ಒಂದೆಡೆ ಜಮೀನಿನಲ್ಲಿ ಬಿದ್ದಿರುವ ತೆಂಗಿನ ಗಿಡಗಳು . ಮತ್ತೊಂದೆಡೆ ಕಿತ್ತೆಸೆದಿರುವ ಟೊಮೆಟೋ ಸಸಿಗಳು.. ಇನ್ನೊಂದು ಕಡೆ ಕಣ್ಣೀರು ಹಾಕಿ ಗೋಳಾಡುತ್ತಿರುವ ರೈತರು..
ಇದನ್ನು ಓದಿ –ಚಿತ್ರನಟ ಮುಖ್ಯಮಂತ್ರಿ ಚಂದ್ರು ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆ
- ಈ ಮನಕಲಕುವ ದೃಶ್ಯಗಳು ಕಂಡುಬಂದಿದ್ದು ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಎ ಶ್ಯಾನುಬೋಗನಹಳ್ಳಿಯಲ್ಲಿ. ವೈಯಕ್ತಿಕ ದ್ವೇಷದಿಂದಾಗಿ
ಬೆಳೆ ನಾಶ ಮಾಡಿಕೊಂಡ ಎ ಶ್ಯಾನುಬೋಗನಹಳ್ಳಿ ಗ್ರಾಮದ ನಿವಾಸಿ ಶ್ರೀನಿವಾಸ್ ಕುಟುಂಬ ತಲೆ ಮೇಲೆ ಕೈಹೊತ್ತು ಕುಳಿತುಕೊಂಡಿದೆ.
1 ಎಕರೆ ಜಮೀನಿನಲ್ಲಿ ಬೆಳೆ ಬೆಳೆದು ಜೀವನ ಸಾಗಿಸುತ್ತಿದ್ದರು. ಆದರೀಗ ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆಯನ್ನು ನಾಶ ಮಾಡಿದ್ದು, ರೈತ ಕುಟುಂಬದ ಜೀವನ ಅತಂತ್ರವಾಗಿದ್ದು, ನ್ಯಾಯ ಕೊಡಿಸಿ ಎಂದು ಅಂಗಾಲಾಚಿದ್ದಾರೆ.
ಕುಟುಂಬಕ್ಕೂ ಬಹಿಷ್ಕಾರ :
ಈ ಜಮೀನಿನ ಮೇಲೆ ಕಣ್ಣು ಹಾಕಿದ್ದ ಗ್ರಾಮದ ಕೆಲವರು ಈ ವಿಚಾರವಾಗಿ ತಗಾದೆ ತೆಗೆದು ಜಮೀನು ಬಿಟ್ಟು ಕೊಡವಂತೆ ಕೇಳಿದ್ದರು. ಈ ವಿಚಾರದಲ್ಲಿ ಗ್ರಾಮದಲ್ಲಿ ಕೆಲವು ಬಾರಿ ಗಲಾಟೆ ಕೂಡ ನಡೆದು ರಾಜಿ ಪಂಚಾಯಿತಿ ಕೂಡ ಆಗಿತ್ತು. ಜಮೀನು ಬಿಟ್ಟು ಕೊಡಲು ಒಪ್ಪದಿದ್ದ ಈ ಕುಟುಂಬವನ್ನು ಹೇಗಾದರೂ ಮಾಡಿ ಗ್ರಾಮದಿಂದ ಓಡಿಸಿ ಈ ಜಮೀನು ಕಬಳಿಸಬೇಕೆಂದು ನಿರ್ಧರಿಸಿದ ಕೆಲವರು ಈ ಕುಟುಂಬಕ್ಕೆ ಗ್ರಾಮದಿಂದ ಬಹಿಷ್ಕಾರ ಹಾಕಿಸಿದ್ದಾರೆ.
ಬಹಿಷ್ಕಾರದ ಬಳಿಕ ಸೋಮವಾರ ರಾತ್ರಿ ಆ ರೈತ ಕುಟುಂಬ ವ್ಯವಸಾಯ ಮಾಡ್ತಿದ್ದ ಜಮೀನಿನಲ್ಲಿ ಬೆಳೆದಿದ್ದ 70 ತೆಂಗಿನ ಸಸಿಗಳು ಸೇರಿ 7 ಸಾವಿರ ಟೊಮೆಟೋ ಸಸಿಗಳನ್ನು ದುಷ್ಕರ್ಮಿಗಳು ನಾಶ ಮಾಡಿದ್ದಾರೆ. ಕಿಡಿಗೇಡಿಗಳ ದುಷ್ಕೃತ್ಯಕ್ಕೆ ರೈತ ಕುಟುಂಬ ಹಿಡಿಶಾಪ ಹಾಕುತ್ತಿದೆ.
ಈ ಘಟನೆ ಸಂಬಂಧ ನೊಂದ ರೈತ ಕುಟುಂಬ ನಾಗಮಂಗಲ ಗ್ರಾಮಾಂತರ ಪೊಲೀಸರಿಗೆ ದೂರು ನೀಡಿದೆ. ತಾಲೂಕು ಆಡಳಿತ ಸೇರಿ ಸ್ಥಳೀಯ ಶಾಸಕರಿಗೂ ನಮಗೆ ನ್ಯಾಯ ಕೊಡಿಸಿ ಎಂದು ಮನವಿ ಮಾಡಿದ್ದಾರೆ.
- KRS ಭರ್ತಿಗೆ 10 ಅಡಿ ಬಾಕಿ : ಜಲಾಶಯಕ್ಕೆ 29 ಸಾವಿರ ಕ್ಯೂಸೆಕ್ ಒಳಹರಿವು
- ಈ ವರ್ಷಾಂತ್ಯಕ್ಕೆ ಬೈಯಪ್ಪನಹಳ್ಳಿ- ವೈಟ್ಫೀಲ್ಡ್ ಮೆಟ್ರೋ ಸೇವೆ ಆರಂಭ
- ಚಂದ್ರಶೇಖರ ಗುರೂಜಿ ಮೂಲ ಬಾಗಲಕೋಟೆ, ವಾಸ ಮುಂಬೈ – ಸಾವಿರಾರು ಕೋಟಿ ಒಡೆಯನ ಅಂತ್ಯಕ್ರಿಯೆ ಇಂದು
- ಬೆಂಗಳೂರು ನಗರ ಮಾಜಿ DC ಮಂಜುನಾಥ್ ಫ್ಲ್ಯಾಟ್ ಮೇಲೆ ACB ದಾಳಿ: 30 ಎಕರೆ ಜಮೀನು ದಾಖಲೆ ಪತ್ತೆ
- ಗುರುವನ್ನೇ ಹತ್ಯೆ ಮಾಡಿದ ಇಬ್ಬರು ಪಾಪಿಗಳನ್ನು ಪೋಲಿಸರು ಬಂಧಿಸಿದ್ದೇ ರೋಚಕ ಕಥೆ
- ಅಗ್ನಿಪಥ್ ನೇಮಕಾತಿ ಅಗ್ನಿವೀರರ ನೌಕಾಪಡೆಯಲ್ಲಿ ಶೇ.20ರಷ್ಟು ಹುದ್ದೆ ಮಹಿಳೆಯರಿಗೆ ಮೀಸಲು
More Stories
KRS ಭರ್ತಿಗೆ 10 ಅಡಿ ಬಾಕಿ : ಜಲಾಶಯಕ್ಕೆ 29 ಸಾವಿರ ಕ್ಯೂಸೆಕ್ ಒಳಹರಿವು
ಈ ವರ್ಷಾಂತ್ಯಕ್ಕೆ ಬೈಯಪ್ಪನಹಳ್ಳಿ- ವೈಟ್ಫೀಲ್ಡ್ ಮೆಟ್ರೋ ಸೇವೆ ಆರಂಭ
ಚಂದ್ರಶೇಖರ ಗುರೂಜಿ ಮೂಲ ಬಾಗಲಕೋಟೆ, ವಾಸ ಮುಂಬೈ – ಸಾವಿರಾರು ಕೋಟಿ ಒಡೆಯನ ಅಂತ್ಯಕ್ರಿಯೆ ಇಂದು