ಕೋವಿಡ್ನಿಂದ ಮೃತಪಟ್ಟವರ ಕುಟುಂಬಗಳಿಗೆ ಕೇಂದ್ರ ಸರ್ಕಾರ ನೀಡಿದ್ದ 50 ಸಾವಿರ ರೂ. ಪರಿಹಾರ ಹಣವನ್ನು ರಾಜ್ಯದ 893 ಕುಟುಂಬಗಳು ತಿರಸ್ಕರಿಸಿವೆ.
ಎಪಿಎಲ್ ಮತ್ತು ಬಿಪಿಎಲ್ ಕಾರ್ಡುದಾರರಿಗೆ ಕೊರೊನಾ ಪರಿಹಾರ ಧನವು ಕೇಂದ್ರ ಸರ್ಕಾರದಿಂದ ಘೋಷಣೆಯಾಗಿತ್ತು.
ರಾಜ್ಯ ಸರ್ಕಾರವು ಹೆಚ್ಚುವರಿಯಾಗಿ ಒಂದು ಲಕ್ಷ ರು ಪರಿಹಾರ ಧನವನ್ನು ನೀಡಿತ್ತು.
ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಒಟ್ಟು 1.5 ಲಕ್ಷ ರೂ. ಪರಿಹಾರ ಧನವನ್ನು ಘೋಷಣೆ ಮಾಡಲಾಗಿತ್ತು.
ಸರ್ಕಾರ ಪರಿಹಾರ ಘೋಷಣೆ ಮಾಡಿದರೂ ಕುಟುಂಬಗಳ ಅವರ ಹೆಸರಿನಲ್ಲಿ ಹಣವನ್ನು ಸ್ವೀಕರಿಸುವುದಿಲ್ಲ ಎಂದು ಹೇಳಿವೆ.
ನಮಗೆ ಮೃತಪಟ್ಟವರ ಹೆಸರಿನಲ್ಲಿ ಸರ್ಕಾರದ ಹಣ ಬೇಡ. ಅದನ್ನು ಬಡವರಿಗೆ ನೀಡಿ ಎಂದು ಹೇಳಿವೆ.
ರಾಜಧಾನಿ ಬೆಂಗಳೂರು ಒಂದರಲ್ಲೇ 521 ಕುಟುಂಬಗಳು ಕೋವಿಡ್ ಪರಿಹಾರ ಧನವನ್ನು ನಿರಾಕರಿಸಿವೆ.
ಕೊರೊನಾದಿಂದ ರಾಜಧಾನಿಯಲ್ಲಿ ಸಾವಿರಕ್ಕೂ ಹೆಚ್ಚು ಜನ ಬಲಿಯಾಗಿದ್ದರು. ಸರ್ಕಾರದ ಅನುದಾನಗಳು ಸೂಕ್ತ ಸಮಯಕ್ಕೆ ಕೈ ಸೇರುವುದೇ ಕಷ್ಟವಾಗಿರುವ ಸಮಯದಲ್ಲಿ ಕುಟುಂಬಗಳು ಪರಿಹಾರ ಬೇಡ ಎಂದು ಹೇಳಿವೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ