ಕೃಷ್ಣ ನದಿ ದಡದಲ್ಲಿ ನೀರು ಕುಡಿಯಲು ಹೋಗಿದ್ದ ಬಾಲಕನನ್ನು ಎಳೆದುಕೊಂಡು ಹೋಗಿದ್ದ ಮೊಸಳೆ ಆತನನ್ನು ಕೊಂದು ತಿಂದಿದೆ.
ರಾಯಚೂರು ಜಿಲ್ಲೆಯ ಡೊಂಗ ರಾಮಪುರ ಗ್ರಾಮದ ಮಲ್ಲಿಕಾರ್ಜುನ (12) ಎಂಬ ಬಾಲಕನೇ ಬಲಿ ಯಾಗಿದ್ದಾನೆ.
ಬುಧವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ತನ್ನ ಐವರು ಗೆಳೆಯರೊಂದಿಗೆ ಕೃಷ್ಣ ನದಿ ತೀರಕ್ಕೆ ನೀರು ಕುಡಿಯಲು ಹೋದಾಗ ಮಲ್ಲಿಕಾರ್ಜುನನನ್ನು ಮೊಸಳೆ ಎಳೆದುಕೊಂಡು ಹೋಗಿತ್ತು. ನಿನ್ನೆ ಸಂಜೆಯವರೆಗೂ ಬಾಲಕನಿಗಾಗಿ ಹುಡುಕಾಟ ನಡೆಸಲಾಗಿತ್ತು. ಆದರೆ ಯಾವುದೇ ಸುಳಿವು ಸಿಕ್ಕಿರಲಿಲ್ಲ.
ಮಧ್ಯರಾತ್ರಿ ನಂತರ ಬಾಲಕನ ರುಂಡ ನದಿಯಲ್ಲಿ ತೇಲಿ ದಡಕ್ಕೆ ಬಂದು ಸೇರಿದ ನಂತರ ಬಲಿಯಾಗಿರುವುದು ದೃಢವಾಗಿದೆ.
ಬಾಲಕ ಸಾವಿಗೆ ಕುಟುಂಬದವರ ರೋಧನ ಹೆಚ್ಚಾಗಿದೆ. ಕೃಷ್ಣ ನದಿಯಲ್ಲಿ ಮೊಸಳೆಗಳ ಹಾವಳಿ ಹೆಚ್ಚಾಗಿದೆ ಎಂದು ಗ್ರಾಮಸ್ಥರು ಹಲವು ಬಾರಿ ದೂರು ನೀಡಿದರೂ ತಾಲೂಕು ಆಡಳಿತ ನಿರ್ಲಕ್ಷ್ಯ ತೋರಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ