ಯುವತಿ ಮನೆಯವರು ವಿರೋಧ ವ್ಯಕ್ತ ಪಡಿಸಿದ ಹಿನ್ನೆಲೆಯಲ್ಲಿ. ಯುವ ಪ್ರೇಮಿಗಳಿಬ್ಬರು ನಂಜನಗೂಡಿನ ಬಳಿ ಕಪಿಲಾ ನದಿಗೆ ಹಾರಿ ಆತ್ಮಹತ್ಯೆ ಗೆ ಯತ್ನಿಸಿದ ಘಟನೆ ಜರುಗಿದೆ.
ಚಾಮರಾಜನಗರ ಹೆಬ್ಬಸೂರು ಗ್ರಾಮದ 17 ವಷ೯ದ ಅಪ್ರಾಪ್ತ ಯುವತಿ ಹಾಗೂ ಸೋಮವಾರ ಪೇಟೆ ಅಭಿ ಎಂಬ ಯುವಕ ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು.
ಯುವತಿಯು ಚಾಮರಾಜನಗರದ ಜೆಎಸ್ ಎಸ್ ಕಾಲೇಜಿನ ವಿದ್ಯಾಥಿ೯ನಿ. ಅಭಿ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದಾನೆ
ಯುವತಿಯ ಮನೆಯವರಿಗೆ ಪ್ರೀತಿಯ ವಿಷಯ ತಿಳಿದು ವಿರೋಧ ವ್ಯಕ್ತಪಡಿಸಿ ಆಕೆಯನ್ನು ಅಜ್ಜಿ ಮನೆಯಲ್ಲಿ ಇರಿಸಿದ್ದರು.
ತನ್ನ ಮನೆಯವರ ವತ೯ನೆ ಕಂಡ ಯುವತಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪ್ರಿಯಕರ ಅಭಿಗೆ ಮಾಹಿತಿ ನೀಡಿದಾಗ ಇಬ್ಬರೂ ಒಟ್ಟಿಗೆ ಆತ್ಮಹತ್ಯೆ ಮಾಡಿಕೊಳ್ಳುವ ನಿಧಾ೯ರ ಮಾಡಿ ಮುಡುಕಟ್ಟೆ ಬಳಿ ಕಪಿಲಾ ನದಿಗೆ ಒಟ್ಟಿಗೆ ಹಾರಿದ್ದಾರೆ. ನದಿಗೆ ಬಿದ್ದ ಪ್ರೇಮಿಗಳನ್ನು ತೆಪ್ಪದಲ್ಲಿದ್ದ ಅಂಬಿಗರು ಕಾಪಾಡಿ ನಂಜನಗೂಡು ಸಕಾ೯ರಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ನಂಜಗೂಡು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಮೂವರು ಯುವಕರು ರೈಲಿಗೆ ಸಿಲುಕಿ ದುರ್ಮರಣ
- ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಚುನಾವಣಾ ಪ್ರಚಾರ ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ಗಡ್ಕರಿ
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ
- 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಜಪ್ತಿ