದಿದ್ದವು. ವಿರೋಧದ ನಡುವೆಯೂ ಕಟ್ಟಡ ನಿರ್ಮಾಣವಾದ ಪರಿಣಾಮ 2014ರಲ್ಲಿ ಎಮರಾಲ್ಡ್ ಕೋರ್ಟ್ ಗ್ರೂಪ್ ಹೌಸಿಂಗ್ ಸೊಸೈಟಿಯ ನಿವಾಸಿಗಳ ಕಲ್ಯಾಣ ಸಂಘವು, ಟ್ವಿನ್ ಟವರ್​ಗಳ ನಿರ್ಮಾಣದ ಕುರಿತು ಸೂಪರ್‌ಟೆಕ್ ವಿರುದ್ಧ ಅಲಹಾಬಾದ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು.

ಡಿಜಿಟಿಲ್ ಮಿಡಿಯಾ ಕ್ಷೇತ್ರದಲ್ಲಿ ಭರವಸೆಯ ಎರಡು ಪೂರ್ಣ : ಮೂರನೇ ವರ್ಷಕ್ಕೆ ಕಾಲಿಟ್ಟ ‘ನ್ಯೂಸ್ ಸ್ನ್ಯಾಪ್

2010ರ ಯುಪಿ ಅಪಾರ್ಟ್‌ಮೆಂಟ್ ಕಾಯ್ದೆಯನ್ನು ಉಲ್ಲಂಘಿಸಿ ಅವಳಿ ಗೋಪುರಗಳನ್ನು ನಿರ್ಮಿಸಲಾಗಿದೆ ಎಂದು ಅರ್ಜಿಯಲ್ಲಿ ಆರೋಪಿಸಿತ್ತು. ನಿಯಮ ಉಲ್ಲಂಘಿಸಿದ ಆರೋಪದ ಮೇಲೆ ಅವಳಿ ಕಟ್ಟಡಗಳನ್ನು ಕೆಡವಲು 2014ರಲ್ಲಿ ಅಲಹಾಬಾದ್ ಹೈಕೋರ್ಟ್ ಆದೇಶಿಸಿತ್ತು.

ಈ ತೀರ್ಪಿನ ವಿರುದ್ಧ ಸೂಪರ್‌ಟೆಕ್ , ಸುಪ್ರೀಂ ಕೋರ್ಟ್‌ ಮೆಟ್ಟಿಲು ಹತ್ತಿತ್ತು. ಸುಪ್ರೀಂ ಕೋರ್ಟ್​ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಏಳು ವರ್ಷಗಳ ವಿಚಾರಣೆಯ ನಂತರ ಆಗಸ್ಟ್ 2021ರಲ್ಲಿ ನ್ಯಾಯಮೂರ್ತಿಗಳಾದ ಡಿ ವೈ ಚಂದ್ರಚೂಡ್ ಮತ್ತು ಎಂಆರ್ ಶಾ ಅವರ ಪೀಠವು, ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿದಿತ್ತು. ಅದರಂತೆ ಅಕ್ರಮವಾಗಿ ನೆಲೆಗೊಂಡ ಕಟ್ಟಡಗಳನ್ನು ಧ್ವಂಸ ಮಾಡುವಂತೆ ಆದೇಶ ಹೊರಡಿಸಿತ್ತು. ಕೋರ್ಟ್​ ಆದೇಶದಂತೆ ಸದ್ಯ ಉತ್ತರ ಪ್ರದೇಶ ಸರ್ಕಾರ ಕಟ್ಟಡಗಳನ್ನು ಧ್ವಂಸ ಮಾಡಿದೆ.

Team Newsnap
Leave a Comment
Share
Published by
Team Newsnap

Recent Posts

ಕರ್ತವ್ಯಕ್ಕೆ ತೆರಳುತ್ತಿದ್ದ ಚುನಾವಣಾ ಸಿಬ್ಬಂದಿ ಹೃದಯಾಘಾತದಿಂದ ಸಾವು

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More

May 6, 2024

ಪೋಷಕರ ಕಣ್ಣೆದುರೇ ಮಕ್ಕಳು ನೀರುಪಾಲು

ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More

May 6, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 6, 2024

ಹಾಸನ ಅಶ್ಲೀಲ ವಿಡಿಯೋಗಳನ್ನು ಹಂಚುವುದು ಶಿಕ್ಷಾರ್ಹ ಅಪರಾಧ: ಎಸ್‌ಐಟಿ

ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More

May 6, 2024

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024