2021ರ ಸ್ವಚ್ಛ ಸರ್ವೇಕ್ಷಣ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಮೈಸೂರು ಹೊರ ವರ್ತುಲ ರಸ್ತೆಗಳ ಸ್ವಚ್ಛತಾ ಕಾರ್ಯವನ್ನು ಕೈಗೊಳ್ಳಲು ತಂಡವನ್ನು ರಚಿಸುವಂತೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಸೂಚಿಸಿದರು.
ಮೈಸೂರು ರಿಂಗ್ ರಸ್ತೆಯ ತ್ಯಾಜ್ಯ ಹಾಗೂ ಡಬ್ರೀಸ್ ಗೆ ಸಂಬಂಧಿಸಿದಂತೆ ಮಂಗಳವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಸ್ವಚ್ಛತೆ ಬಗ್ಗೆ ನಾವೆಲ್ಲರೂ ಗಮನಹರಿಸಲೇಬೇಕು. ಲೋಕೋಪಯೋಗಿ, ಆರ್ ಡಿ ಪಿಆರ್, ರಾಜ್ಯ ಹೆದ್ದಾರಿ ಇಲಾಖೆ, ಕೆಆರ್ ಐಡಿಎಲ್, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ, ನಗರ ಪಾಲಿಕೆ, ಅಧೀಕ್ಷಕ ಅಭಿಯಂತರರು ಹಾಗೂ ಯೋಜನಾ ನಿರ್ದೇಶಕರನ್ನೊಳಗೊಂಡ ತಂಡ ರಚನೆ ಮಾಡಲು ಸೂಚನೆ ನೀಡಿದರು.
ಮಾಧ್ಯಮಗಳ ಮೂಲಕ ಎಚ್ಚರಿಕೆ ಸಂದೇಶ
ತ್ಯಾಜ್ಯ ಹಾಗೂ ಕಸ ವಿಲೇವಾರಿಗೆ ಸಂಬಂಧಪಟ್ಟಂತೆ ಕೇವಲ ಮೈಸೂರಿನ ರಿಂಗ್ ರಸ್ತೆ ಮಾತ್ರವಲ್ಲದೆ, ನಗರದೊಳಗೂ ಸಹ ಕಸ ಹಾಕಿದರೆ ದಂಡ ಹಾಗೂ ಜೈಲು ಶಿಕ್ಷೆ ಇದೆ ಎಂಬ ಅಂಶವನ್ನು ಮಾಧ್ಯಮಗಳಲ್ಲಿ ಪ್ರಕಟಣೆಗಳ ಮುಖಾಂತರ ಸಾರ್ವಜನಿಕವಾಗಿ ಎಚ್ಚರಿಕೆ ಸಂದೇಶವನ್ನು ನೀಡಬೇಕು ಎಂದು ಸಚಿವ ಸೋಮಶೇಖರ್ ಸೂಚಿಸಿದರು.
ಜನಸಂಪರ್ಕ ಸಭೆ ನಡೆಸಿ ಅಧಿಕಾರಿಗಳನ್ನು ಕರೆಸಿ ಎಲ್ಲ ರೀತಿಯಲ್ಲಿಯೂ ಏನೆಲ್ಲ ಕ್ರಮಗಳನ್ನು ತೆಗೆದುಕೊಳ್ಳಬಹುದು ಎಂಬ ಬಗ್ಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಬೇಕು. ಎಲ್ಲೆಂದರಲ್ಲಿ ಮಾಂಸ, ಕೋಳಿ ತ್ಯಾಜ್ಯಗಳ ಸುರಿಯುವವರನ್ನು ಗುರುತಿಸಿ ಅವರ ಚಲನವಲನಗಳ ಮೇಲೆನಿಗಾ ಇಡಬೇಕು. ಅವರು ಸೂಕ್ತ ಪ್ರದೇಶದಲ್ಲಿ ವಿಲೇವಾರಿ ಮಾಡದೆ ಎಲ್ಲೆಂದರಲ್ಲಿ ಕಸ ಸುರಿಯುತ್ತಿದ್ದರೆ ಎಚ್ಚರಿಕೆ ನೀಡಬೇಕು ಎಂದರು.
ಸಭೆಯಲ್ಲಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಶಾಸಕರಾದ ಜಿ.ಟಿ.ದೇವೇಗೌಡ, ಎಲ್.ನಾಗೇಂದ್ರ, ತನ್ವೀರ್ ಸೇಠ್, ಮುಡಾ ಅಧ್ಯಕ್ಷ ಎಚ್.ವಿ.ರಾಜೀವ್, ಪೊಲೀಸ್ ಆಯುಕ್ತ ಚಂದ್ರಗುಪ್ತ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಮುಡಾ ಆಯುಕ್ತ ಡಿ.ಬಿ.ನಟೇಶ್, ಮಹಾನಗರ ಪಾಲಿಕೆ ಆಯುಕ್ತ ಗುರುದತ್ ಹೆಗಡೆ ಸೇರಿದಂತೆ ಇತರ ಅಧಿಕಾರಿಗಳು ಇದ್ದರು.
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More
This website uses cookies.
Leave a Comment