ಯಾವುದೋ ಒಂದು ದಿನ ಶಾಲೆಗಳನ್ನು ಆರಂಭಿಸಬೇಕಾಗುತ್ತದೆ. ಇದಕ್ಕೆ ಸಿದ್ಧತೆಯಾಗಿ ಶಾಲೆಗಳ ಎಲ್ಲಾ ಸಿಬ್ಬಂದಿಗೆ ಆದ್ಯತೆಯಲ್ಲಿ ಕೋವಿಡ್ ಲಸಿಕೆ ನೀಡಲಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಶಾಲೆಗಳನ್ನು ಯಾವುದೋ ಒಂದು ದಿನ ಆರಂಭಿಸಲೇಬೇಕು. ಮಕ್ಕಳು ಯಾವಾಗಲೂ ಆನ್ ಲೈನ್ ತರಗತಿಯ ಮುಂದೆ ಕುಳಿತುಕೊಳ್ಳಲು ಸಾಧ್ಯವಿಲ್ಲ. ಆನ್ ಲೈನ್ ಮಕ್ಕಳ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುವ ಅಪಾಯವಿದೆ. ಆದ್ದರಿಂದ ಎಲ್ಲವನ್ನೂ ಅಳೆದು ತೂಗಿ ನಿರ್ಧಾರ ಕೈಗೊಳ್ಳಲಾಗುತ್ತದೆ. ಪರಿಣಿತರ ಅಭಿಪ್ರಾಯ, ಸಲಹೆ ಪಡೆದು ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.
ಶಾಲೆಯ ಸಿಬ್ಬಂದಿ ವರ್ಗವನ್ನು ವಿಶೇಷ ಗುಂಪಾಗಿ ಪರಿಗಣಿಸಿ ಅವರಿಗೆ ಆದ್ಯತೆಯಲ್ಲಿ ಕೋವಿಡ್ ಲಸಿಕೆ ನೀಡುವ ಕಾರ್ಯ ಆರಂಭಿಸಬೇಕೆಂದು ತೀರ್ಮಾನಿಸಲಾಗಿದೆ ಎಂದರು.
ಮಕ್ಕಳ ಪೋಷಕರಿಗೆ, ಕುಟುಂಬದವರಿಗೆ ಲಸಿಕೆ ನೀಡಲಾಗಿದೆ. ಇನ್ನೂ ಕೆಲ ದಿನಗಳು ಕಳೆದರೆ ಲಸಿಕೆ ಪಡೆದವರ ಸಂಖ್ಯೆ 3 ಕೋಟಿಗೆ ತಲುಪಲಿದೆ. ಅನೇಕರಿಗೆ ಪಾಸಿಟಿವ್ ಬಂದು ಹೋಗಿ ಅವರಲ್ಲಿ ಆ್ಯಂಟಿಬಾಡಿ ಉತ್ಪಾದನೆಯಾಗಿರುವುದೂ ಇದೆ. ವೈದ್ಯಕೀಯ ಶಿಕ್ಷಣ ಕಾಲೇಜುಗಳನ್ನು ನಡೆಸಲು ಅವಕಾಶ ನೀಡಲಾಗಿದೆ. ಉನ್ನತ ಶಿಕ್ಷಣದಲ್ಲಿ ಕಾಲೇಜು ಆರಂಭಿಸಲು ತೀರ್ಮಾನಿಸಲಾಗುತ್ತಿದೆ ಎಂದರು.
ಪ್ರತಿ ದಿನ ರಾಜ್ಯದ ಒಟ್ಟು ಪ್ರಕರಣಗಳಲ್ಲಿ ಶೇ.5 ರಷ್ಟನ್ನು ಹೊಸ ವೈರಾಣು ಅಧ್ಯಯನಕ್ಕೆ ಒಳಪಡಿಸಿ ಪರೀಕ್ಷಿಸಲಾಗುತ್ತಿದೆ. ಈ ಮಾಹಿತಿಯನ್ನು ಐಸಿಎಂಆರ್ ಜೊತೆ ಹಂಚಿಕೊಳ್ಳಲಾಗುತ್ತಿದೆ. ವೈಜ್ಞಾನಿಕ ನೆಲೆಗಟ್ಟಿನಲ್ಲಿ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದರು.
ಹೆಚ್.ಡಿ ರೇವಣ್ಣಗೆ ಮಧ್ಯಾಹ್ನದಿಂದ ಹೊಟ್ಟೆ ಉರಿ, ಎದೆನೋವು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಿದ್ದ ಎಸ್ಐಟಿ ಅಧಿಕಾರಿಗಳು ಎದೆ ಉರಿ… Read More
ಬೆಂಗಳೂರು : ಸೋಮವಾರ ಬಾಗಲಕೋಟೆ ಮತ್ತು ಬೀದರ್ ಜಿಲ್ಲೆಗಳಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿದ್ದ ಸರ್ಕಾರಿ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಸಹಾಯಕ… Read More
ನವದೆಹಲಿ : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನದಲ್ಲಿ ಶೇ. 9.45% ರಷ್ಟು ಮತದಾನವಾಗಿದೆ ಎಂದು ಎಂದು ಚುನಾವಣಾ… Read More
ಶಿವಮೊಗ್ಗ : ರಾಷ್ಟ್ರ ಮಟ್ಟದಲ್ಲಿ ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈ ಪ್ರಕರಣ ಸದ್ದು ಮಾಡುತ್ತಿದ್ದು, ಪ್ರಜ್ವಲ್… Read More
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಮೊದಲ ಬಾರಿಗೆ ಪ್ರಜ್ವಲ್ ರೇವಣ್ಣ (Prajwal Revanna) ವಿಡಿಯೋ ಪ್ರಕರಣಕ್ಕೆ… Read More
ಮಂಡ್ಯ :ನೆನ್ನೆ ಮಳೆಯಿಂದಾಗಿ ಮರವೊಂದು ಕಾರಿನ ಮೇಲೆ ಬಿದ್ದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ನಗರದ ಜನರಲ್… Read More
This website uses cookies.
Leave a Comment