ಸೋಮವಾರದಿಂದ ರಾಜ್ಯದಲ್ಲಿ ಕೊರೊನಾ ಲಸಿಕೆ ವಿತರಣೆ ಮಾಡಲಾಗುವುದು ಎಂದು ರಾಜ್ಯ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು, ಶನಿವಾರ ಕೇಂದ್ರದಿಂದಡ ರಾಜ್ಯಕ್ಕೆ 13 ಲಕ್ಷದ 90 ಸಾವಿರ ಕೋವಿಡ್-19 ಲಸಿಕೆ ಬರಲಿದೆ ಎಂದರು
ಜ.11 ರಿಂದಲೇ ( ಸೋಮವಾರ) ಲಸಿಕೆ ಹಾಕುವ ಕಾರ್ಯ ಆರಂಭವಾಗಲಿದೆ. ಲಸಿಕೆಯನ್ನು ಎಲ್ಲಾ ಜಿಲ್ಲೆಗಳಿಗೂ ಸರಬರಾಜು ಮಾಡಲಿದ್ದೇವೆ ಎಂದರು.
ಕೋವಿಡ್-19 ನಿಯಂತ್ರಣ ಮಾಡುವ ಕಾರ್ಯ ಭಾರತ ಯಶಸ್ವಿಯಾಗಿದೆ. ಇಡೀ ದೇಶದಲ್ಲಿ 9000 ಸಕ್ರಿಯ ಪ್ರಕರಣಗಳಿವೆ. ಶೇ.98ರಷ್ಟು ಜನ ಗುಣಮುಖರಾಗುತ್ತಿದ್ದಾರೆ. ಶೇ.1.2 ರಿಂದ ಶೇ.1.3 ರಷ್ಡು ಸಾವಿನ ಪ್ರಮಾಣ ಆಗಿದೆ ಎಂದು ಹೇಳಿದರು.
ಈ ಅಂಕಿ ಅಂಶಗಳೇ ರಾಜ್ಯಸರ್ಕಾರ ಯಶಸ್ವಿಯಾಗಿ ಕೊರೊನಾ ನಿರ್ವಹಣೆ ಮಾಡಿದೆ ಅನ್ನೋದಕ್ಕೆ ನಿದರ್ಶನ. ಲಸಿಕೆಯ ವಿವರಗಳನ್ನು ಸಂಜೆಯೊಳಗೆ ಮಾಹಿತಿ ತಿಳಿಸುತ್ತೇನೆ ಎಂದು ಹೇಳಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು