ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್ ಶಾಸಕ ಶ್ರೀನಿವಾಸ್ ಗೌಡ ಅವರಿಂದ ಮೊದಲ ಅಡ್ಡ ಮತದಾನ ನಡೆದಿದೆ. ಜೆಡಿಎಸ್ ಶಾಸಕ ಶ್ರೀನಿವಾಸ ಗೌಡ ಅವರು ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿದ್ದಾರೆ.
ಇದನ್ನು ಓದಿ – ಬಿಜೆಪಿ ಜೊತೆ ಕಾಂಗ್ರೆಸ್ ಡೀಲ್ : ಸಿದ್ದರಾಮಯ್ಯ ಬಣ್ಣ ಬಯಲು – ಹೆಚ್ಡಿಕೆ ಬಾಂಬ್
ಜೆಡಿಎಸ್ನಲ್ಲಿ ಕೆಲ ಶಾಸಕರು ಅಡ್ಡ ಮತದಾನ ಮಾಡುತ್ತಾರೆ ಎಂಬ ವಿಚಾರ ಮೊದಲೇ ಸಿಕ್ಕಿತ್ತು. ಆದರೆ ಯಾರು ಅಡ್ಡ ಮತದಾನ ಮಾಡುತ್ತಾರೆ ಎನ್ನುವುದಷ್ಟೇ ಮುಖ್ಯವಾಗಿತ್ತು.
ಎಚ್ಡಿ ಕುಮಾರಸ್ವಾಮಿ ಮತ್ತು ಸಿಎಂ ಇಬ್ರಾಹಿಂ ಅವರು ಬೆಳಗ್ಗೆಯೇ ಶ್ರೀನಿವಾಸ ಗೌಡರನ್ನು ಕಾಂಗ್ರೆಸ್ ನಾಯಕರು ಭೇಟಿ ಮಾಡಿದ್ದಾರೆ ಎಂದು ತಿಳಿಸಿದ್ದರು.
ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಶುಕ್ರವಾರ ಬೆಳಗ್ಗೆ ಶ್ರೀನಿವಾಸ ಗೌಡರ ಮನೆಗೆ ಹೋಗಿ ಕೊನೆಯ ಹಂತದ ಮಾತುಕತೆ ನಡೆಸಿದ್ದರು.
ಮತದಾನಕ್ಕೂ ಮೊದಲು ನಾನು ಯಾರಿಗೆ ಮತ ಹಾಕುತ್ತೇನೆ ಎನ್ನುವುದನ್ನು ಈಗ ತಿಳಿಸುವುದಿಲ್ಲ ಎಂದಿದ್ದ ಶ್ರೀನಿವಾಸ ಗೌಡ ಮತ ಹಾಕಿದ ಬಳಿಕ ನೇರವಾಗಿ ಕಾಂಗ್ರೆಸ್ ಶಾಸಕರಿದ್ದ ಕಚೇರಿಗೆ ತೆರಳಿದರು.
- ಕೆಯುಡಬ್ಲ್ಯೂಜೆ ದತ್ತಿನಿಧಿ ಪ್ರಶಸ್ತಿಗಳು ಪ್ರಕಟ
- 3.55 ಕೋಟಿ ರೂ. ಮೌಲ್ಯದ 5 ಕೆಜಿ ಚಿನ್ನಾಭರಣ ಜಪ್ತಿ
- ಬೆಂಗಳೂರು-ಮೈಸೂರು ಹೆದ್ದಾರಿ ಟೋಲ್ ದರ ಏಪ್ರಿಲ್ 1 ರಿಂದ ಹೆಚ್ಚಳ
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಮುಡಾ ಮಾಜಿ ಅಧ್ಯಕ್ಷ ಎಚ್.ವಿ. ರಾಜೀವ್ ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರ್ಪಡೆ
- ಮುನಿಯಪ್ಪ ವಿರುದ್ಧ ಮುನಿಸು : ಓರ್ವ ಸಚಿವರೂ ಸೇರಿದಂತೆ ಐವರು ಶಾಸಕರ ರಾಜೀನಾಮೆ ?