ರಾಜ್ಯದಲ್ಲಿ ಸದ್ಯಕ್ಕೆ ಕೊರೊನಾ ಟಫ್​ ರೂಲ್ಸ್​ ಜಾರಿಯಿಲ್ಲ -ಸಿಎಂ ಬೊಮ್ಮಾಯಿ ಘೋಷಣೆ

Team Newsnap
1 Min Read

ರಾಜ್ಯದಲ್ಲಿ ಸದ್ಯಕ್ಕೆ ಯಾವುದೇ ಟಫ್​ ರೂಲ್ಸ್​ ಜಾರಿಯಿಲ್ಲ . ಆದರೆ ಕೊರೊನಾ ನಿಯಂತ್ರಣಕ್ಕೆ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಿಎಂ ಬೊಮ್ಮಾಯಿ ಘೋಷಣೆ ಮಾಡಿದರು.

ದೇಶದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿ ಹಾಗೂ ಪ್ರಮುಖ ಸಚಿವರ ಜೊತೆ ಮಹತ್ವದ ಮಾತುಕತೆ ನಡೆಸಿದರು.

ಈ ಸಭೆ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ರಾಜ್ಯದಲ್ಲಿ ಸದ್ಯಕ್ಕೆ ಟಫ್​ ರೂಲ್ಸ್​ ಜಾರಿಯಿಲ್ಲ. ಅನವಶ್ಯಕವಾಗಿ ಯಾವುದೇ ನಿರ್ಬಂಧ ಹೇರಿಕೆ ಬೇಡ. ಅಗತ್ಯವಿರುವೆಡೆ ನಿರ್ಬಂಧ ಹೇರಿಕೆ ಅಗತ್ಯ ಎಂದು ಮೋದಿ ತಿಳಿಸಿದ್ದಾರೆ.

ಲಸಿಕೆ ನೀಡಲು ಶಾಲೆಗಳಲ್ಲಿ ಅಭಿಯಾನ ಮಾಡುತ್ತೇವೆ. ಟೆಸ್ಟ್, ಟ್ರೀಟ್, ಟ್ರ್ಯಾಕ್‌, ಲಸಿಕೆ ಅನುಸರಿಸಲು ಹೇಳಿದ್ದಾರೆ ಎಂದು ತಿಳಿಸಿದರು.

ಮೋದಿ ಹೇಳಿದ ನಾಲ್ಕು ಸೂತ್ರ :

ನಾಲ್ಕು ಸೂತ್ರಗಳನ್ನು ಅನುಸರಿಸಲು ಪ್ರಧಾನಿ ಮೋದಿ ಹೇಳಿದ್ದಾರೆ.

1) ಕೋವಿಡ್‌ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು

2) ವ್ಯಾಕ್ಸಿನೇಷನ್​ ವೇಗ ಹೆಚ್ಚಿಸಲು ಸೂಚನೆ

3) ಸಾರ್ವಜನಿಕರು ಮಾಸ್ಕ್​​ ಕಡ್ಡಾಯವಾಗಿ ಧರಿಸಬೇಕು.

4)ಮುನ್ನೆಚ್ಚರಿಕೆ ಕ್ರಮ ಕೈಗೊಂಡು ಜೀವನ ನಡೆಸಬೇಕು. ಏರ್‌ಪೋರ್ಟ್‌ಗಳಲ್ಲಿ ಟೆಸ್ಟಿಂಗ್‌ ಹೆಚ್ಚಳ ಮಾಡುತ್ತೇವೆ.

Share This Article
Leave a comment