ಪ್ರಚಾರದ ವೇಳೆ ಮಾಜಿ ಡಿಸಿಎಂ ಪರಮೇಶ್ವರ್ ತಲೆಗೆ ಕಲ್ಲು ಎಸೆದ ದುಷ್ಕರ್ಮಿ : ಆಸ್ಪತ್ರೆಗೆ ದಾಖಲು

Team Newsnap
1 Min Read

ತುಮಕೂರು :

ಪ್ರಚಾರ ವೇಳೆ ಗುಂಪಿನಲ್ಲಿದ್ದ ದುಷ್ಕರ್ಮಿಯಿಂದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಮೇಲೆ ತಲೆಗೆ ಕಲ್ಲೆಸೆದಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಭೈರೇನಹಳ್ಳಿಯಲ್ಲಿ ನಡೆದಿದೆ.

ಪ್ರಚಾರ ವೇಳೆ ಜಿ. ಪರಮೇಶ್ವರ್​ರನ್ನು ಎತ್ತಿಕೊಂಡು ಕಾರ್ಯಕರ್ತರು ಕುಣಿಯುತ್ತಿದ್ದರು. ಈ ವೇಳೆ ಗುಂಪಿನಲ್ಲಿದ್ದ ದುಷ್ಕರ್ಮಿಯಿಂದ ಪರಮೇಶ್ವರ್​ ಮೇಲೆ ಕಲ್ಲೆಸೆದನು. ಇದರಿಂದ ಪರಮೇಶ್ವರ್ ತಲೆ ಏಟು ಬಿದ್ದು ರಕ್ತ ಸುರಿದಿದೆ

ರಕ್ತ ಸೋರುತ್ತಿದ್ದ ತಲೆಯನ್ನು ಹಿಡಿದುಕೊಂಡ ಜಿ. ಪರಮೇಶ್ವರ್​​ ಅವರನ್ನು​ ಅಕ್ಕಿರಾಂಪುರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ, ನಂತರ ತುಮಕೂರಿನ ಸಿದ್ದಾರ್ಥ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Share This Article
Leave a comment