ಬಸ್ ನಿಲ್ದಾಣಗಳು, ಸಾರ್ವಜನಿಕ ಶೌಚಾಲಯಗಳು, ನೀರಿನ ಘಟಕಗಳ ಮೇಲೆ ರಾರಾಜಿಸುತ್ತಿದ್ದ ರಾಜಕೀಯ ನಾಯಕರ ಭಾವಚಿತ್ರಗಳಿಗೆ ಬ್ರೇಕ್ ಸಿಗಲಿದೆ. ಇಂತಹ ಫೋಟೊ ಹಾಕುವುದು ಅಥವಾ ಸಾರ್ವಜನಿಕ ಸ್ಥಳಗಳ ವಿರೂಪಕ್ಕೆ ಕಾರಣರಾದವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಬೆಂಗಳೂರು ಮಹಾನಗರ ಪಾಲಿಕೆ ಆಯುಕ್ತ ಎನ್.ಮಂಜುನಾಥ್ ಪ್ರಸಾದ್ ಸುತ್ತೋಲೆ ಹೊರಡಿಸಿದ್ದಾರೆ.
ಎಂಟು ವಲಯಗಳ ಜಂಟಿ ಆಯುಕ್ತರುಗಳು ಮತ್ತು ಮುಖ್ಯ ಎಂಜಿನಿಯರ್ಗಳಿಗೆ ಈ ರೀತಿಯ ಫೋಟೊ ಹಾಕುವವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಆಯುಕ್ತರು ಸೂಚನೆ ನೀಡಿದ್ದಾರೆ.
ಸಾಮಾಜಿಕ ಕಾರ್ಯಕರ್ತ ಸಾಯಿ ದತ್ತ ಅವರ ದೂರಿನ ಆಧಾರದ ಮೇಲೆ ಕ್ರಮ ಕೈಗೊಂಡಿರುವ ಆಯುಕ್ತ ಮಂಜುನಾಥ್ ಪ್ರಸಾದ್, ಈಗಾಗಲೇ ಸಾರ್ವಜನಿಕ ಸ್ಥಳಗಳಾದ ಬಸ್ ನಿಲ್ಧಾಣ, ಶೌಚಾಲಯ ಹಾಗೂ ನೀರಿನ ಘಟಕಗಳ ಮೇಲೆ ಹಾಕಿರುವ ಚುನಾಯಿತ ಪ್ರತಿನಿಧಿಗಳ ಫೋಟೋಗಳನ್ನು ತೆಗೆದುಹಾಕುವಂತೆ ಇದೆ ವೇಳೆ ಜಂಟಿ ಆಯುಕ್ತರು ಮತ್ತು ಮುಖ್ಯ ಎಂಜಿನಿಯರ್ಗಳಿಗೆ ಸೂಚನೆ ನೀಡಿದ್ದಾರೆ.
ಪಾಲಿಕೆ ಒದಗಿಸಿದ ಅಭಿವೃದ್ಧಿ ಯೋಜನೆಗಳು ಮತ್ತು ಸೌಕರ್ಯಗಳಿಗೆ ಸಂಬಂಧಿಸಿದ ಜಾಹೀರಾತುಗಳಲ್ಲಿ ಚುನಾಯಿತ ಪ್ರತಿನಿಧಿಗಳ ಛಾಯಾಚಿತ್ರಗಳನ್ನು ಪ್ರದರ್ಶಿಸಲು ಯಾವುದೇ ಅವಕಾಶವಿಲ್ಲ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಖಡಕ್ ವಾರ್ನಿಂಗ್ ನೀಡಿದ್ದಾರೆ.
ಎಲ್ಲದರೂ ಈ ರೀತಿಯ ಉಲ್ಲಂಘನೆ ನಡೆದರೆ, ಪೊಲೀಸ್ ಠಾಣೆಯಲ್ಲಿ 1981 ರ ಕರ್ನಾಟಕ ಸಾರ್ವಜನಿಕ ಸ್ಥಳಗಳ (ವಿರೂಪಗೊಳಿಸುವಿಕೆ ತಡೆಗಟ್ಟುವಿಕೆ) ಕಾಯ್ದೆಯಡಿ ಕ್ರಿಮಿನಲ್ ದೂರು ದಾಖಲಿಸುವಂತೆ ಅವರು ಜಂಟಿ ಆಯುಕ್ತರುಗಳು ಹಾಗೂ ಇಂಜಿನಿಯರ್ಗಳಿಗೆಗಳಿಗೆ ನಿರ್ದೇಶನ ನೀಡಿದ್ದಾರೆ.
ಹಾಸನ: 10 ವರ್ಷದ ಬಾಲಕನೊಬ್ಬ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನದ ಅಲೂರು ತಾಲೂಕಿನ ಚಿನ್ನಪುರದಲ್ಲಿ ನಡೆದಿದೆ. ಮೃತ ಬಾಲಕ ಸಚಿನ್… Read More
ಮೈಸೂರು: ಶುಕ್ರವಾರ ( 20-09-2024 ) ರಾತ್ರಿ ದಸರಾ ಗಜಪಡೆಯ ಆನೆ ಧನಂಜಯ ಮತ್ತೊಂದು ಆನೆ ಕಂಜನ್ ಮೇಲೆ ಏಕಾಏಕಿ… Read More
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More
This website uses cookies.
Leave a Comment