ಈ ಸಂಬಂಧ ಸರ್ಕಾರ ಆದೇಶ ಹೊರಡಿಸಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರ ಪ್ರಕರಣಗಳಿಗೆ ತಿದ್ದುಪಡಿ ಮತ್ತು ಗ್ರಾಮ ಪಂಚಾಯಿತಿ ನೌಕರರ ಸೇವಾ ವಿಷಯಗಳ ಕುರಿತು ಗ್ರಾಮೀಣಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಈಚೆಗೆ ನಡೆದ ಸಭೆಯಲ್ಲಿ ನಡಾವಳಿಗಳನ್ನು ರೂಪಿಸಿದೆ.ಇದನ್ನು ಓದಿ –ಮಂಡ್ಯದ ಚೀಣ್ಯ: ಕಾಂಗ್ರೆಸ್ ಫ್ಲೆಕ್ಸ್ನಲ್ಲಿ ಸಾವರ್ಕರ್ ಚಿತ್ರ
ಉದ್ಯೋಗ ಖಾತ್ರಿ, ವಿವಿಧ ವಸತಿ ಯೋಜನೆಗಳ ಅನುಷ್ಠಾನ, ಹಣಕಾಸಿನ ನಿಧಿ, ಪಂಚಾಯಿತಿ ತೆರಿಗೆ, ಖರ್ಚು- ವೆಚ್ಚಗಳ ಎಲ್ಲ ಚೆಕ್ಗಳಿಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಹಿಂದೆ ಕಾರ್ಯದರ್ಶಿ) ಹಾಗೂ ಅಧ್ಯಕ್ಷರ ಜಂಟಿ ಸಹಿ ಕಡ್ಡಾಯವಾಗಿತ್ತು.
ಈಗ ಸರ್ಕಾರ 2006ರಲ್ಲಿ ದತ್ತವಾದ ಅಧಿಕಾರವನ್ನು ಚಲಾಯಿಸಿ, ಅಧ್ಯಕ್ಷರ ಸಹಿ ಅಧಿಕಾರ ಹಿ೦ಪಡೆಯಲು ಹೊಸದಾಗಿ ನಡಾವಳಿ
ರೂಪಿಸಿದೆ.
ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ ನೀಡಲಾಗಿದ್ದ ಸಹಿ ಅಧಿಕಾರವನ್ನು ಹಿಂಪಡೆಯಲು ಸರ್ಕಾರ ಪ್ರಮುಖವಾಗಿ ಎರಡು ಕಾರಣಗಳನ್ನು ನೀಡಿದೆ. ಯೋಜನೆಗಳು, ಕಾರ್ಯಕ್ರಮಗಳ ಬಿಲ್ ಪಾವತಿ ಮಾಡಲು ಲಂಚ ಪಡೆಯುವಾಗ ರಾಜ್ಯದ ಹಲವು ಗ್ರಾಮ ಪಂಚಾಯಿತಿ ಅಧ್ಯಕ್ಷರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಹಲವು ಪ್ರಕರಣಗಳಲ್ಲಿ ವಿಳಂಬಳವಾಗಿ ಬಿಲ್ ಪಾವತಿ ಮಾಡುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ.
ಅಧ್ಯಕ್ಷರು ಚುನಾಯಿತ ಪ್ರತಿನಿಧಿಯಾಗಿದೆ ಹಣಕಾಸಿನ ವ್ಯವಹಾರಗಳಿಗೆ ಹೊಣೆಗಾರರಲ್ಲದ ಕಾರಣ ಸರ್ಕಾರಿ ನೌಕರರಾದ ಪಿಡಿಒ, ಎಸ್ಡಿಎಎ ನಿರ್ವ ಹಿಸಬೇಕು.
ಒಂದು ವೇಳೆ ಪಂಚಾಯಿತಿಗಳಲ್ಲಿ ಎಸ್ಡಿಎಎ ಸ್ಮಾನ ಖಾಲಿ ಇದ್ದರೆ, ಪಿಡಿಒ ಜತೆಗೆ ಕಾರ್ಯದರ್ಶಿ ಜಂಟಿ ಸಹಿ ಮಾಡಬೇಕು ಎಂದು ಸೂಚಿಸಲಾಗಿದೆ.
ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More
ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
This website uses cookies.
Leave a Comment