Karnataka

ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ BMTC ಬಸ್ ನಲ್ಲಿ ಪ್ರಯಾಣ

ಬೆಂಗಳೂರು ಕೇಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿದ ಕುಂಬ್ಳೆ ಅವರಿಗೆ ವಿಮಾನ ನಿಲ್ದಾಣದ ಸಿಬ್ಬಂದಿ ಬೆಂಗಳೂರು ಬಂದ್ ಹಿನ್ನೆಲೆ ಕ್ಯಾಬ್ ಇಲ್ಲದಿರುವ ಮಾಹಿತಿ ನೀಡಿದ್ದಾರೆ. ಇದರಿಂದ ಬಿಎಂಟಿಸಿ ವಾಯುವಜ್ರ ಬಸ್ ಏರಿ ಅವರು ಮನೆ ಕಡೆ ತೆರಳಿದ್ದಾರೆ.

ತಮ್ಮ ಟ್ವೀಟ್‌ನಲ್ಲಿ, ಈ ಬಗ್ಗೆ ಸೆಲ್ಫಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ. ವಿಮಾನ ನಿಲ್ದಾಣದಿಂದ ಬಿಎಂಟಿಸಿಯಲ್ಲಿ ಪ್ರಯಾಣ ಮಾಡುತ್ತಿರುವುದಾಗಿ ಅದರಲ್ಲಿ ಬರೆದುಕೊಂಡಿದ್ದಾರೆ.

ಬೆಂಗಳೂರಿನ ಟ್ಯಾಕ್ಸಿ ಡ್ರೈವರ್ಸ್ ಯೂನಿಯನ್ ಮತ್ತು ವಿವಿಧ ಖಾಸಗಿ ಚಾಲಕರ ಸಂಘಗಳು ಆಯೋಜಿಸಿದ್ದ ಪ್ರತಿಭಟನೆಗಳ ನಡುವೆ ಈ ಟ್ವೀಟ್ ಬಂದಿದೆ. ರಾಜ್ಯದಲ್ಲಿ ಮಹಿಳೆಯರಿಗೆ ಉಚಿತ ಬಸ್ ಸೇವೆಗಳನ್ನು ಒದಗಿಸುವ ಶಕ್ತಿ ಯೋಜನೆಗೆ ಪ್ರತಿಕ್ರಿಯೆಯಾಗಿ ಅವರ ಪ್ರದರ್ಶನವಾಗಿತ್ತು.

ಆಟೋ , ಕ್ಯಾಬ್ ಚಾಲಕರ ಬೇಡಿಕೆ ಈಡೇರಿಸಲ್ಲ : ಸಿಎಂ ಸಿದ್ದರಾಮಯ್ಯ

ಪರಿಸ್ಥಿತಿಯನ್ನು ನಿರ್ವಹಿಸಲು ಮತ್ತು ಪ್ರಯಾಣಿಕರು ಎದುರಿಸುತ್ತಿರುವ ಅನಾನುಕೂಲತೆಯನ್ನು ನಿವಾರಿಸಲು, ಸರ್ಕಾರವು ದಿನವಿಡೀ ಹೆಚ್ಚುವರಿ ಬಸ್ ಮತ್ತು ಮೆಟ್ರೋ ಸೇವೆಗಳನ್ನು ಪರಿಚಯಿಸಿತು.

ಬಸ್‌ನಲ್ಲಿ ಕುಂಬ್ಳೆ ನಿಂತುಕೊಂಡೆ ಪ್ರಯಾಣ ಮಾಡಿರುವುದು ಬಸ್‌ಗಳಿಗೆ ಇದ್ದ ಡಿಮ್ಯಾಂಡ್ ನಿದರ್ಶನ ಎಂಬಂತಿದೆ. ಕ್ಯಾಬ್‌ಗಳಿಲ್ಲದ ಕಾರಣ ಬಹುತೇಕ ಪ್ರಯಾಣಿಕರು ಬಸ್‌ನತ್ತ ಮುಖ ಮಾಡಿದ್ದಾರೆ. ಕ್ಯಾಬ್‌ಗಳ ಬಂದ್ ಹಿನ್ನಲೆ ಯಲ್ಲಿ ಏರ್‌ಪೋರ್ಟ್‌ನಿಂದ ಬೆಂಗಳೂರಿಗೆ ಹೆಚ್ಚುವರಿ ವಾಯುವಜ್ರ ಬಸ್‌ಗಳನ್ನು ವ್ಯವಸ್ಥೆ ಮಾಡಲಾಗಿದೆ.

ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ BMTC ಬಸ್ ನಲ್ಲಿ ಪ್ರಯಾಣ – Former cricketer Anil Kumble traveled in BMTC bus #cricket #anilkumble #mysore #bengaluru

Team Newsnap
Leave a Comment
Share
Published by
Team Newsnap

Recent Posts

ಪಾದಚಾರಿಗಳ ಮೇಲೆ ಬೈಕ್ ಹರಿದು ನಾಲ್ವರು ಸಾವು

ವಿಜಯಪುರ: ಮೂತ್ರ ವಿಸರ್ಜನೆಗೆಂದು ರಸ್ತೆ ದಾಟುತ್ತಿದ್ದ ಯುವಕರ ಮೇಲೆ ಬೈಕ್ ಹರಿದು ಜಾತ್ರೆಗೆಂದು ಬಂದ ಯುವಕರು ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ… Read More

September 6, 2024

ಇದು ಸಮರ್ಥನೆಯಲ್ಲ..! ನೇರ ನುಡಿ..!

ಶಿಕ್ಷಣ ಮತ್ತು ವ್ಯವಸ್ಥೆ "ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣಾ ಮುಕುತಿ".. ಮೊದಲನೆಯಯದಾಗಿ ನನಗೆ ವಿದ್ಯೆ ಕಲಿಸಿ ಸಮಾಜದಲ್ಲಿ ಒಂದು ಉತ್ತಮವಾಗಿ… Read More

September 5, 2024

ಗುರು ಎಂಬೊ ಅರಿವಿನ ವಿಸ್ತಾರ….

'ಗುರುವಿನ ಗುಲಾಮನಾಗುವ ತನಕದೊರೆಯದಣ್ಣ ಮುಕುತಿ".ಎಂದು ಪುರಂದರದಾಸರು ಗುರುವಿನ ಮಹಿಮೆಯನ್ನು ಬಹು ಹಿಂದೆಯೇ ಹೇಳಿದ್ದಾರೆ,  ಪ್ರಾಚೀನ ಕಾಲದಲ್ಲಿ ಗುರು ತನ್ನ ಶಿಷ್ಯನಿಗೆ  ತನ್ನ… Read More

September 5, 2024

ನಿಸ್ವಾರ್ಥ ಜೀವಿ ಜ್ಞಾನದ ಭುವಿ

"ಗುರುವಿನ ಗುಲಾಮನಾಗುವ ತನಕ ದೊರೆಯದೆನ್ನ ಮುಕುತಿ"ಎಂಬಂತೆ ವಿದ್ಯಾರ್ಥಿಗಳು ಗುರುವಿನ ಗುಲಾಮನಾದಾಗಲೇ ಅಪ್ರತಿಮ ಬದುಕು ರೂಪಿಸಿಕೊಳ್ಳುವನು ಎಂಬುದು ಅಕ್ಷರಶಃ ಸತ್ಯ.ಅಕ್ಷರಗಳ ಕಲಿಸುತ… Read More

September 5, 2024

ಸಿದ್ದರಾಮಯ್ಯ ನ್ಯಾಯಾಲಯದ ತೀರ್ಪು ಬರುವ ಮೊದಲು ರಾಜೀನಾಮೆ ನೀಡಲಿ: ಬಿ ಎಸ್ ಯಡಿಯೂರಪ್ಪ

ಶಿವಮೊಗ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಯಾಲಯದ ತೀರ್ಪು ಬರುವ ಮೊದಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದು ಒಳ್ಳೆಯದು ಎಂದು ಮಾಜಿ ಸಿಎಂ… Read More

September 5, 2024

ಹೆಣ್ಣು ಮಗುವಿಗೆ ಜನ್ಮ ನೀಡಿದ ಮಿಲನಾ ನಾಗರಾಜ್ ಜೋಡಿ

ಮಿಲನಾ ನಾಗರಾಜ್ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ. ಈ ಸಂತಸದ ಸುದ್ದಿಯನ್ನು ಡಾರ್ಲಿಂಗ್… Read More

September 5, 2024